24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ನಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ನಾಳೆಯಿಂದ ಉಚಿತ ಎಕ್ಸೆಲ್ ಕನೆಕ್ಟ್ ಕ್ಲಾಸ್

ಗುರುವಾಯನಕೆರೆ:ಈ ಬಾರಿಯ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆ ಬರೆದು ಮುಗಿಸಿದ ವಿದ್ಯಾರ್ಥಿಗಳಿಗೆ ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜು ಅಪೂರ್ವ ಅವಕಾಶವೊಂದನ್ನು ಕಲ್ಪಿಸುತ್ತಿದೆ.
ಪಿಯುಸಿಯಲ್ಲಿ ವಿಜ್ಞಾನ ವಿಭಾಗ ಸೇರಿ ಮುಂದೆ ವೈದ್ಯಕೀಯ, ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್ ಗಳನ್ನು ಮಾಡಬೇಕೆಂದು ಬಯಸುವ ವಿದ್ಯಾರ್ಥಿಗಳಿಗೆ ಉಚಿತ ಫೌಂಡೇಶನ್ ಕೋರ್ಸ್ ನಡೆಸಲಿದೆ.

ನೀಟ್, ಜೆಇಇ ಮೈನ್ಸ್ ಮತ್ತು ಅಡ್ವಾನ್ಸ್, ಸಿಇಟಿ, ನಾಟಾ ಎನ್ ಡಿ ಎ, ಬಿಎಸ್ಸಿ ಅಗ್ರಿ ,ಫಾರೆನ್ಸಿಕ್ ಸೈನ್ಸ್ ಸೇರಿ ವಿಜ್ಞಾನ ವಿಭಾಗದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಾರ್ಚ್ 10 ರಿಂದ ಪ್ರತಿ ನಿತ್ಯ ಉಚಿತ ಫೌಂಡೇಶನ್ ತರಗತಿಗಳು ನಡೆಯಲಿವೆ. ಸಿಬಿಎಸ್ ಇ ಹಾಗೂ ಐಸಿಎಸ್ ಇ ತರಗತಿಗಳಿಗೆ ಈಗಾಗಲೇ ವಾರ್ಷಿಕ ಪರೀಕ್ಷೆ ಮುಗಿದಿರುವುದರಿಂದ ಮೊದಲ ಹಂತದಲ್ಲಿ ಸಿಬಿಎಸ್ ಇ ಹಾಗೂ ಐಸಿಎಸ್ ಈ ವಿದ್ಯಾರ್ಥಿಗಳಿಗೆ ತರಗತಿ ನಡೆಸಲಾಗುತ್ತದೆ.

ಎಸ್ ಎಸ್ ಎಲ್ ಸಿ ಪರೀಕ್ಷೆ ಮುಗಿದ ಬಳಿಕ ಸ್ಟೇಟ್ ಬೋರ್ಡ್ ಸಿಲೆಬಸ್ ನ ವಿದ್ಯಾರ್ಥಿಗಳಿಗೆ ಕೂಡಾ ಉಚಿತ ಎಕ್ಸೆಲ್ ಕನೆಕ್ಟ್ ತರಗತಿ ಗಳನ್ನು ನಡೆಸಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ವಿಶೇಷ ಜ್ಞಾನ ಹಾಗೂ ಪ್ರಾವೀಣ್ಯತೆಯಿರುವ, ಹಿರಿಯ ಪ್ರಾಧ್ಯಾಪಕರು ತರಗತಿ ನಡೆಸುವುದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ಅನುಕೂಲವಾಗಲಿದೆ.

ಪ್ರತಿ ನಿತ್ಯ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ1 ಗಂಟೆಯವರೆಗೆ ತರಗತಿ ನಡೆಯಲಿದೆ. ಮಧ್ಯಾಹ್ನ ಕಾಲೇಜು ಆವರಣದಲ್ಲಿ ಎಕ್ಸೆಲ್ ಕನೆಕ್ಟ್ ತರಗತಿಗೆ ಬರುವ ವಿದ್ಯಾರ್ಥಿಗಳಿಗೆ ಉಚಿತ ಊಟೋಪಚಾರ ವ್ಯವಸ್ಥೆ ಕಲ್ಪಿಸಲಾಗಿದೆ. ತಾಲೂಕಿನ ಎಲ್ಲಾ ಭಾಗದಿಂದಲೂ ಈ ವಿದ್ಯಾರ್ಥಿಗಳಿಗಾಗಿ ಉಚಿತ ಬಸ್ ವ್ಯವಸ್ಥೆಯನ್ನು ಕೂಡಾ ಮಾಡಲಾಗಿದೆ. ಹೆಚ್ಚಿನ ವಿವರಗಳಿಗೆ ಕಾಲೇಜು ಕಛೇರಿ 8867242769/ 9880899769 ಸಂಪರ್ಕಿಸಬಹುದು.

Related posts

ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹುಟ್ಟುಹಬ್ಬ: ನಾಗೇಶ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಕೊಕ್ಕಡ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ ಅಂಗನವಾಡಿ ಕೇಂದ್ರದಲ್ಲಿ ಆಚರಣೆ

Suddi Udaya

ಕುವೆಟ್ಟು ವರಕಬೆ ಸಮೀಪ ರಸ್ತೆಗೆ ತುಂಡಾಗಿ ಬಿದ್ದ ಎಚ್ ಟಿ‌ ಲೈನ್ ವಿದ್ಯುತ್ ವಯರ್: ವಾಹನ ಸಂಚಾರ ಅಸ್ತವ್ಯಸ್ತ

Suddi Udaya

ಉಜಿರೆ- ಬೆಳ್ತಂಗಡಿ ಟಿಬಿ ಕ್ರಾಸ್ ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ಉಗ್ರಾಹ ಮುಹೂರ್ತ, ವಿವಿಧ ಗ್ರಾಮಗಳಿಂದ ಆಗಮಿಸಿದ ತರಕಾರಿ, ಬೊಂಡ, ಅಕ್ಕಿ, ಅಡಿಕೆ, ತೆಂಗು ಸಮರ್ಪಣೆ,

Suddi Udaya

ಮಲೆಂಗಲ್ಲು ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭಾ ಕಾರ್ಯಕ್ರಮ: ಶ್ರದ್ಧಾ ಭಕ್ತಿಯಿಂದ ಭಗವಂತನನ್ನು ಆರಾಧಿಸಿ – ಶ್ರೀ ಡಾ.ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು

Suddi Udaya

ರಾಜ್ಯ ಸರಕಾರಿ ನೌಕರರ ಸಂಘ ಬೆಳ್ತಂಗಡಿ ಶಾಖೆಯ ಅಧ್ಯಕ್ಷ ಚುನಾವಣೆಗೆ ವಿಘ್ನ : ಪೊಲೀಸ್ ಠಾಣೆಯ ಮೇಟ್ಟಿಲೇರಿದ ಮತದಾರರ ಪಟ್ಟಿಯ ವಿವಾದ

Suddi Udaya
error: Content is protected !!