37.3 C
ಪುತ್ತೂರು, ಬೆಳ್ತಂಗಡಿ
March 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ, ಪೋಷಕರ ಸಭೆ

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಮಾ7ರಂದು ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಅಡಿಯಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ ಮತ್ತು ಪೋಷಕರ ಸಭೆಯನ್ನು ನಡೆಯಿತು.

ಕಾರ್ಯಕ್ರಮ ಸಭಾಧ್ಯಕ್ಷತೆಯನ್ನು ವಹಿಸಿದ್ದ ಬೆಳ್ತಂಗಡಿ ಗ್ರಾಮೀಣ ಉದ್ಯೋಗ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕಿ ಸಫಾನ ಮಾತನಾಡಿ ಮಕ್ಕಳನ್ನು ಮೊಬೈಲಿಂದ ದೂರವಿರಿಸಲು ಪೋಷಕರ ಸಹಕಾರ ಅಗತ್ಯ ಡ್ರಗ್ಸ್ ಧೂಮಪಾನ ಗಳಿಂದ ಎಚ್ಚರ ವಹಿಸಲು ಸಲಹೆ ನೀಡಿದರು.

ಮುಖ್ಯ ಅತಿಥಿ ನೋಡಲ್ ಅಧಿಕಾರಿ ಬೆಳ್ತಂಗಡಿ ಗ್ರಾಮೀಣ ಉದ್ಯೋಗ ತಾಲೂಕು ಪಂಚಾಯತ್ ರಾಜೀವ ಸಾಲಿಯನ್ ಮಾತನಾಡಿ ಪೋಷಕರೊಂದಿಗೆ ಉತ್ತಮ ಸಂವಾದ ಶಾಲೆ ಮತ್ತು ಸಮುದಾಯದಲ್ಲಿ ಪೋಷಕರ ಸಹಭಾಗಿತ್ವ, ವಿವಿಧ ಅನುದಾನಗಳ ಸದ್ಬಳಕೆ ಇತ್ಯಾದಿ ವಿಷಯಗಳ ಬಗ್ಗೆ ತಿಳಿಸಿದರು.

ವೇದಿಕೆಯಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಂತೋಷ್ ಶೆಟ್ಟಿ ಮದ್ದಡ್ಕ, ಉಪಾಧ್ಯಕ್ಷರು ನಸೀಮ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅರುಣ್ ಸುಮಿತ್, ಕಾರ್ಯದರ್ಶಿ ಸತೀಶ್ ದೇವಾಡಿಗ ಉಪಸ್ಥಿತರಿದ್ದರು.

ಗ್ರಾಮ ಸಂಪನ್ಮೂಲ ವ್ಯಕ್ತಿ ಲೀಲಾವತಿ ವರದಿ ಮಂಡಿಸಿದರು. ಮುಖ್ಯ ಶಿಕ್ಷಕಿ ಉಷಾ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಜಯರಾಜ ಜೈನ್ ಕಾರ್ಯಕ್ರಮ ನಿರೂಪಿಸಿದರು. ನಯನಾ.ಟಿ ಧನ್ಯವಾದ ನೀಡಿದರು. ಸಹಶಿಕ್ಷಕರು, ವಿದ್ಯಾರ್ಥಿಗಳು, ಅಡುಗೆ ಸಿಬ್ಬಂದಿ ವರ್ಗ ಸಹಕರಿಸಿದರು.

Related posts

ಧರ್ಮಸಂರಕ್ಷಣ ಯಾತ್ರೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಪ್ಲಾನ್” : : ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಈ ಸುದ್ದಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಬ್ಲಾಕ್ ಕಾಂಗ್ರೆಸ್ ಉಭಯ ಸಮಿತಿ ಅಧ್ಯಕ್ಷರುಗಳ ಸ್ಪಷ್ಟನೆ

Suddi Udaya

ಮದ್ದಡ್ಕ: ಸಬರಬೈಲುನಲ್ಲಿ ಹೊಂಡಕ್ಕೆ ಬಿದ್ದ ಲಾರಿ‌

Suddi Udaya

ತಣ್ಣೀರುಪoತ: ಬೈಕ್ ಗಳ ಮುಖಾಮುಖಿ ಡಿಕ್ಕಿ: ಓರ್ವ ಮೃತ್ಯು

Suddi Udaya

ಹೊಸಂಗಡಿ: ಗಾಳಿ ಮಳೆಗೆ 5 ಮನೆಗಳಿಗೆ ಹಾನಿ : ಸ್ಥಳಕ್ಕೆ ಪಂಚಾಯತು, ಕಂದಾಯ ಅಧಿಕಾರಿಗಳ ಭೇಟಿ

Suddi Udaya

ಸುಮಂತ್ ಕುಮಾರ್ ಜೈನ್ ರಿಂದ ದಿ ರೋಟರೀ ಇಂಟರ್ ನ್ಯಾಷನಲ್ ಫಂಡ್ ಗೆ ರೂ.90,000 ಕೊಡುಗೆ

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮದ ವಿಷಯದ ಕುರಿತು ಉಪನ್ಯಾಸ

Suddi Udaya
error: Content is protected !!