September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ, ಪೋಷಕರ ಸಭೆ

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಮಾ7ರಂದು ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಅಡಿಯಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ ಮತ್ತು ಪೋಷಕರ ಸಭೆಯನ್ನು ನಡೆಯಿತು.

ಕಾರ್ಯಕ್ರಮ ಸಭಾಧ್ಯಕ್ಷತೆಯನ್ನು ವಹಿಸಿದ್ದ ಬೆಳ್ತಂಗಡಿ ಗ್ರಾಮೀಣ ಉದ್ಯೋಗ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕಿ ಸಫಾನ ಮಾತನಾಡಿ ಮಕ್ಕಳನ್ನು ಮೊಬೈಲಿಂದ ದೂರವಿರಿಸಲು ಪೋಷಕರ ಸಹಕಾರ ಅಗತ್ಯ ಡ್ರಗ್ಸ್ ಧೂಮಪಾನ ಗಳಿಂದ ಎಚ್ಚರ ವಹಿಸಲು ಸಲಹೆ ನೀಡಿದರು.

ಮುಖ್ಯ ಅತಿಥಿ ನೋಡಲ್ ಅಧಿಕಾರಿ ಬೆಳ್ತಂಗಡಿ ಗ್ರಾಮೀಣ ಉದ್ಯೋಗ ತಾಲೂಕು ಪಂಚಾಯತ್ ರಾಜೀವ ಸಾಲಿಯನ್ ಮಾತನಾಡಿ ಪೋಷಕರೊಂದಿಗೆ ಉತ್ತಮ ಸಂವಾದ ಶಾಲೆ ಮತ್ತು ಸಮುದಾಯದಲ್ಲಿ ಪೋಷಕರ ಸಹಭಾಗಿತ್ವ, ವಿವಿಧ ಅನುದಾನಗಳ ಸದ್ಬಳಕೆ ಇತ್ಯಾದಿ ವಿಷಯಗಳ ಬಗ್ಗೆ ತಿಳಿಸಿದರು.

ವೇದಿಕೆಯಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಂತೋಷ್ ಶೆಟ್ಟಿ ಮದ್ದಡ್ಕ, ಉಪಾಧ್ಯಕ್ಷರು ನಸೀಮ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅರುಣ್ ಸುಮಿತ್, ಕಾರ್ಯದರ್ಶಿ ಸತೀಶ್ ದೇವಾಡಿಗ ಉಪಸ್ಥಿತರಿದ್ದರು.

ಗ್ರಾಮ ಸಂಪನ್ಮೂಲ ವ್ಯಕ್ತಿ ಲೀಲಾವತಿ ವರದಿ ಮಂಡಿಸಿದರು. ಮುಖ್ಯ ಶಿಕ್ಷಕಿ ಉಷಾ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಜಯರಾಜ ಜೈನ್ ಕಾರ್ಯಕ್ರಮ ನಿರೂಪಿಸಿದರು. ನಯನಾ.ಟಿ ಧನ್ಯವಾದ ನೀಡಿದರು. ಸಹಶಿಕ್ಷಕರು, ವಿದ್ಯಾರ್ಥಿಗಳು, ಅಡುಗೆ ಸಿಬ್ಬಂದಿ ವರ್ಗ ಸಹಕರಿಸಿದರು.

Related posts

ಸೆ.15: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಶ್ರೀ. ಕ್ಷೆ. ಧ. ಗ್ರಾ ಯೋಜನೆಯ ಬಜಿರೆ ಒಕ್ಕೂಟದ ಪದಗ್ರಹಣ ಹಾಗೂ 19ನೇ ವರ್ಷದ ಶನೇಶ್ವರ ಪೂಜೆಯ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಕರಿಮಣಿ ಸರ ಸಹಿತ ಅಗತ್ಯ ವಸ್ತುಗಳು ಕಳೆದು ಹೋಗಿದೆ: ಸಿಕ್ಕಿದವರು ಸಂಪರ್ಕಿಸುವಂತೆ ಮನವಿ

Suddi Udaya

ಗುರುವಾಯನಕೆರೆ ಅಂಗಡಿಯ ಬ್ಯಾನರ್ ಗೆ ಬೆಂಕಿ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘಕ್ಕೆ ಬೆಳ್ತಂಗಡಿಯಿಂದ ಐದು ಜನ ಆಯ್ಕೆ

Suddi Udaya

ಪ್ರಥಮ ಬಾರಿಗೆ ತಾಲೂಕಿನಲ್ಲಿ ಅಸ್ತಿತ್ವಕ್ಕೆ ಬಂದ ಕುಣಿತ ಭಜನೆಯ ತರಬೇತಿದಾರರ ಸಂಘದ ಸಂಚಾಲಕರಾಗಿ ಪಿ ಚಂದ್ರಶೇಖರ್ ಸಾಲ್ಯಾನ್ ಆಯ್ಕೆ

Suddi Udaya
error: Content is protected !!