26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಗುರುವಾಯನಕರೆ ಕೆಎಂಜೆ, ಎಸ್‌ವೈ‌ಎಸ್ ವತಿಯಿಂದ ರಂಝಾನ್ ಕಿಟ್ ವಿತರಣೆ

ಬೆಳ್ತಂಗಡಿ: ಕರ್ನಾಟಕ ಮುಸ್ಲಿಂ ಜಮಾಅತ್ ( ಕೆಎಂಜೆ) ಮತ್ತು ಸುನ್ನೀ ಯುವಜನ ಸಂಘ (ಎಸ್ ವೈ ಎಸ್) ಗುರುವಾಯನಕೆರೆ ಯೂನಿಟ್ ವತಿಯಿಂದ ನಡೆಸಲ್ಪಟ್ಟ ಸುಮಾರು ರೂ.2.50 ಲಕ್ಷ ವೆಚ್ಚದಲ್ಲಿ 121 ಆಯ್ದ ಅರ್ಹ ಮಧ್ಯಮವರ್ಗದ ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ ಹಾಗೂ “ಮಹ್ಲರತುಲ್ ಬದ್ರಿಯಾ ಮಜ್ಲಿಸ್” ಮತ್ತು ಬೃಹತ್ ಇಫ್ತಾರ್ ಮೀಟ್ ಗುರುವಾಯನಕರೆ ಶಾದಿ ಮಹಲ್ ನಲ್ಲಿ ನಡೆಸಲಾಯಿತು.

ಅಧ್ಯಕ್ಷತೆಯನ್ನು ಎಸ್ ವೈ ಎಸ್ ಗುರುವಾಯನಕೆರೆ ಯೂನಿಟ್ ಅಧ್ಯಕ್ಷ ಅನ್ಸಾರ್ ವಹಿಸಿದ್ದರು.

ಉದ್ಘಾಟನೆ ಹಾಗೂ ದುವಾ ಆಶೀರ್ವಚನವನ್ನು ಸಯ್ಯಿದ್ ಅಬ್ದುಲ್ ರಹಮಾನ್ ಸಾದಾತ್ ತಂಙಳ್ ನೆರವೇರಿಸಿದರು.

ಮಹ್ಲರತುಲ್ ಬದ್ರಿಯಾ ಮಜ್ಲಿಸ್ ನೇತೃತ್ವವನ್ನು ಸ್ಥಳೀಯ ಮುದರ್ರಿಸ್ ಜುನೈದ್ ಸಖಾಫಿ ವಹಿಸಿದ್ದರು. ಸ್ಥಳೀಯ ಖತೀಬ್ ಅಬ್ದುಲ್ ಬಾರಿ ಸ‌ಅದಿ ‘ತಂಝಿಲ್ ಆಫ್ ಕುರ್‌ಅನ್’ ತರಗತಿ ನಡೆಸಿಕೊಟ್ಟರು.

ದಾನಿಗಳಾದ ಯಾಕೂಬ್ ಮುಸ್ಲಿಯಾರ್ ಮೇಲಂತಬೆಟ್ಟು, ಹಾಜಿ ಮುಹಮ್ಮದ್ ಶರೀಫ್ ಜಿ.ಕೆ ಬಜಾರ್. ಸುಲ್ತಾನ್ ಗೋಲ್ಡ್ ಮೆನೇಜರ್ ಅಬ್ದುಲ್ ಸತ್ತಾರ್. ಹಾಗೂ ಶೇಕುಂಞಿ ಇವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಕೆಎಂಜೆ ಯೂನಿಟ್ ಅಧ್ಯಕ್ಷ ಮುತ್ತಲಿಬ್, ಕೆಎಂಜೆ ಸರ್ಕಲ್ ಅಧ್ಯಕ್ಷ ಹಮೀದ್ ಫುರ್ಕಾನಿ, ದರ್ಗಾ ಅಧ್ಯಕ್ಷ ಅಬ್ದುಲ್ ರಹಮಾನ್ ಹಾಜಿ, ಅಬ್ದುಲ್ ರಹಮಾನ್ ಸ‌ಅದಿ, ಅಬೂಬಕ್ಕರ್ ಸಿದ್ದೀಕ್ ಝುಹ್ರಿ, ಎಸ್ಎಂಎ ಅಧ್ಯಕ್ಷರ ಉಮಾರ್ ಮಟನ್. ಜಮಾತ್ ಕೋಶಾಧಿಕಾರಿ ಹಾಜಿ ಲತೀಫ್, ಎಸ್ ಎಸ್ ಎಫ್ ಡಿವಿಜನ್ ಅಧ್ಯಕ್ಷ ಇಸಾಕ್ ಅರ್ವ ಉಪಸ್ಥಿತರಿದ್ದರು.

ಎಸ್ ವೈ ಎಸ್ ಸರ್ಕಲ್ ಅಧ್ಯಕ್ಷ ಹಾಜಿ ಹಸೈನಾರ್, ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ: ಬೋಳಿಯರ್ ನಲ್ಲಿ ಪ್ರತ್ಯಕ್ಷವಾಗುತ್ತಿದೆ ಕಾಡಾನೆಗಳ ಹಿಂಡು

Suddi Udaya

ಪ್ರೌ.ಶಾಲೆ ಗೇರುಕಟ್ಟೆಯಲ್ಲಿ 2024-25ನೇ ಸಾಲಿನ SSLC ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳನ್ನು ಸನ್ಮಾನ. ಅಲ್ಲದೆ ಮಾದಕವಸ್ತು ದುರುಪಯೋಗ ತಡೆಗಟ್ಟುವಿಕೆ ಮಾಹಿತಿ ಕಾರ್ಯಗಾರ

Suddi Udaya

ಬೆಳ್ತಂಗಡಿ: ಡಾ. ಯೂಸುಫ್ ಕುಂಬ್ಲೆ ಅವರ ಫಾತಿಮಾ ಹೆಲ್ತ್ ಫೌಂಡೇಶನ್ ವತಿಯಿಂದ 35 ಕುಟುಂಬಕ್ಕೆ ಆಹಾರದ ಕಿಟ್ ವಿತರಣೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya

ಫೆ.1: ಭೂಸೇನೆಯಲ್ಲಿ 22 ವರ್ಷ ದೇಶ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಎ.ಸಿ.ಪಿ ಹವಾಲ್ದಾರ್ ದೇವಕುಮಾರ್ ಗೌಡರಿಗೆ ಹುಟ್ಟೂರಿನಲ್ಲಿ ಸ್ವಾಗತ ಅಭಿನಂದನಾ ಕಾರ್ಯಕ್ರಮ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿ ವಿಭಾಗದ ವಿದ್ಯಾರ್ಥಿ‌‌ಸಂಘ ಉದ್ಘಾಟನಾ ಸಮಾರಂಭದೊಂದಿಗೆ ಸ್ವಾಗತ ಕಾರ್ಯಕ್ರಮ

Suddi Udaya
error: Content is protected !!