25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಗುರುವಾಯನಕರೆ ಕೆಎಂಜೆ, ಎಸ್‌ವೈ‌ಎಸ್ ವತಿಯಿಂದ ರಂಝಾನ್ ಕಿಟ್ ವಿತರಣೆ

ಬೆಳ್ತಂಗಡಿ: ಕರ್ನಾಟಕ ಮುಸ್ಲಿಂ ಜಮಾಅತ್ ( ಕೆಎಂಜೆ) ಮತ್ತು ಸುನ್ನೀ ಯುವಜನ ಸಂಘ (ಎಸ್ ವೈ ಎಸ್) ಗುರುವಾಯನಕೆರೆ ಯೂನಿಟ್ ವತಿಯಿಂದ ನಡೆಸಲ್ಪಟ್ಟ ಸುಮಾರು ರೂ.2.50 ಲಕ್ಷ ವೆಚ್ಚದಲ್ಲಿ 121 ಆಯ್ದ ಅರ್ಹ ಮಧ್ಯಮವರ್ಗದ ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ ಹಾಗೂ “ಮಹ್ಲರತುಲ್ ಬದ್ರಿಯಾ ಮಜ್ಲಿಸ್” ಮತ್ತು ಬೃಹತ್ ಇಫ್ತಾರ್ ಮೀಟ್ ಗುರುವಾಯನಕರೆ ಶಾದಿ ಮಹಲ್ ನಲ್ಲಿ ನಡೆಸಲಾಯಿತು.

ಅಧ್ಯಕ್ಷತೆಯನ್ನು ಎಸ್ ವೈ ಎಸ್ ಗುರುವಾಯನಕೆರೆ ಯೂನಿಟ್ ಅಧ್ಯಕ್ಷ ಅನ್ಸಾರ್ ವಹಿಸಿದ್ದರು.

ಉದ್ಘಾಟನೆ ಹಾಗೂ ದುವಾ ಆಶೀರ್ವಚನವನ್ನು ಸಯ್ಯಿದ್ ಅಬ್ದುಲ್ ರಹಮಾನ್ ಸಾದಾತ್ ತಂಙಳ್ ನೆರವೇರಿಸಿದರು.

ಮಹ್ಲರತುಲ್ ಬದ್ರಿಯಾ ಮಜ್ಲಿಸ್ ನೇತೃತ್ವವನ್ನು ಸ್ಥಳೀಯ ಮುದರ್ರಿಸ್ ಜುನೈದ್ ಸಖಾಫಿ ವಹಿಸಿದ್ದರು. ಸ್ಥಳೀಯ ಖತೀಬ್ ಅಬ್ದುಲ್ ಬಾರಿ ಸ‌ಅದಿ ‘ತಂಝಿಲ್ ಆಫ್ ಕುರ್‌ಅನ್’ ತರಗತಿ ನಡೆಸಿಕೊಟ್ಟರು.

ದಾನಿಗಳಾದ ಯಾಕೂಬ್ ಮುಸ್ಲಿಯಾರ್ ಮೇಲಂತಬೆಟ್ಟು, ಹಾಜಿ ಮುಹಮ್ಮದ್ ಶರೀಫ್ ಜಿ.ಕೆ ಬಜಾರ್. ಸುಲ್ತಾನ್ ಗೋಲ್ಡ್ ಮೆನೇಜರ್ ಅಬ್ದುಲ್ ಸತ್ತಾರ್. ಹಾಗೂ ಶೇಕುಂಞಿ ಇವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಕೆಎಂಜೆ ಯೂನಿಟ್ ಅಧ್ಯಕ್ಷ ಮುತ್ತಲಿಬ್, ಕೆಎಂಜೆ ಸರ್ಕಲ್ ಅಧ್ಯಕ್ಷ ಹಮೀದ್ ಫುರ್ಕಾನಿ, ದರ್ಗಾ ಅಧ್ಯಕ್ಷ ಅಬ್ದುಲ್ ರಹಮಾನ್ ಹಾಜಿ, ಅಬ್ದುಲ್ ರಹಮಾನ್ ಸ‌ಅದಿ, ಅಬೂಬಕ್ಕರ್ ಸಿದ್ದೀಕ್ ಝುಹ್ರಿ, ಎಸ್ಎಂಎ ಅಧ್ಯಕ್ಷರ ಉಮಾರ್ ಮಟನ್. ಜಮಾತ್ ಕೋಶಾಧಿಕಾರಿ ಹಾಜಿ ಲತೀಫ್, ಎಸ್ ಎಸ್ ಎಫ್ ಡಿವಿಜನ್ ಅಧ್ಯಕ್ಷ ಇಸಾಕ್ ಅರ್ವ ಉಪಸ್ಥಿತರಿದ್ದರು.

ಎಸ್ ವೈ ಎಸ್ ಸರ್ಕಲ್ ಅಧ್ಯಕ್ಷ ಹಾಜಿ ಹಸೈನಾರ್, ಕಾರ್ಯಕ್ರಮ ನಿರೂಪಿಸಿದರು.

Related posts

ಲೋಕಸಭೆ ಚುನಾವಣೆ ಹಿನ್ನಲೆ: ಬೆಳ್ತಂಗಡಿ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕ‌ರ್ ಮತ್ತು ಪ.ಪಂ. ಮುಖ್ಯಾಧಿಕಾರಿ ರಾಜೇಶ್ ಕೆ. ವರ್ಗಾವಣೆ

Suddi Udaya

ಗುರುವಾಯನಕೆರೆ ಯರ್ಡೂರು ರಾಮನಗರದ ಮನೆಯೊಂದಕ್ಕೆಹಾಡುಹಗಲೇ ನುಗ್ಗಿದ ಕಳ್ಳರು: ರೂ.15 ಸಾವಿರ ನಗದು, 50 ಸಾವಿರ ಮೌಲ್ಯದ ಚಿನ್ನದ ಸರ ಕಳವು

Suddi Udaya

ಇತಿಹಾಸ ಪ್ರಸಿದ್ದ ನಿಡಿಗಲ್ ಸಿರಿಜಾತ್ರಾ ಮಹೋತ್ಸವದ ಅಧ್ಯಕ್ಷರಾಗಿ ಯಶೋಧರ ಗೌಡ ಗುರಿಪಳ್ಳ ಆಯ್ಕೆ

Suddi Udaya

ಮುಂಡಾಜೆ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ 5 ನೇ ಬಾರಿ ಆಯ್ಕೆ : ಉಪಾಧ್ಯಕ್ಷರಾಗಿ ಜಯಂತ ಗೌಡ ಎಂ.ಅವಿರೋಧ ಆಯ್ಕೆ

Suddi Udaya

ಫೆ.8: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ “ವಾಕ್-ಇನ್ ವಿದ್ವತ್”-ಎ ಸ್ಟೆಪ್ ಇಂಟು ಸಕ್ಸಸ್” :ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

Suddi Udaya

ಮಡಂತ್ಯಾರು: ಕೊಲ್ಪೆದಬೈಲು ಅತಿ೯ಲ ನಿವಾಸಿ ಜನಾನಂದ ಆಚಾರ್ಯ ನಿಧನ

Suddi Udaya
error: Content is protected !!