September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ತ್ಯಾಜ್ಯಗಳ ಡಂಪಿಂಗ್ ಯಾರ್ಡ್ ಆಗುತ್ತಿರುವ ಕೈಕಂಬ ಸೇತುವೆ…!!!

ಬೆಳ್ತಂಗಡಿ: ಜನರು ವಿದ್ಯಾವಂತರು , ಬುದ್ದಿವಂತರು ಆದಷ್ಟು ನಾಗರಿಕ ಸಮಾಜದಲ್ಲಿ ಅನಾಗರಿಕರಂತೆ ವರ್ತನೆ ಹೆಚ್ಚುತ್ತಿದೆ ಎಂಬುದಕ್ಕೆ ಉತ್ತಮ ಉದಾಹರಣೆ ನಾವೂರು ಗ್ರಾಮದ ಕೈಕಂಬ ಸೇತುವೆ. ದಿನನಿತ್ಯ ಬಳಕೆಯ ತ್ಯಾಜ್ಯಗಳನ್ನು ತಂದು ಸೇತುವೆ ಕೆಳಗೆ ಹರಿಯುವ ನದಿ ನೀರಿಗೆ ಸುರಿಯುವುದು ಇಲ್ಲಿ ಮಾಮೂಲು ಆಗಿದೆ.

ಸ್ಥಳೀಯವಾಗಿ ನಡೆಯುವ ಕಾರ್ಯಕ್ರಮದಲ್ಲಿ ಉಪಯೋಗಿಸುವ ಪ್ಲಾಸ್ಟಿಕ್ , ಹಾಳೆ ತಟ್ಟೆಗಳು , ಪ್ಲಾಸ್ಟಿಕ್ ಚೀಲಗಳು , ಬಾಟಲ್ ಗಳು , ಲೋಟಗಳು , ಬಿಯರ್ ಬಾಟಲ್ ಗಳು , ಮಹಿಳೆಯರು ಬಳಸುವ ಪ್ಯಾಡ್ , ಮಕ್ಕಳು ಮತ್ತು ಹಾಸಿಗೆ ಹಿಡಿದಿರುವವರ ಪ್ಯಾಂಪರ್ಸ್ ಸೇರಿದಂತೆ ಸೆಲೂನ್ ಗಳಲ್ಲಿ ಕತ್ತರಿಸಿದ ತಲೆಗೂದಲನ್ನು ಗೋಣಿಯಲ್ಲಿ ತಂದು ಇಲ್ಲಿ ಸುರಿಯುತ್ತಾರೆ. ಒಟ್ಟಾರೆಯಾಗಿ ಕೈಕಂಬ ಸೇತುವೆಯ ನದಿ ತೀರ ತ್ಯಾಜ್ಯಗಳ ಡಂಪಿಂಗ್ ಯಾರ್ಡ್ ಆಗಿ ಪರಿವರ್ತನೆಗೊಳ್ಳುತ್ತಿದೆಯೇ ಎಂಬ ಸಂಶಯ ಉಂಟಾಗುವಂತಿದೆ.

ಸ್ವಚ್ಛ ಭಾರತ ಸೇರಿದಂತೆ ಹತ್ತಾರು ಕಾನೂನು , ಯೋಜನೆಗಳು ಜಾರಿಯಲ್ಲಿದ್ದರೂ ಗಾಂಧಿ ಜಯಂತಿಯಂದು ಮಾತ್ರ ಒಂದು ದಿನಕ್ಕೆ ಸ್ವಚ್ಚತಾ ಕಾರ್ಯ ಸೀಮಿತವಾಗಿದೆ. ಗ್ರಾಮ ಪಂಚಾಯತ್ ಗಳು ಸ್ವಚ್ಚತೆಗಾಗಿ ವರ್ಷಕ್ಕೆ ಲಕ್ಷಾಂತರ ರೂಪಾಯಿ ಖರ್ಚು ಮಾಡುತ್ತಿದ್ದರೂ ನಮ್ಮ ವಿದ್ಯಾವಂತ, ಬುದ್ದಿವಂತ ಜನರು ಮಾತ್ರ ತ್ಯಾಜ್ಯಗಳನ್ನು ನದಿ, ಸೇತುವೆ, ರಸ್ತೆ ಬದಿಯಲ್ಲಿ ಎಸೆಯುತ್ತಾ ಸ್ವಚ್ಛತೆಗೆ ಸವಾಲು ಹಾಕುವ ನೀಚತನ ಪ್ರದರ್ಶಿಸುತ್ತಾರೆ. ಗ್ರಾಮ ಪಂಚಾಯತ್ ಗಳು ಕಸ ಬಿಸಾಡುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲು ಅಗತ್ಯವಿರುವ ಕಡೆಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿದರೆ ಮಾತ್ರ ಸ್ವಚ್ಛ ಭಾರತ ಪರಿಕಲ್ಪನೆ ಗ್ರಾಮೀಣ ಪ್ರದೇಶಗಳಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಲು ಸಾಧ್ಯ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

Related posts

ಬಳಂಜ ವಾಲಿಬಾಲ್ ಕ್ಲಬ್ ಗೆ ಸುರೇಶ್ ಪೂಜಾರಿ ಹೇವರವರಿಂದ ಚಾಂಪಿಯನ್ ಟ್ರೋಫಿ ಹಸ್ತಾಂತರ

Suddi Udaya

ಕಲ್ಮಂಜ ಮಿಯಾ ನಿವಾಸಿ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ : ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಶ್ರೀರಾಮ ಕ್ರೆಡಿಟ್ ಕೋ ಆಪರೇಟ್ ಸೊಸೈಟಿನಲ್ಲಿ ಗ್ರಾಹಕರ ಹಣ ವಂಚನೆ ಪ್ರಕರಣ: ತನಿಖೆಗಾಗಿ ಬ್ಯಾಂಕಿಗೆ ಎಂಟ್ರಿಯಾದ ಸಿಐಡಿ ತಂಡ

Suddi Udaya

ರೆಖ್ಯ : 24 ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ

Suddi Udaya

ಮಚ್ಚಿನ: ಕುತ್ತಿನ ಸರಕಾರಿ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮಡಂತ್ಯಾರು: ಬಂಗೇರಕಟ್ಟ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದ ಮಕ್ಕಳ ಬಾಲ ಮೇಳ ಕಾರ್ಯಕ್ರಮ

Suddi Udaya
error: Content is protected !!