ಬೆಳ್ತಂಗಡಿ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ “ಮೌನವಲ್ಲ ಹೋರಾಟ, ಮಹಿಳೆಯರಿಗೆ ನ್ಯಾಯ” ಎಂಬ ಸಂದೇಶದೊಂದಿಗೆ ಮಾನವೀಯತೆ ಮತ್ತು ಸಾಮಾಜಿಕ ಜವಾಬ್ದಾರಿಯ ಸಂಕೇತವಾಗಿ ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣುಹಂಪಲುಗಳನ್ನು ವಿತರಿಸುವ ಮೂಲಕ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷೆ ಶಮಾ ಅಲಿ ಹಾಗೂ ಕ್ಷೇತ್ರ ಸಮಿತಿ ಸದಸ್ಯರಾದ ಹಸೀನಾ, ಅಸ್ಮಾ, ಸಫ್ರಾ ಮತ್ತು ರಮ್ಲತ್ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿ, ಅವರಿಗೆ ಹಣ್ಣುಹಂಪಲುಗಳನ್ನು ವಿತರಿಸಿದರು.












