September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಮಾ 11: ಉಜಿರೆ ಬ್ರಹ್ಮಕಲಶೋತ್ಸವ: “ಧರ್ಮಯಾನ “ಐತಿಹಾಸಿಕ ಶೋಭಾಯಾತ್ರೆ-ಪ್ರಚಾರ ವಾಹನ ಅಭಿಯಾನಕ್ಕೆ ಚಾಲನೆ

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಸು ಸಂದರ್ಭದಲ್ಲಿ ಮಾ 11 ರಂದು ಸಂಜೆ ಉಜಿರೆಯ ಐತಿಹಾಸಿಕ ಶೋಭಾಯಾತ್ರೆ “ಧರ್ಮಯಾನ ” ನಡೆಯಲಿದ್ದು ಅದರ ಪ್ರಚಾರವಾಹನ ಅಭಿಯಾನಕ್ಕೆ ಮಾ 7 ರಂದು ಮದ್ಯಾಹ್ನ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಥಬೀದಿಯಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರು ಶುಭ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರತಾಪಸಿಂಹ ನಾಯಕ್,ವಿಜಯಗೋಪುರ ನಿರ್ಮಾಣ ಸಮಿತಿ ಅಧ್ಯಕ್ಷ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಶಶಿಧರ ಶೆಟ್ಟಿ ನವಶಕ್ತಿ, ಧರ್ಮಯಾನ ಶೋಭಾಯಾತ್ರೆಯ ಸಂಯೋಜಕ, ಪ್ರಧಾನ ಸಂಚಾಲಕ ಕೆ. ಮೋಹನ ಕುಮಾರ್ ,ಕೆ.ಮೋಹನ ಶೆಟ್ಟಿಗಾರ್, ರವೀಂದ್ರ ಶೆಟ್ಟಿ ಸುರಭಿ, ಚಿತ್ರೇಶ್ ಶೆಟ್ಟಿ, ರವಿಕುಮಾರ್ ಬರಮೇಲು , ಡಾ. ಶ್ರೀಧರ ಭಟ್, ಮಂಜುನಾಥ ಕಾಮತ್, ಪ್ರಸಾದ್ ಬಿ ಎಸ್, ದಿನೇಶ್ ಕೋಟಿಯಾನ್, ವಿಶ್ವನಾಥ್ ಶೆಟ್ಟಿ, ದೇವಪ್ಪ ಗೌಡ ಮೊದಲಾದವರು ಉಪಸ್ಥಿತರಿದ್ದರು.

ಧರ್ಮದ ನೆಲೆಬೀಡು ಧರ್ಮಸ್ಥಳದ ಧರ್ಮಾಧಿಕಾರಿ ಡಾ!ಡಿ ವೀರೇಂದ್ರ ಹೆಗ್ಗಡೆಯವರು ಧರ್ಮದೇವತೆಗಳ ಪ್ರತಿನಿಧಿಯಾಗಿ ಉಜಿರೆ ಶ್ರೀ ಜನಾರ್ದನ ಕ್ಷೇತ್ರಕ್ಕೆ ಬ್ರಹ್ಮಕಲಶೋತ್ಸವದ ಸಂಭ್ರಮದ ಸುದಿನದಂದು ಉಜಿರೆಗೆ ಆಗಮಿಸುವ ಸಂದರ್ಭದಲ್ಲಿ ಧರ್ಮಯಾತ್ರೆ ಉಜಿರೆಯ ಭಕ್ತರ ಪಾಲಿಗೆ ಅಧ್ಯಾತ್ಮ ಯಾತ್ರೆ ಅವಿಸ್ಮರಣೀಯ ಮಧುರ ಕ್ಷಣವಾಗಲಿದೆ. ಧರ್ಮಸ್ಥಳಕ್ಕೂ ಉಜಿರೆಗೂ ಇರುವ ಅವಿನಾಭಾವ ಸಂಬಂಧವನ್ನು ಬೆಸೆಯುವ ಮತ್ತೊಂದು ಮಹಾಪರ್ವವಾಗಲಿದೆ. ನೂತನ ರಥದಲ್ಲಿ ಉಭಯ ದೇವರ ಬ್ರಹ್ಮರಥೋತ್ಸವವನ್ನು ಸಹಸ್ರ ಸಹಸ್ರ ಭಕ್ತಾದಿಗಳು ಕಣ್ತುಂಬಿಕೊಳ್ಳುವ ಅಪೂರ್ವ ಕ್ಷಣಕ್ಕಾಗಿ ಕಾತುರರಾಗಿದ್ದಾರೆ. ಮಾ 11 ರಂದು ಅಪರಾಹ್ನ ೪ರಿಂದ ಉಜಿರೆ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಿಂದ ಶ್ರೀ ಜನಾರ್ದನ ದೇವಸ್ಥಾನದ ವರೆಗೆ ನಡೆಯಲಿರುವ ಧರ್ಮಯಾನ ಶೋಭಾಯಾತ್ರೆಯಲ್ಲಿ ಸರ್ವಾಲಂಕೃತ ಮೂರು ರಥಗಳಲ್ಲಿ ಧರ್ಮಾಧಿಕಾರಿ ಡಾ!ಡಿ.ವೀರೇಂದ್ರ ಹೆಗ್ಗಡೆಯವರು, ಉಡುಪಿ ಸೋದೆ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಗಳವರು , ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳವರು ಹಾಗು ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರನ್ನು ಮೆರವಣಿಗೆಯಲ್ಲಿ ಬರಮಾಡಿಕೊಳ್ಳಲಾಗುವುದು. ಧರ್ಮಯಾನ ಶೋಭಾಯಾತ್ರೆಯಲ್ಲಿ ಸಾವಿರಕ್ಕೂ ಮಿಕ್ಕಿ ಶ್ರೇಷ್ಠ ಕಲಾವಿದರನ್ನೊಳಗೊಂಡ, 25 ಸಾವಿರಕ್ಕೂ ಮಿಕ್ಕಿ ಭಕ್ತಾದಿಗಳು ಪಾಲ್ಗೊಳ್ಳುವಿಕೆ ನಿರೀಕ್ಷೆಯಿದೆ.

ಗ್ರಾಮಾಭಿವೃದ್ಧಿಯೋಜನೆಯ ಕಾರ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್ ಎಸ್ ಮತ್ತು ಶಶಿಧರ್ ಶೆಟ್ಟಿ ನವಶಕ್ತಿ ಹಾಗು ಎಸ್ ಡಿ ಎಂ ಶಿ ಕ್ಷ ಣ ಸಂಸ್ಥೆಯ ಕಾರ್ಯದರ್ಶಿ ಡಾ!ಸತೀಶ್ಚಂದ್ರ ಎಸ್. ಅವರ ಸಹಕಾರದೊಂದಿಗೆ ನಡೆಯಲಿದ್ದು ಸಮಸ್ತ ಭಕ್ತಾದಿಗಳು ಸಂಭ್ರಮದ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಅಡುಗೆ ಕೆಲಸಕ್ಕೆ ಹೋದ ಮುಂಡಾಜೆ ಕೂಳೂರು ಶಾರದಾ ನಗರ ನಿವಾಸಿ ರಾಘವೇಂದ್ರ ಮೆಹಂದಳೆ ನಾಪತ್ತೆ: ಪತ್ನಿಯಿಂದ ಪೊಲೀಸರಿಗೆ ದೂರು

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರೌಢ ವಿಭಾಗದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

Suddi Udaya

ರೆಖ್ಯ: ಹೆದ್ದಾರಿ ಪರಕ್ಕಳದಲ್ಲಿ ಲಾರಿ ಪಲ್ಟಿ

Suddi Udaya

ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ರವರಿಗೆ ಮಂತ್ರಾಲಯಂ ಪರಿಮಳ ಪ್ರಶಸ್ತಿ ಪ್ರದಾನ

Suddi Udaya

ನಾಳ: ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶಾರದೋತ್ಸವ ವಿಸರ್ಜನಾ ಕಾರ್ಯಕ್ರಮ

Suddi Udaya
error: Content is protected !!