35.1 C
ಪುತ್ತೂರು, ಬೆಳ್ತಂಗಡಿ
March 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೋಟರಿ ಕ್ಲಬ್ ಹಾಗೂ ಕಾನ್ ಫಿನ್ ಹೋಮ್ಸ್ ಸಹಕಾರದಲ್ಲಿ ಸಿಯೋನ್ ಆಶ್ರಮದ ನಿವಾಸಿಗಳಿಗೆ 135 ಮಂಚಗಳು ಹಾಗೂ ಹಾಸಿಗೆ ಸಾಮಗ್ರಿಗಳ ಕೊಡುಗೆ

ಬೆಳ್ತಂಗಡಿ: ಸಿಯೋನ್ ಆಶ್ರಮದ ನಿವಾಸಿಗಳ ಸುಖಕರ ವಾಸ್ತವ್ಯಕ್ಕಾಗಿ ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರೋಟರಿ ಕ್ಲಬ್ ಇಂದಿರಾನಗರ (ಬೆಂಗಳೂರು) ಅವರ ಮುಂದಾಳತ್ವದಲ್ಲಿ ಕಾನ್ ಫಿನ್ ಹೋಮ್ಸ್ ಲಿಮಿಟೆಡ್ ವತಿಯಿಂದ ಒಟ್ಟು 135 ಮಂಚಗಳು, ಹಾಸಿಗೆಗಳು, ಬೆಡ್‌ಶೀಟ್‌ಗಳು ಮತ್ತು ತಲೆದಿಂಬುಗಳು ಕೊಡುಗೆಯಾಗಿ ಮಾ.6ರಂದು ನೀಡಲಾಯಿತು.

ಕಾರ್ಯಕ್ರಮವನ್ನು ಕಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಂಸ್ಥೆಯ ಡೆಪ್ಯೂಟಿ ಜನರಲ್ ಮ್ಯಾನೇಜರ್ ಪ್ರಶಾಂತ್ ಜೋಯಿಷಿ ಉದ್ಘಾಟಿಸಿ, ಅಶಕ್ತರು, ಅನಾಥರು ಹಾಗೂ ನಿರಾಶ್ರಿತರಿಗೆ ಆಶ್ರಯ ಮತ್ತು ಆರೈಕೆ ನೀಡುತ್ತಿರುವ ಸಿಯೋನ್ ಆಶ್ರಮದ ಮಹತ್ತರ ಸೇವೆಯನ್ನು ಶ್ಲಾಘಿಸಿದರು. ಜೊತೆಗೆ ಸಂಸ್ಥೆಯ ಮುಂದಿನ ಅಭಿವೃದ್ಧಿ ಹಾಗೂ ಸೇವಾ ಕಾರ್ಯಗಳಿಗೆ ಶುಭಾಶಯಗಳನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಡಾ. ಯು.ಸಿ. ಪೌಲೋಸ್, ರೋಟರಿ ಕ್ಲಬ್ ಅಧ್ಯಕ್ಷ ಶ್ರೀ ಪ್ರಕಾಶ್ ಪ್ರಭು, ಹಿಂದಿನ ಅಧ್ಯಕ್ಷ ಶ್ರೀ ಅನಂತ ಭಟ್ ಮಚ್ಚಿಮಲೆ, ರೋಟರಿ ಪ್ರಾಜೆಕ್ಟ್ ಚೇರ್ಮನ್ ಶ್ರೀ ಅಬುಬಕ್ಕರ್, ಸಂಸ್ಥೆಯ ಟ್ರಸ್ಟಿ ಸದಸ್ಯೆ ಶ್ರೀಮತಿ ಮೇರಿ ಯು.ಪಿ., ಆಡಳಿತಾಧಿಕಾರಿ ಶೋಭಾ ಯು.ಪಿ., ಲೆಕ್ಕಾಧಿಕಾರಿ ಸೌಮ್ಯ ಯು.ಪಿ., ಸಂಸ್ಥೆಯ ಆಡಳಿತ ವರ್ಗದವರು, ಸಿಬ್ಬಂದಿ ವರ್ಗ ಹಾಗೂ ಆಶ್ರಮದ ನಿವಾಸಿಗಳು ಉಪಸ್ಥಿತರಿದ್ದರು.

Related posts

ವಾಣಿ ಕಾಲೇಜಿನ ಪರಂಪರಾ ವೇದಿಕೆಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಕೊಕ್ಕಡ: ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರರಿಗೆ ಗಾಯ

Suddi Udaya

ಬೆಳ್ತಂಗಡಿ ತಾಲೂಕು ರಾಜ ಕೇಸರಿ ಟ್ರಸ್ಟಿನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಮೂಡಿಗೆರೆ ತಾಲೂಕಿಗೆ ಎಳನೀರಿನ ಅಧಿತಿ ಪಿ ಜೈನ್ ಪ್ರಥಮ

Suddi Udaya

ಬೆಳ್ತಂಗಡಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯಲ್ಲಿ ಜುಂಬಾ ಫಿಟ್ನೆಸ್ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ವತಿಯಿಂದ ಮುಂಗಾರು ಪೂರ್ವ ಸಿದ್ಧತಾ ಸಭೆ

Suddi Udaya
error: Content is protected !!