September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೋಟರಿ ಕ್ಲಬ್ ಹಾಗೂ ಕಾನ್ ಫಿನ್ ಹೋಮ್ಸ್ ಸಹಕಾರದಲ್ಲಿ ಸಿಯೋನ್ ಆಶ್ರಮದ ನಿವಾಸಿಗಳಿಗೆ 135 ಮಂಚಗಳು ಹಾಗೂ ಹಾಸಿಗೆ ಸಾಮಗ್ರಿಗಳ ಕೊಡುಗೆ

ಬೆಳ್ತಂಗಡಿ: ಸಿಯೋನ್ ಆಶ್ರಮದ ನಿವಾಸಿಗಳ ಸುಖಕರ ವಾಸ್ತವ್ಯಕ್ಕಾಗಿ ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರೋಟರಿ ಕ್ಲಬ್ ಇಂದಿರಾನಗರ (ಬೆಂಗಳೂರು) ಅವರ ಮುಂದಾಳತ್ವದಲ್ಲಿ ಕಾನ್ ಫಿನ್ ಹೋಮ್ಸ್ ಲಿಮಿಟೆಡ್ ವತಿಯಿಂದ ಒಟ್ಟು 135 ಮಂಚಗಳು, ಹಾಸಿಗೆಗಳು, ಬೆಡ್‌ಶೀಟ್‌ಗಳು ಮತ್ತು ತಲೆದಿಂಬುಗಳು ಕೊಡುಗೆಯಾಗಿ ಮಾ.6ರಂದು ನೀಡಲಾಯಿತು.

ಕಾರ್ಯಕ್ರಮವನ್ನು ಕಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಂಸ್ಥೆಯ ಡೆಪ್ಯೂಟಿ ಜನರಲ್ ಮ್ಯಾನೇಜರ್ ಪ್ರಶಾಂತ್ ಜೋಯಿಷಿ ಉದ್ಘಾಟಿಸಿ, ಅಶಕ್ತರು, ಅನಾಥರು ಹಾಗೂ ನಿರಾಶ್ರಿತರಿಗೆ ಆಶ್ರಯ ಮತ್ತು ಆರೈಕೆ ನೀಡುತ್ತಿರುವ ಸಿಯೋನ್ ಆಶ್ರಮದ ಮಹತ್ತರ ಸೇವೆಯನ್ನು ಶ್ಲಾಘಿಸಿದರು. ಜೊತೆಗೆ ಸಂಸ್ಥೆಯ ಮುಂದಿನ ಅಭಿವೃದ್ಧಿ ಹಾಗೂ ಸೇವಾ ಕಾರ್ಯಗಳಿಗೆ ಶುಭಾಶಯಗಳನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಡಾ. ಯು.ಸಿ. ಪೌಲೋಸ್, ರೋಟರಿ ಕ್ಲಬ್ ಅಧ್ಯಕ್ಷ ಶ್ರೀ ಪ್ರಕಾಶ್ ಪ್ರಭು, ಹಿಂದಿನ ಅಧ್ಯಕ್ಷ ಶ್ರೀ ಅನಂತ ಭಟ್ ಮಚ್ಚಿಮಲೆ, ರೋಟರಿ ಪ್ರಾಜೆಕ್ಟ್ ಚೇರ್ಮನ್ ಶ್ರೀ ಅಬುಬಕ್ಕರ್, ಸಂಸ್ಥೆಯ ಟ್ರಸ್ಟಿ ಸದಸ್ಯೆ ಶ್ರೀಮತಿ ಮೇರಿ ಯು.ಪಿ., ಆಡಳಿತಾಧಿಕಾರಿ ಶೋಭಾ ಯು.ಪಿ., ಲೆಕ್ಕಾಧಿಕಾರಿ ಸೌಮ್ಯ ಯು.ಪಿ., ಸಂಸ್ಥೆಯ ಆಡಳಿತ ವರ್ಗದವರು, ಸಿಬ್ಬಂದಿ ವರ್ಗ ಹಾಗೂ ಆಶ್ರಮದ ನಿವಾಸಿಗಳು ಉಪಸ್ಥಿತರಿದ್ದರು.

Related posts

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ಷೇರು ಮಾರುಕಟ್ಟೆ ವಿಶ್ಲೇಷಣೆ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಗೇರುಕಟ್ಟೆ: ಕೊರಂಜ ಸ.ಉ.ಪ್ರಾ. ಶಾಲೆಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಬಂದಾರು: ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ಸರಗಳ್ಳತನದ ಆರೋಪಿಯನ್ನು ಬಂಧಿಸಿ, ರೂ 5,05,000 ಮೌಲ್ಯದ ಸೊತ್ತನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಸೌಜನ್ಯ ಅತ್ಯಾಚಾರ ಪ್ರಕರಣ: ನೈಜ ಆರೋಪಿಗಳ ಪತ್ತೆಗಾಗಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅವಹೇಳನ ಮಾಡದಂತೆ ಮೇಲಂತಬೆಟ್ಟು ಶ್ರೀ ಭಗವತಿ ಅಮ್ಮ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya
error: Content is protected !!