22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೋಟರಿ ಕ್ಲಬ್ ಹಾಗೂ ಕಾನ್ ಫಿನ್ ಹೋಮ್ಸ್ ಸಹಕಾರದಲ್ಲಿ ಸಿಯೋನ್ ಆಶ್ರಮದ ನಿವಾಸಿಗಳಿಗೆ 135 ಮಂಚಗಳು ಹಾಗೂ ಹಾಸಿಗೆ ಸಾಮಗ್ರಿಗಳ ಕೊಡುಗೆ

ಬೆಳ್ತಂಗಡಿ: ಸಿಯೋನ್ ಆಶ್ರಮದ ನಿವಾಸಿಗಳ ಸುಖಕರ ವಾಸ್ತವ್ಯಕ್ಕಾಗಿ ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರೋಟರಿ ಕ್ಲಬ್ ಇಂದಿರಾನಗರ (ಬೆಂಗಳೂರು) ಅವರ ಮುಂದಾಳತ್ವದಲ್ಲಿ ಕಾನ್ ಫಿನ್ ಹೋಮ್ಸ್ ಲಿಮಿಟೆಡ್ ವತಿಯಿಂದ ಒಟ್ಟು 135 ಮಂಚಗಳು, ಹಾಸಿಗೆಗಳು, ಬೆಡ್‌ಶೀಟ್‌ಗಳು ಮತ್ತು ತಲೆದಿಂಬುಗಳು ಕೊಡುಗೆಯಾಗಿ ಮಾ.6ರಂದು ನೀಡಲಾಯಿತು.

ಕಾರ್ಯಕ್ರಮವನ್ನು ಕಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಂಸ್ಥೆಯ ಡೆಪ್ಯೂಟಿ ಜನರಲ್ ಮ್ಯಾನೇಜರ್ ಪ್ರಶಾಂತ್ ಜೋಯಿಷಿ ಉದ್ಘಾಟಿಸಿ, ಅಶಕ್ತರು, ಅನಾಥರು ಹಾಗೂ ನಿರಾಶ್ರಿತರಿಗೆ ಆಶ್ರಯ ಮತ್ತು ಆರೈಕೆ ನೀಡುತ್ತಿರುವ ಸಿಯೋನ್ ಆಶ್ರಮದ ಮಹತ್ತರ ಸೇವೆಯನ್ನು ಶ್ಲಾಘಿಸಿದರು. ಜೊತೆಗೆ ಸಂಸ್ಥೆಯ ಮುಂದಿನ ಅಭಿವೃದ್ಧಿ ಹಾಗೂ ಸೇವಾ ಕಾರ್ಯಗಳಿಗೆ ಶುಭಾಶಯಗಳನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಡಾ. ಯು.ಸಿ. ಪೌಲೋಸ್, ರೋಟರಿ ಕ್ಲಬ್ ಅಧ್ಯಕ್ಷ ಶ್ರೀ ಪ್ರಕಾಶ್ ಪ್ರಭು, ಹಿಂದಿನ ಅಧ್ಯಕ್ಷ ಶ್ರೀ ಅನಂತ ಭಟ್ ಮಚ್ಚಿಮಲೆ, ರೋಟರಿ ಪ್ರಾಜೆಕ್ಟ್ ಚೇರ್ಮನ್ ಶ್ರೀ ಅಬುಬಕ್ಕರ್, ಸಂಸ್ಥೆಯ ಟ್ರಸ್ಟಿ ಸದಸ್ಯೆ ಶ್ರೀಮತಿ ಮೇರಿ ಯು.ಪಿ., ಆಡಳಿತಾಧಿಕಾರಿ ಶೋಭಾ ಯು.ಪಿ., ಲೆಕ್ಕಾಧಿಕಾರಿ ಸೌಮ್ಯ ಯು.ಪಿ., ಸಂಸ್ಥೆಯ ಆಡಳಿತ ವರ್ಗದವರು, ಸಿಬ್ಬಂದಿ ವರ್ಗ ಹಾಗೂ ಆಶ್ರಮದ ನಿವಾಸಿಗಳು ಉಪಸ್ಥಿತರಿದ್ದರು.

Related posts

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya

ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆ: ಶಹೀರ್ ಅನಸ್ ರವರಿಗೆ ಚಿನ್ನದ ಪದಕ

Suddi Udaya

ಗುರುವಾಯನಕೆರೆ ಪ್ರಮೀಳಾ ಜ್ಯುವೆಲ್ಲರ್ಸ್ ನ ಮಾಲಕ ಹರಿಶ್ಚಂದ್ರ ಆಚಾರ್ಯ ನೈಕುಳಿ ನಿಧನ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಅರ್ಚಕ ಲಕ್ಷ್ಮೀನಾರಾಯಣ ಮಂಚಿತ್ತಾಯ ಅಸೌಖ್ಯದಿಂದ ನಿಧನ

Suddi Udaya

ಉಜಿರೆ: ಮಲೆಬೆಟ್ಟುನಲ್ಲಿ ರೈತರಿಗೆ ಹೊರ ಆವರಣ ಕೃಷಿ ತರಬೇತಿ

Suddi Udaya

ಬಳಂಜ, ನಿಟ್ಟಡ್ಕ ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya
error: Content is protected !!