22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲೇಖಕಿ ಶ್ವೇತಾ ದಿಲೀಪ್ ರವರ ಕೃತಿ “ಜೀವನದ ಬೆಳಕು” ಪುಸ್ತಕ ಬಿಡುಗಡೆ

ಬೆಳ್ತಂಗಡಿ : ಲೇಖಕಿ ಶ್ರೀಮತಿ ಶ್ವೇತಾ ದಿಲೀಪ್ ಕುತ್ಲೂರು ನಾರಾವಿ ಇವರ ಚೊಚ್ಚಲ ಕೃತಿ ಜೀವನದ ಬೆಳಕು ಮಾ.8 ರಂದು ಬಿಡುಗಡೆಗೊಂಡಿತು.

ಪುತ್ತೂರು ವಿದ್ಯಾಮಾತ ಅಕಾಡೆಮಿ ಸಭಾಂಗಣದಲ್ಲಿ ನಡೆದ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಪುತ್ತೂರು ತಾಲೂಕು ಘಟಕದ ಪದಗ್ರಹಣ ಹಾಗೂ ಆಮಂತ್ರಣ ಟೀಮ್ ಗಾನಯಾನದ ಜೋಡಿಗಾಯನ ಸಮಾರಂಭದಲ್ಲಿ ಬಿಡುಗಡೆಗೊಂಡಿತು.

ಜೀವನದ ಬೆಳಕು ಕೃತಿಯನ್ನು ಹಿರಿಯ ಮುತ್ಸದ್ದಿ ಆಮಂತ್ರಣ ಗೌರವ ಸಲಹೆಗಾರರಾದ ಬಿ.ಭುಜಬಲಿ ಧರ್ಮಸ್ಥಳ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಲೇಖಕಿ ಶ್ವೇತಾ ದಿಲೀಪ್ ನಾರಾವಿ, ಸ್ವರ್ಣಲತಾ ವೀರೇಂದ್ರ ಕುಮಾರ್ ಕಾಯರ್ತಡ್ಕ, ಅಮ್ಮಾಜಿ ಬಿ.ಜೈನ್,
ದಿಲೀಪ್ ಕುಮಾರ್ ಜೈನ್, ಪೃಥ್ವಿರಾಜ್ ಜೈನ್ ಬೆಂಗಳೂರು,ಆದಿತ್ಯ ಜೈನ್ ಸಹಕರಿಸಿದರು.

ಸಮಾರಂಭದಲ್ಲಿ ಹಿರಿಯ ಸಾಹಿತಿ ನಾರಾಯಣ ರೈ ಕುಕ್ಕುವಳ್ಳಿ ,ಆಮಂತ್ರಣ ದ.ಕ ಜಿಲ್ಲಾಧ್ಯಕ್ಷೆ ವಿಂಧ್ಯಾ ಎಸ್.ರೈ ಕಡೇಶಿವಾಲಯ,ಉಪಾಧ್ಯಕ್ಷೆ ಅನಿತಾ ಶೆಟ್ಟಿ ಮೂಡುಬಿದಿರೆ, ಉಡುಪಿ ಆಮಂತ್ರಣ ಜಿಲ್ಲಾಧ್ಯಕ್ಷೆ ಪುಷ್ಪಪ್ರಸಾದ್, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಉಮೇಶ್ ನಾಯಕ್, ಮಲ್ಲಿನಾಥ್ ಜೈನ್ ಧರ್ಮಸ್ಥಳ, ಪುತ್ತೂರು ಆಮಂತ್ರಣ ವೇದಿಕೆಯ ನೂತನ ಅಧ್ಯಕ್ಷರಾದ ಆಶಾಮಯ್ಯ, ಆಮಂತ್ರಣ ಸೇವಾ ಪ್ರತಿಷ್ಠಾನದ ಟ್ರಸ್ಟಿ ಅರುಣ್ ಅರುವ, ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಲೇಖಕಿಯ ಪರಿಚಯ ಮಾಡಿದರು.

Related posts

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಫೆ.12-16: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ:ಸಿರಿ ಕೇಂದ್ರ ಕಛೇರಿಯಲ್ಲಿ ಸಮಗ್ರ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

Suddi Udaya

ಬ್ಯಾನರ್ ಕಟ್ಟುವ ವೇಳೆ ತೆರೆದ ಚರಂಡಿಗೆ ಬಿದ್ದ ಶಿಕ್ಷಕನಿಗೆ ಗಾಯ

Suddi Udaya

ಶಿಕ್ಷಕರ ಅರ್ಹತಾ ಪರೀಕ್ಷೆ: ಎಸ್.ಡಿ.ಎಂ. ಡಿ.ಎಡ್. ಕಾಲೇಜಿನ ವಿದ್ಯಾರ್ಥಿಗಳು ಉತ್ತೀರ್ಣ

Suddi Udaya
error: Content is protected !!