22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಶಿಬಾಜೆ : ಹಾವುಗಳ ಗುರುತಿಸುವಿಕೆ ಮುನ್ನೆಚ್ಚರಿಕೆ ಮತ್ತು ಪ್ರಥಮ ಚಿಕಿತ್ಸೆ ಮಾಹಿತಿ ಕಾರ್ಯಕ್ರಮ

ಶಿಬಾಜೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಶಿಬಾಜೆ ಕಾರ್ಯಕ್ಷೇತ್ರದ ತ್ರೈಮಾಸಿಕ ಒಕ್ಕೂಟ ಸಭೆಯಲ್ಲಿ ಹಾವುಗಳನ್ನು ಗುರುತಿಸುವಿಕೆ ಮನ್ನೆಚ್ಚರಿಕೆ ಹಾಗೂ ಪ್ರಥಮ ಚಿಕಿತ್ಸಾ ಮಾಹಿತಿ ಕಾರ್ಯಕ್ರಮ ನಡೆಯಿತು.

ಧರ್ಮಸ್ಥಳ ಶ್ರೀ ಶೌರ್ಯ ವಿಪತ್ತು ನಿರ್ವಹಣಾ ಘಟಕ ಶಿಶಿಲ ಅರಸಿನಮಕ್ಕಿ ಇದರ ಸದಸ್ಯ ರಮೇಶ ಬೈರಕಟ್ಟರವರು ಅರಣ್ಯ ಇಲಾಖೆಯಿಂದ ಗುರುತಿಸಲ್ಪಟ್ಟ ಉರಗ ರಕ್ಷಕ ಸುರೇಶ್ ಶಿಬಾಜೆ ಇವರ ಮಾರ್ಗದರ್ಶನದಲ್ಲಿ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಶಿಬಾಜೆ ಒಕ್ಕೂಟದ ಅಧ್ಯಕ್ಷ ಪ್ರಭಾಕರ ಟಿ.ಆರ್., ಜನಜಾಗೃತಿ ವೇದಿಕೆಯ ತಾಲೂಕು ಸಮಿತಿ ಸದಸ್ಯ ಎಚ್.ಎಸ್. ಚೆನ್ನಪ್ಪಗೌಡ ,ವಲಯಾಧ್ಕಕ್ಷ ಗಣೇಶ್ ಗೌಡ, ವಲಯ ಮೇಲ್ವಿಚಾರಕಿ ಶಶಿಕಲಾ, ಬೆಳ್ತಂಗಡಿ ತಾಲೂಕು ಶೌರ್ಯ ಮಾಸ್ಟರ್ ಅವಿನಾಶ್ ಭಿಡೆ, ಶಿಶಿಲ ಆರಸಿನಮಕ್ಕಿ ಶೌರ್ಯ ಸಂಯೋಜಕಿ ರಶ್ಮಿತಾ ಟಿ.ಬಿ., ಶಿಬಾಜೆ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಯೋಗೀಶ್ ಗ್ರಾಹಕ ಸೇವಾಕೇಂದ್ರದ ದಿವ್ಯಾ ಹಾಗೂ ಒಕ್ಕೂಟ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಉದ್ದೇಶ ಹಾಗೂ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಲಾಯಿತು.ವಿಷರಹಿತ ಹಾಗೂ ವಿಷಪೂರಿತ ಹಾವುಗಳ ಗುರುತಿಸುವಿಕೆ ಕುರಿತು ಸಚಿತ್ರ ವಿವರಣೆ ನೀಡಲಾಯಿತು.
ಹಾವುಗಳು ಮನೆಯೊಳಗೆ ಬರದಂತೆ ಮುನ್ನೆಚ್ಚರಿಕಾ ಕ್ರಮಗಳು ಹಾಗೂ ಪ್ರಥಮ ಚಿಕಿತ್ಸಾ ಮಾಹಿತಿಯನ್ನು ನೀಡಲಾಯಿತು.

Related posts

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿಯ ಗೌರವ: ಕಾಂಬೋಡಿಯಾ ದೇಶದಲ್ಲಿ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023 ಸ್ವೀಕರಿಸಿ ಸ್ವದೇಶಕ್ಕೆ ಮರಳಿದ ಸಂಚಾಲಕ ರಾಜೇಶ್ ಪೈ ಉಜಿರೆ

Suddi Udaya

ಬೆಳಾಲು: ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ಐದು ದಿನ ಪೊಲೀಸ್ ಕಸ್ಟಡಿಗೆ

Suddi Udaya

ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಚಾರಣ, ಸ್ವಚ್ಚತಾ ಆಂದೋಲನ ಮತ್ತು ಯುವ ದಿನಾಚರಣೆ

Suddi Udaya

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಸ್ತ್ರೀ ಶಕ್ತಿ ಸಂವರ್ಧನಾ ತರಬೇತಿ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎನ್ ಡಿ ಎ ಕ್ಲಿಯರ್

Suddi Udaya

“ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ” ನೂತನ ಶೈಕ್ಷಣಿಕ ವರ್ಷ ಪ್ರಾರಂಭ: ವಿದ್ಯಾದೇಗುಲಗಳಲ್ಲಿ ಮಕ್ಕಳ ಕಲರವ: ಪಿಎಂಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ತಾ.ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya
error: Content is protected !!