22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಿಯೋನ್ ಆಶ್ರಮ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಗಂಡಿಬಾಗಿಲು ಸಿಯೋನ್ ಆಶ್ರಮ ಟ್ರಸ್ಟ್ ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾ.8ರಂದು ಆಚರಿಸಲಾಯಿತು.

ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಯು.ಸಿ. ಪೌಲೋಸ್ ಹಾಗೂ ಟ್ರಸ್ಟೀ ಸದಸ್ಯೆ ಮೇರಿ ಯು.ಪಿ. ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.

ಕೇಕ್ ಕತ್ತರಿಸಿ ಮಹಿಳೆಯರ ಗೌರವವನ್ನು ಸ್ಮರಿಸಲಾಯಿತು ಹಾಗೂ ಎಲ್ಲರಿಗೂ ಸಿಹಿ ಹಂಚಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಯು.ಸಿ. ಪೌಲೋಸ್ ಮಾತನಾಡಿ, “ಮಹಿಳೆಯರು ಕುಟುಂಬದ ಬೆನ್ನೆಲುಬು ಮಾತ್ರವಲ್ಲ, ಸಮಾಜದ ನಿರ್ಮಾಣದಲ್ಲಿಯೂ ಪ್ರಮುಖ ಪಾತ್ರವಹಿಸುತ್ತಾರೆ. ತಾಯಿ, ಸಹೋದರಿ, ಗುರು ಮತ್ತು ಸೇವಾ ಮನೋಭಾವದ ಪ್ರತಿರೂಪವಾಗಿ ಮಹಿಳೆಯರು ಸಮಾಜವನ್ನು ಬೆಳಗಿಸುತ್ತಿದ್ದಾರೆ. ಮಹಿಳೆಯರ ಗೌರವ, ಸಮಾನತೆ ಮತ್ತು ಸಬಲೀಕರಣವು ಸಮಾಜದ ಪ್ರಗತಿಗೆ ಅತ್ಯಂತ ಅಗತ್ಯವಾಗಿದೆ” ಎಂದು ತಿಳಿಸಿದರು.

ಸಂಸ್ಥೆಯ ಆಡಳಿತ ಮಂಡಳಿಯವರು, ಸಿಬ್ಬಂದಿ ವರ್ಗದವರು, ಆಶ್ರಮ ನಿವಾಸಿಗಳು ಹಾಗೂ ಸಂದರ್ಶಕರಾಗಿ ಆಗಮಿಸಿದ ಸೈಂಟ್ ಲಾರೆನ್ಸ್ ಚರ್ಚ್ ಬೋಂದೆಲ್ ಇಲ್ಲಿನ ಸೈಂಟ್ ಸೆಬಾಸ್ಟಿನ್ ವಾರ್ಡ್ ನ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ (ತೆನೆ ) ಹಬ್ಬ

Suddi Udaya

ನಿವೃತ್ತ ಬ್ಯಾಂಕ್ ಉದ್ಯೋಗಿ‌ ಅಮ್ಮು ಕುಮಾರ್ ಹೃದಯಾಘಾತದಿಂದ ನಿಧನ

Suddi Udaya

ಅಳದಂಗಡಿ ಸಿಎ ಬ್ಯಾಂಕಿನಿಂದ ರೂ.25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಪೆರಾಡಿಯಲ್ಲಿ ‘ಸರಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿಯಲ್ಲಿ ನೂತನವಾಗಿ ಪ್ರಾರಂಭಿಸಿದ ಡ್ರೀಮ್ ಡೀಲ್ ಗ್ರೂಪ್ಸ್ ಉದ್ಘಾಟನೆ

Suddi Udaya

ಜೆಸಿಐ ಭಾರತದ ವಲಯ 15ರ ಉಪಾಧ್ಯಕ್ಷರಾಗಿ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ಆಯ್ಕೆ

Suddi Udaya
error: Content is protected !!