25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಸಮಸ್ಯೆ

ಹಾವು ಕಡಿತದಿಂದ ಶಿಶಿಲ ಕಾರೆಗುಡ್ಡೆ ನಿವಾಸಿ ಚೋಮ ನಿಧನ

ಶಿಶಿಲ ಗ್ರಾಮದಲ್ಲಿ ಇತ್ತೀಚಿನ ದಿನಗಳಲ್ಲಿ ವಿಷಸರ್ಪಗಳ ಓಡಾಟ ಹೆಚ್ಚಾಗುತ್ತಿರುವ ಹಿನ್ನೆಲೆ ಹಾವು ಕಡಿತದಿಂದ ಕಾರೆಗುಡ್ಡೆ ನಿವಾಸಿ ಚೋಮ (67) ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮಾ.3ರಂದು ಶಿಶಿಲ ಗ್ರಾಮದ ಕಾರೆಗುಡ್ಡೆ ನಿವಾಸಿ ಚೋಮ ಅವರು ತಮ್ಮ ತೋಟದಲ್ಲಿ ಬಾಳೆ ಗಿಡಕ್ಕೆ ಮಣ್ಣು ಹಾಕುತ್ತಿದ್ದ ವೇಳೆ ನಾಗರಹಾವು ಕಡಿದಿತ್ತು. ತಕ್ಷಣ ಅವರನ್ನು ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಾ. 8ರಂದು ನಿಧನರಾದರು.

ಮೃತರು ಪತ್ನಿ ಲಲಿತ, ಪುತ್ರಿ ಅಶ್ವಿತಾ, ಕುಟುಂಬಸ್ಥರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಗ್ರಾಮದಲ್ಲಿ ವಿಷಸರ್ಪಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದು, ಸಂಬಂಧಪಟ್ಟ ಇಲಾಖೆ ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ.

Related posts

ಎ.17 : ಬೆಳ್ತಂಗಡಿಯಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ ಆ‌ರ್ ಮತಪ್ರಚಾರ:ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಗಝಲ್ ‘ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಯಜ್ನೇಶ್ ಪ್ರಥಮ ಸ್ಥಾನ

Suddi Udaya

ಪಾಲೇದು ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಅಂಡಿಂಜೆ : ನೆಲ್ಲಿಂಗೇರಿ ಸ.ಕಿ.ಪ್ರಾ. ಶಾಲೆ ಮತ್ತು ಅಂಗನವಾಡಿ ಕೇಂದ್ರದಲ್ಲಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ, ದೇವರ ದರ್ಶನ

Suddi Udaya
error: Content is protected !!