25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸ್ಮಾರು ಕುಲಾಲ ಸಮುದಾಯ ಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 2 ಲಕ್ಷದ ಮಂಜೂರಾತಿ ಪತ್ರ ಹಸ್ತಾಂತರ

ನಾರಾವಿ: ಹೊಸ್ಮಾರು ಕುಲಾಲ ಸಂಘಕ್ಕೆ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿಗಳು ಭೇಟಿ ನೀಡಿದರು.

ಕುಲಾಲ ಸಮಾಜ ಕಲ್ಯಾಣ ಸಂಘ ಹೊಸ್ಮಾರು ಇದರ ಸಮುದಾಯ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ|| ಡಿ ವೀರೇಂದ್ರ ಹೆಗ್ಗಡೆಯವರು ಸಮುದಾಯ ಭವನದ ಅಭಿವೃದ್ಧಿಗೆ ಸಮುದಾಯ ಭವನ ಯೋಜನಾ ಅಡಿಯಲ್ಲಿ ಹೊಸ್ಮಾರು ಕುಲಾಲ ಸಂಘದ ಸಮುದಾಯ ಭವನಕ್ಕೆ ರೂ 2 ಲಕ್ಷ ಮೊತ್ತದ ಮಂಜೂರಾತಿ ಪತ್ರವನ್ನು ಕ್ಷೇತ್ರದ ವತಿಯಿಂದ ನೀಡಿದರು .

ಮಂಜೂರಾತಿ ಪತ್ರವನ್ನು ಕುಲಾಲ ಸಂಘದ ಅಧ್ಯಕ್ಷ ಪ್ರಮೋದ್ ಕುಲಾಲ್ ಇವರಿಗೆ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಅಧ್ಯಕ್ಷ ನೋನು, ವಲಯ ಮೇಲ್ವಿಚಾರಕ ಗಿರೀಶ್ ಕೆ ಎಲ್ ಹಾಗೂ ಸೇವಾ ಪ್ರತಿನಿಧಿ ಮಲ್ಲಿಕಾ ಮತ್ತು ಒಕ್ಕೂಟದ ಅಧ್ಯಕ್ಷೆ ವಿನುತಾ ಆಚಾರ್ಯ ಹಾಗೂ ಯೋಜನೆಯ ಒಕ್ಕೂಟದ ಮಾಜಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಕುಲಾಲ ಸಂಘದ ಕಟ್ಟಡ ಸಮಿತಿಯ ಅಧ್ಯಕ್ಷರು ಮತ್ತು ಸಂಘದ ಗೌರವ ಅಧ್ಯಕ್ಷರು ಮಹಿಳಾ ಘಟಕದ ಸದಸ್ಯರು ಪದಾಧಿಕಾರಿಗಳು ಸದಸ್ಯರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಗಿರೀಶ್ ಕೆಎಲ್ ಸ್ವಾಗತಿಸಿದರು. ಮಲ್ಲಿಕಾ ವಂದಿಸಿದರು.

Related posts

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಧ್ವಜಾರೋಹಣದೊಂದಿಗೆ ಪ್ರಾರಂಭ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ: ಸ್ಟಾರ್ ಲೈನ್ ಆಂ. ಮಾ. ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಜ್ ಶರೀಫ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಚಂದ್ರ ಜೈನ್ ನೇಮಕ

Suddi Udaya

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉದಯ ಮಹಾಸಂಘ ಗಂಡಿಬಾಗಿಲು- ಪರಿಸರ ದಿನಾಚರಣೆ

Suddi Udaya

ಬೆಂಗಳೂರು ಯುವವಾಹಿನಿ ಘಟಕದಿಂದ ಯುವ ವೈಭವ 2025

Suddi Udaya
error: Content is protected !!