22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸ್ಮಾರು ಕುಲಾಲ ಸಮುದಾಯ ಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 2 ಲಕ್ಷದ ಮಂಜೂರಾತಿ ಪತ್ರ ಹಸ್ತಾಂತರ

ನಾರಾವಿ: ಹೊಸ್ಮಾರು ಕುಲಾಲ ಸಂಘಕ್ಕೆ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿಗಳು ಭೇಟಿ ನೀಡಿದರು.

ಕುಲಾಲ ಸಮಾಜ ಕಲ್ಯಾಣ ಸಂಘ ಹೊಸ್ಮಾರು ಇದರ ಸಮುದಾಯ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ|| ಡಿ ವೀರೇಂದ್ರ ಹೆಗ್ಗಡೆಯವರು ಸಮುದಾಯ ಭವನದ ಅಭಿವೃದ್ಧಿಗೆ ಸಮುದಾಯ ಭವನ ಯೋಜನಾ ಅಡಿಯಲ್ಲಿ ಹೊಸ್ಮಾರು ಕುಲಾಲ ಸಂಘದ ಸಮುದಾಯ ಭವನಕ್ಕೆ ರೂ 2 ಲಕ್ಷ ಮೊತ್ತದ ಮಂಜೂರಾತಿ ಪತ್ರವನ್ನು ಕ್ಷೇತ್ರದ ವತಿಯಿಂದ ನೀಡಿದರು .

ಮಂಜೂರಾತಿ ಪತ್ರವನ್ನು ಕುಲಾಲ ಸಂಘದ ಅಧ್ಯಕ್ಷ ಪ್ರಮೋದ್ ಕುಲಾಲ್ ಇವರಿಗೆ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಅಧ್ಯಕ್ಷ ನೋನು, ವಲಯ ಮೇಲ್ವಿಚಾರಕ ಗಿರೀಶ್ ಕೆ ಎಲ್ ಹಾಗೂ ಸೇವಾ ಪ್ರತಿನಿಧಿ ಮಲ್ಲಿಕಾ ಮತ್ತು ಒಕ್ಕೂಟದ ಅಧ್ಯಕ್ಷೆ ವಿನುತಾ ಆಚಾರ್ಯ ಹಾಗೂ ಯೋಜನೆಯ ಒಕ್ಕೂಟದ ಮಾಜಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಕುಲಾಲ ಸಂಘದ ಕಟ್ಟಡ ಸಮಿತಿಯ ಅಧ್ಯಕ್ಷರು ಮತ್ತು ಸಂಘದ ಗೌರವ ಅಧ್ಯಕ್ಷರು ಮಹಿಳಾ ಘಟಕದ ಸದಸ್ಯರು ಪದಾಧಿಕಾರಿಗಳು ಸದಸ್ಯರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಗಿರೀಶ್ ಕೆಎಲ್ ಸ್ವಾಗತಿಸಿದರು. ಮಲ್ಲಿಕಾ ವಂದಿಸಿದರು.

Related posts

ಅಗತ್ಯ ಬಿದ್ದರೆ ಸಂತ್ರಸ್ಥರ ನೆರವಿಗೆ ವಯನಾಡ್ ಗೆ ತೆರಳಲು ಸಿದ್ಧರಿದ್ದೇವೆ : ಸಮಾಜ ಸೇವಕ ಡಾ. ರವಿ ಕಕ್ಕೆಪದವು

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ತೆಕ್ಕಾರು: ಗಾಳಿ ಮಳೆಗೆ ಅಡಿಕೆ ಗಿಡ ಹಾಗೂ ಮನೆಗೆ ಮರ ಬಿದ್ದು ಹಾನಿ

Suddi Udaya

ಆರಂಬೋಡಿ: ಹನ್ನೆರಡುಕವಲು ರಸ್ತೆ ಅವ್ಯವಸ್ಥೆ, ದುರಸ್ಥಿಗೆ ಗ್ರಾಮಸ್ಥರ ಆಗ್ರಹ, ಗ್ರಾಮ ಪಂಚಾಯತ್ ಗೆ ಮನವಿ

Suddi Udaya

ಎಸ್.ಡಿ.ಎಂ ಸೆಕೆಂಡರಿ ಶಾಲೆಯಲ್ಲಿ ಮುಖ್ಯ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಅರಸಿನಮಕ್ಕಿ: ಉಪರಡ್ಕದಲ್ಲಿ ಆಟೋ ರಿಕ್ಷಾ ಹಾಗೂ ಬೈಕ್ ಡಿಕ್ಕಿ

Suddi Udaya
error: Content is protected !!