25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸುವರ್ಣ ಸಂಭ್ರಮ 2026 ಚಾಲನೆ: ಕಾಳುಮೆಣಸು ಮತ್ತು ಕಾಫಿ ಬೆಳೆಯ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ

ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಸುವರ್ಣ ಸಂಭ್ರಮ 2026 ಚಾಲನೆಯೊಂದಿಗೆ ಕಾಳುಮೆಣಸು ಮತ್ತು ಕಾಫಿ ಬೆಳೆಯ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ ಮಾ.15ರಂದು ಅಳದಂಗಡಿ ಕಟ್ಟೂರು ಶಂಕರ್ ಭಟ್ ರವರ ತೋಟದಲ್ಲಿ ನಡೆಯಲಿರುವುದು ಎಂದು ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ತಿಳಿಸಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್‌ ಪೂಂಜ ನೆರವೇರಿಸಲಿದ್ದಾರೆ.ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಕುಶಾಲಪ್ಪ ಗೌಡ ಸುವರ್ಣ ಸಂಭ್ರಮದ ಲೋಗೊ ಅನಾವರಣಗೊಳಿಸಲಿದ್ದಾರೆ. ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್‌ ಕುಮಾರ್ ಕಾಫಿ ಗಿಡ ವಿತರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಪುತ್ತೂರು ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಸ್.ಎಂ. ರಘು, ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಬಿ.ವಿ., ಪ್ರಗತಿಪರ ಕೃಷಿಕ ಶಂಕರ ಭಟ್‌ ಕಟ್ಟೂರು ಭಾಗವಹಿಸಲಿದ್ದಾರೆ.

ಐ.ಸಿ.ಎ.ಆರ್ ನಿವೃತ್ತ ಹಿರಿಯ ವಿಜ್ಞಾನಿ ಡಾ. ವೇಣುಗೋಪಾಲ್ ಕಾಳುಮೆಣಸು ನಾಟಿ, ಪೋಷಣೆ, ರೋಗ ನಿರ್ವಹಣೆಯ ಬಗ್ಗೆ ಮಾಹಿತಿ ನೀಡಲಿದ್ದಾರೆ. ದ.ಕ. ಜಿಲ್ಲಾ ಕಾಳುಮೆಣಸು ಹಾಗೂ ಕಾಫಿ ಬೆಳೆಗಾರ ಅಜಿತ್‌ ಪ್ರಸಾದ್ ರೈ ಕಾಯರ್ತಡಿ ದ.ಕ. ಜಿಲ್ಲೆಯಲ್ಲಿ ಅಡಿಕೆಗೆ ಪರ್ಯಾಯ ಹಾಗೂ ಮಿಶ್ರ ಬೆಳೆಯಾಗಿ ಲಾಭಾದಾಯಕ ಕಾಫಿ ಕೃಷಿ ಬಗ್ಗೆ ಮಾಹಿತಿ ನೀಡಲಿದ್ದಾರೆ. ಪ್ರಗತಿಪರ ಕೃಷಿಕ ಅನಂತಕೃಷ್ಣ ಪಳ್ಳತ್ತಡ್ಕ ನೀರಾವರಿ, ಆಟೋಮೇಟಿಕ್ ಇರಿಗೇಷನ್ ಮತ್ತು ಫಟಿಗೇಷನ್ ಸಿಸ್ಟಂ ಬಗ್ಗೆ ತಿಳಿಸಲಿದ್ದಾರೆ ಎಂದರು.

Related posts

ಲಾಯಿಲ: ಶ್ರೀ ಮಹಮ್ಮಾಯಿ ಅಮ್ಮನವರ ಮಾರಿ ಪೂಜೋತ್ಸವ

Suddi Udaya

ನಡ: ಜಮಲಾಬಾದ್ ಇದ್ಗ ಮೈದಾನ ನಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ: ನವನೀತ್ ಕೊಯ್ಯೂರು ಅವರ ತಂಡ ದ್ವಿತೀಯ ಸ್ಥಾನ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಅರಸಿನಮಕ್ಕಿ ಬಂಟರ ಸಂಘದ ಕಛೇರಿ ಆವರಣದ ಗೇಟ್ ಉದ್ಘಾಟನೆ

Suddi Udaya

ಉಜಿರೆ: ಕೆಸರ್ ಡೊಂಜಿ ದಿನ ಕ್ರೀಡಾಕೂಟ

Suddi Udaya
error: Content is protected !!