22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ, ಪೋಷಕರ ಸಭೆ

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಮಾ7ರಂದು ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಅಡಿಯಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ ಮತ್ತು ಪೋಷಕರ ಸಭೆಯನ್ನು ನಡೆಯಿತು.

ಕಾರ್ಯಕ್ರಮ ಸಭಾಧ್ಯಕ್ಷತೆಯನ್ನು ವಹಿಸಿದ್ದ ಬೆಳ್ತಂಗಡಿ ಗ್ರಾಮೀಣ ಉದ್ಯೋಗ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕಿ ಸಫಾನ ಮಾತನಾಡಿ ಮಕ್ಕಳನ್ನು ಮೊಬೈಲಿಂದ ದೂರವಿರಿಸಲು ಪೋಷಕರ ಸಹಕಾರ ಅಗತ್ಯ ಡ್ರಗ್ಸ್ ಧೂಮಪಾನ ಗಳಿಂದ ಎಚ್ಚರ ವಹಿಸಲು ಸಲಹೆ ನೀಡಿದರು.

ಮುಖ್ಯ ಅತಿಥಿ ನೋಡಲ್ ಅಧಿಕಾರಿ ಬೆಳ್ತಂಗಡಿ ಗ್ರಾಮೀಣ ಉದ್ಯೋಗ ತಾಲೂಕು ಪಂಚಾಯತ್ ರಾಜೀವ ಸಾಲಿಯನ್ ಮಾತನಾಡಿ ಪೋಷಕರೊಂದಿಗೆ ಉತ್ತಮ ಸಂವಾದ ಶಾಲೆ ಮತ್ತು ಸಮುದಾಯದಲ್ಲಿ ಪೋಷಕರ ಸಹಭಾಗಿತ್ವ, ವಿವಿಧ ಅನುದಾನಗಳ ಸದ್ಬಳಕೆ ಇತ್ಯಾದಿ ವಿಷಯಗಳ ಬಗ್ಗೆ ತಿಳಿಸಿದರು.

ವೇದಿಕೆಯಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಂತೋಷ್ ಶೆಟ್ಟಿ ಮದ್ದಡ್ಕ, ಉಪಾಧ್ಯಕ್ಷರು ನಸೀಮ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅರುಣ್ ಸುಮಿತ್, ಕಾರ್ಯದರ್ಶಿ ಸತೀಶ್ ದೇವಾಡಿಗ ಉಪಸ್ಥಿತರಿದ್ದರು.

ಗ್ರಾಮ ಸಂಪನ್ಮೂಲ ವ್ಯಕ್ತಿ ಲೀಲಾವತಿ ವರದಿ ಮಂಡಿಸಿದರು. ಮುಖ್ಯ ಶಿಕ್ಷಕಿ ಉಷಾ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಜಯರಾಜ ಜೈನ್ ಕಾರ್ಯಕ್ರಮ ನಿರೂಪಿಸಿದರು. ನಯನಾ.ಟಿ ಧನ್ಯವಾದ ನೀಡಿದರು. ಸಹಶಿಕ್ಷಕರು, ವಿದ್ಯಾರ್ಥಿಗಳು, ಅಡುಗೆ ಸಿಬ್ಬಂದಿ ವರ್ಗ ಸಹಕರಿಸಿದರು.

Related posts

ಬೆಳ್ತಂಗಡಿ ಸ.ಪ.ಪೂ. ಕಾಲೇಜು ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಧರ್ಮಸ್ಥಳಕ್ಕೆ ಭೇಟಿ ನೀಡಿದ ರಶ್ಯಾದ ಪ್ರವಾಸಿಗರು

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅಂಬುಲೆನ್ಸ್ ಚಾಲಕ ಅಬ್ದುಲ್ ರಝಾಕ್ ರವರಿಗೆ ವಿದಾಯ ಕೂಟ

Suddi Udaya

ಮುಗ್ಗಗುತ್ತು ದಿ | ಕೆ. ಜಿ ಬಂಗೇರರ ಪತ್ನಿ ಶ್ರೀಮತಿ ವೀರಮ್ಮ ನಿಧನ

Suddi Udaya

ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಾಳೆಕುದ್ರು ಮಠದ ಪೂಜ್ಯಶ್ರೀ ವಾಸುದೇವ ಸದಾಶಿವ ಆಶ್ರಮ ಮಹಾಸ್ವಾಮೀಜಿ ಭೇಟಿ

Suddi Udaya
error: Content is protected !!