24 C
ಪುತ್ತೂರು, ಬೆಳ್ತಂಗಡಿ
July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಗುರುವಾಯನಕರೆ ಕೆಎಂಜೆ, ಎಸ್‌ವೈ‌ಎಸ್ ವತಿಯಿಂದ ರಂಝಾನ್ ಕಿಟ್ ವಿತರಣೆ

ಬೆಳ್ತಂಗಡಿ: ಕರ್ನಾಟಕ ಮುಸ್ಲಿಂ ಜಮಾಅತ್ ( ಕೆಎಂಜೆ) ಮತ್ತು ಸುನ್ನೀ ಯುವಜನ ಸಂಘ (ಎಸ್ ವೈ ಎಸ್) ಗುರುವಾಯನಕೆರೆ ಯೂನಿಟ್ ವತಿಯಿಂದ ನಡೆಸಲ್ಪಟ್ಟ ಸುಮಾರು ರೂ.2.50 ಲಕ್ಷ ವೆಚ್ಚದಲ್ಲಿ 121 ಆಯ್ದ ಅರ್ಹ ಮಧ್ಯಮವರ್ಗದ ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ ಹಾಗೂ “ಮಹ್ಲರತುಲ್ ಬದ್ರಿಯಾ ಮಜ್ಲಿಸ್” ಮತ್ತು ಬೃಹತ್ ಇಫ್ತಾರ್ ಮೀಟ್ ಗುರುವಾಯನಕರೆ ಶಾದಿ ಮಹಲ್ ನಲ್ಲಿ ನಡೆಸಲಾಯಿತು.

ಅಧ್ಯಕ್ಷತೆಯನ್ನು ಎಸ್ ವೈ ಎಸ್ ಗುರುವಾಯನಕೆರೆ ಯೂನಿಟ್ ಅಧ್ಯಕ್ಷ ಅನ್ಸಾರ್ ವಹಿಸಿದ್ದರು.

ಉದ್ಘಾಟನೆ ಹಾಗೂ ದುವಾ ಆಶೀರ್ವಚನವನ್ನು ಸಯ್ಯಿದ್ ಅಬ್ದುಲ್ ರಹಮಾನ್ ಸಾದಾತ್ ತಂಙಳ್ ನೆರವೇರಿಸಿದರು.

ಮಹ್ಲರತುಲ್ ಬದ್ರಿಯಾ ಮಜ್ಲಿಸ್ ನೇತೃತ್ವವನ್ನು ಸ್ಥಳೀಯ ಮುದರ್ರಿಸ್ ಜುನೈದ್ ಸಖಾಫಿ ವಹಿಸಿದ್ದರು. ಸ್ಥಳೀಯ ಖತೀಬ್ ಅಬ್ದುಲ್ ಬಾರಿ ಸ‌ಅದಿ ‘ತಂಝಿಲ್ ಆಫ್ ಕುರ್‌ಅನ್’ ತರಗತಿ ನಡೆಸಿಕೊಟ್ಟರು.

ದಾನಿಗಳಾದ ಯಾಕೂಬ್ ಮುಸ್ಲಿಯಾರ್ ಮೇಲಂತಬೆಟ್ಟು, ಹಾಜಿ ಮುಹಮ್ಮದ್ ಶರೀಫ್ ಜಿ.ಕೆ ಬಜಾರ್. ಸುಲ್ತಾನ್ ಗೋಲ್ಡ್ ಮೆನೇಜರ್ ಅಬ್ದುಲ್ ಸತ್ತಾರ್. ಹಾಗೂ ಶೇಕುಂಞಿ ಇವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಕೆಎಂಜೆ ಯೂನಿಟ್ ಅಧ್ಯಕ್ಷ ಮುತ್ತಲಿಬ್, ಕೆಎಂಜೆ ಸರ್ಕಲ್ ಅಧ್ಯಕ್ಷ ಹಮೀದ್ ಫುರ್ಕಾನಿ, ದರ್ಗಾ ಅಧ್ಯಕ್ಷ ಅಬ್ದುಲ್ ರಹಮಾನ್ ಹಾಜಿ, ಅಬ್ದುಲ್ ರಹಮಾನ್ ಸ‌ಅದಿ, ಅಬೂಬಕ್ಕರ್ ಸಿದ್ದೀಕ್ ಝುಹ್ರಿ, ಎಸ್ಎಂಎ ಅಧ್ಯಕ್ಷರ ಉಮಾರ್ ಮಟನ್. ಜಮಾತ್ ಕೋಶಾಧಿಕಾರಿ ಹಾಜಿ ಲತೀಫ್, ಎಸ್ ಎಸ್ ಎಫ್ ಡಿವಿಜನ್ ಅಧ್ಯಕ್ಷ ಇಸಾಕ್ ಅರ್ವ ಉಪಸ್ಥಿತರಿದ್ದರು.

ಎಸ್ ವೈ ಎಸ್ ಸರ್ಕಲ್ ಅಧ್ಯಕ್ಷ ಹಾಜಿ ಹಸೈನಾರ್, ಕಾರ್ಯಕ್ರಮ ನಿರೂಪಿಸಿದರು.

Related posts

ಡಿ.24: ಅಯ್ಯಪ್ಪ ವ್ರತಧಾರಿಗಳು ಮತ್ತು ಅಯ್ಯಪ್ಪ ಭಕ್ತರ ತಾಲೂಕು ಸಮಾವೇಶ: ಸಂಪತ್ ಬಿ. ಸುವರ್ಣ

Suddi Udaya

ಕಣಿಯೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಘಟಕದಿಂದ ಬಂದಾರು ಸ.ಹಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಉಜಿರೆ ಹಳೆಪೇಟೆ ಮುಹಿದ್ದೀನ್ ಜುಮಾ ಮಸ್ಟಿದ್ ನಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ರೆಖ್ಯ: ರಾಷ್ಟ್ರೀಯ ಹೆದ್ದಾರಿ 75ರ ಫ್ಲೈಓವರ್ ನಲ್ಲಿ ಬೈಕ್ ಹಾಗೂ ಕಾರು ನಡುವೆ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Suddi Udaya

ಇಂದಬೆಟ್ಟು : ಕಜೆಯಲ್ಲಿ ನಿಧಿಗಾಗಿ ಶೋಧ ಕಾರ್ಯ

Suddi Udaya

ಅ.3-8: ಕೊಪ್ಪದಲ್ಲಿ 45ನೇ ಬೃಹತ್ ದಸರಾ ಯೋಗ ಕಾರ್ಯಕ್ರಮ, ಪೂರ್ವಭಾವಿ ಸಭೆ

Suddi Udaya
error: Content is protected !!