23.9 C
ಪುತ್ತೂರು, ಬೆಳ್ತಂಗಡಿ
April 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳ ಸಮಾರೋಪ

ಉಜಿರೆ : ಮಾ10. ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿದ್ಯಾರ್ಥಿಗಳ ಇಂಗ್ಲಿಷ್ ಭಾಷಾ ಸಂವಹನ ವೃದ್ಧಿಯ ಬೆಳವಣಿಗೆಗಾಗಿ ಆಯೋಜಿಸಲಾಗಿದ್ದ “ಅಕೊಲೆಡ್ಸ್” ತರಗತಿಗಳ ಸಮಾರೋಪ ಕಾರ್ಯಕ್ರಮ ನಡೆಯಿತು.

2025-26ನೇ ಶೈಕ್ಷಣಿಕ ಸಾಲಿನ ಶಾಲಾ ವಿದ್ಯಾರ್ಥಿಗಳಿಗೆ ಮಂಗಳೂರಿನ ಅಕೊಲೆಡ್ಸ್ ಅಕಾಡೆಮಿಯು ಅಕೊಲೆಡ್ಸ್ ತರಗತಿಗಳನ್ನು ನಡೆಸಿದ್ದು, ಆ ತರಗತಿಗಳಲ್ಲಿ ಉತ್ತಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು.

ವೇದಿಕೆಯಲ್ಲಿ ಮಂಗಳೂರಿನ ಅಕೊಲೆಡ್ಸ್ ಅಕಾಡೆಮಿಯ ಅಧ್ಯಕ್ಷ ಕೃಷ್ಣಪ್ರಸಾದ್ ಅಡಪ್ಪ, ಕಾರ್ಯಕ್ರಮ ಸಂಯೋಜಕಿ ನೀತು ಪ್ರಸಾದ್, ಶಿಕ್ಷಕಿ ಮಧುರ ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ವಿನೀತ, ಅನುಷಾ, ಪ್ರಗ್ನ್ಯ ಹಾಗೂ ಸಂಜನಾ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಶೈಕ್ಷಣಿಕ ಸಂಯೋಜಕಿ ಸುಮಾ ಶ್ರೀನಾಥ್ ವಹಿಸಿದ್ದರು.

Related posts

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಬೆಳ್ತಂಗಡಿ ಕ್ಷೇತ್ರದ ಸಾಮಾನ್ಯ ಸಭೆ

Suddi Udaya

ಮಾಲಾಡಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

Suddi Udaya

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ರೋಹಿನಿ ಸಿ.ಕೆ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ: ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮತದಾರರ ಜಾಗೃತಿ ಅರಿವು ಕಾರ್ಯಕ್ರಮ

Suddi Udaya

ಲಾಯಿಲ: ಹಾಡಹಗಲೇ ಕಾರಿನಲ್ಲಿಟ್ಟಿದ್ದ ನಗದು, ಚಿನ್ನಾಭರಣ ಕಳವು

Suddi Udaya
error: Content is protected !!