36.7 C
ಪುತ್ತೂರು, ಬೆಳ್ತಂಗಡಿ
March 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಚಾರ್ಮಾಡಿ ಪ್ರದೇಶದಲ್ಲಿ ಮತ್ತೆ ಪ್ರತ್ಯಕ್ಷಗೊಂಡ ಚಿರತೆಗಳು

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಹೊಸಮಠ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ನಡೆಸುತ್ತಿದ್ದ ಕಾರ್ಮಿಕರೊಬ್ಬರಿಗೆ ಮೂರು ಚಿರತೆಗಳು ಎದುರಾದ ಘಟನೆ ಮಾ.10 ರಂದು ಮುಂಜಾನೆ 4 ಗಂಟೆ ವೇಳೆಗೆ ನಡೆದಿದೆ. ಚಿರತೆಯನ್ನು ಕಂಡ ವ್ಯಕ್ತಿ ಭಯ ಭೀತರಾಗಿ ತಕ್ಷಣವೇ ಓಡಿ ಹೋಗಿ ತಪ್ಪಿಸಿಕೊಂಡಿದ್ದಾರೆ. ಕೂಡಲೇ ಈ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಿ ಚಿರತೆಗಳನ್ನು ಕಾಡಿಗೆ ಅಟ್ಟಲಾಗಿದೆ.

ಕೊಂಚ ಬಿಡುವು ನೀಡಿ ಮತ್ತೆ ಕಾಣಿಸಿದ ಚಿರತೆ:
ಕಳೆದ ಜನವರಿ ಹಾಗೂ ಫೆಬ್ರವರಿ ತಿಂಗಳ ಮಧ್ಯೆದವರೆಗೆ ಬೆಳ್ತಂಗಡಿ ಪಟ್ಟಣ, ಕಲ್ಮಂಜ, ಮುಂಡಾಜೆ, ನಡ, ಕಳಿಯ, ವೇಣೂರು, ಅಂಡಿಂಜೆ, ಸುಲ್ಕೇರಿ, ತಣ್ಣೀರುಪಂತ, ಮಚ್ಚಿನ ಸಹಿತ ನಾನಾ ಗ್ರಾಮಗಳಲ್ಲಿ ಚಿರತೆಗಳು ಸಂಚಾರ ನಡೆಸಿ ಜನರಲ್ಲಿ ಭಯದ ಭೀತಿಯ ವತಾವರಣ ನಿರ್ಮಿಸಿದ್ದವು. ನಡ ಗ್ರಾಮದ ಕನ್ಯಾಡಿ ಎಂಬಲ್ಲಿ ವ್ಯಕ್ತಿಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿತ್ತು. ಮುಂಡಾಜೆಯ ಸೀಟು ಮೂರು ಮಾರ್ಗದ ಬಳಿ ಶಾಲಾ ಬಾಲಕನೋರ್ವನಿಗೆ ಚಿರತೆ ಎದುರಾದ ಘಟನೆಯು ನಡೆದಿತ್ತು. ಅನೇಕ ಗ್ರಾಮಗಳಲ್ಲಿ ಮುಂಜಾನೆ ಟ್ಯಾಪಿಂಗ್ ನಡೆಸುವ ವ್ಯಕ್ತಿಗಳಿಗೆ ಪದೇ ಪದೇ ಚಿರತೆಗಳು ಎದುರಾಗಿದ್ದವು.

ಕಳೆದ 20 ದಿನಗಳಿಂದ ಚಿರತೆಗಳ ಓಡಾಟದ ವರದಿ ಪ್ರಕಟವಾಗಿರಲಿಲ್ಲ ಆದರೆ ಇದೀಗ ಚಿರತೆಗಳು ಮತ್ತೆ ಕಾಣಿಸಿಕೊಂಡಿವೆ. ಒಟ್ಟಿನಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಚಿರತೆವಿರುವುದು ಸ್ಪಷ್ಟಗೊಂಡಿದೆ. ಬೆಳ್ತಂಗಡಿ ನಗರಕ್ಕೂ ಚಿರತೆ ಲಗ್ಗೆ ಇಟ್ಟಿದ್ದವು, ನಡ ಗ್ರಾಮದಲ್ಲಿ ಚಿರತೆಯೊಂದು ಬೋನ್‌ನಲ್ಲಿ ಸೆರೆಯಾಗಿತ್ತು.

Related posts

ಮುಂಡಾಜೆ ಕಾಲೇಜಿನ ಎನ್ ಎಸ್ ಎಸ್ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ಸರಕಾರಿ ಐ.ಟಿ.ಐ 2024ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

Suddi Udaya

ಸಾರಸ್ವತ ಲರ್ನಿಂಗ್ ಫೌಂಡೇಶನ್ ಯು.ಎಸ್.ಎ ಕ್ಯಾಲಿಪೋರ್ನಿಯಾ ವತಿಯಿಂದ ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ -ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ: ರೂ.571 ಕೋಟಿ ವಾರ್ಷಿಕ ವ್ಯವಹಾರ, ರೂ.1.53 ಕೋಟಿ ನಿವ್ವಳ ಲಾಭ, ಸದಸ್ಯರಿಗೆ ಶೇ.18 ಡಿವಿಡೆಂಟ್

Suddi Udaya

ರಾಷ್ಟ್ರೀಯ ಟಾರ್ಗೆಟ್ ಬಾಲ್ ಫೆಡರೇಶನ್ ಕಪ್ ಪಂದ್ಯಾಟ: ರಾಷ್ಟ್ರಮಟ್ಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ವಿದ್ಯಾರ್ಥಿ ಸಿದ್ದಾರ್ಥ್ ಎಂ. ಸಿ ಆಯ್ಕೆ

Suddi Udaya
error: Content is protected !!