24 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ನೆರಿಯ: ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಗೆ ಡಿವೈಎಸ್ಪಿ ಸಿ.ಕೆ ರೋಹಿಣಿ ಭೇಟಿ

ಬೆಳ್ತಂಗಡಿ ಪೋಲಿಸ್ ಉಪ ವಿಭಾಗದ ಡಿವೈಎಸ್ಪಿ ಸಿ.ಕೆ ರೋಹಿಣಿ ರವರು ನೆರಿಯ ಗ್ರಾಮದ ಆಲಂಗಾಯಿಯಲ್ಲಿರುವ ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಗೆ ಮಾ.8ರಂದು ಭೇಟಿ ನೀಡಿದರು.

ಈ ವಸತಿ ಶಾಲೆಯ ಆದಿವಾಸಿ ಮಕ್ಕಳೊಂದಿಗೆ ಬೆರೆತು , ಮಾತುಕತೆ ನಡೆಸಿ , ಮಕ್ಕಳಿಗೆ ಕಾನೂನಿನ ಪಾಠ ಮಾಡಿದರು. ಸರ್ಕಾರದ ಸೌಲಭ್ಯಗಳನ್ನು ಚೆನ್ನಾಗಿ ಬಳಸಿಕೊಂಡು , ಉನ್ನತ ಶಿಕ್ಷಣ ಪಡೆದು ಉನ್ನತ ಸ್ಥಾನಕ್ಕೆ ಏರಬೇಕು ಆಗ ಸರ್ಕಾರದ ಕಾರ್ಯಕ್ರಮಗಳು ಸಾರ್ಥಕತೆಯಾಗುತ್ತದೆ ಎಂದರು.

ಮಧ್ಯಾಹ್ನ ಮಕ್ಕಳ ಜೊತೆಗೆ ಊಟ ಮಾಡಿದ ಡಿವೈಎಸ್ಪಿ ರವರು ಹಳೆಯ ವಸತಿ ನಿಲಯ ಕಟ್ಟಡವನ್ನು ವೀಕ್ಷಣೆ ಮಾಡಿದರು. ಜೊತೆಗೆ 5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ವಸತಿಶಾಲಾ ಕಟ್ಟಡವನ್ನು ವೀಕ್ಷಿಸಿ ಸಂತಸಗೊಂಡರು. ನೂತನ ಕಟ್ಟಡದ ಉದ್ಘಾಟನೆಯನ್ನು ಆದಷ್ಟು ಬೇಗ ನಡೆಸುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಪೋಲಿಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ , ಧರ್ಮಸ್ಥಳ ಪೋಲಿಸ್ ಠಾಣೆಯ ಸಿಬ್ಬಂದಿಗಳು ಜೊತೆಗಿದ್ದರು. ಶಾಲಾ ಶಿಕ್ಷಕರು , ಹಾಸ್ಟೆಲ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ನೇರ್ತನೆ ಪ್ರದೇಶದಲ್ಲಿ ಕಾಡಾನೆ ದಾಳಿ

Suddi Udaya

ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿ ವತಿಯಿಂದ ನೃತ್ಯ ಭಜನೋತ್ಸವ

Suddi Udaya

ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ: ಬಂದಾರು ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ರಾಮತಾರಕ ಮಂತ್ರ ಜಪ, ಭಜನೆ

Suddi Udaya

ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೊಡಿಮರ ಸ್ಥಾಪನೆ

Suddi Udaya

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಸ್ಟೂಡೆಂಟ್ ನರ್ಸಸ್ ಅಸೋಸಿಯೇಷನ್ ಇನ್ ಟ್ರೈನ್ಡ್ ನರ್ಸಸ್ ಅಸೋಸಿಯೇಷನ್ ಆಫ್ ಇಂಡಿಯಾ ಕಾರ್ಯದರ್ಶಿಯಾಗಿ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಸಿಂಚನಾ ಎಂ.ಡಿ ಆಯ್ಕೆ

Suddi Udaya
error: Content is protected !!