26.2 C
ಪುತ್ತೂರು, ಬೆಳ್ತಂಗಡಿ
June 8, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರೌಢ ವಿಭಾಗದ ವಿದ್ಯಾರ್ಥಿಗಳಿಗೆ ಮಹಿಳಾ ದಿನಾಚರಣೆಯನ್ನು ಮಾ.8ರಂದು ಆಚರಿಸಲಾಯಿತು.

ಸಂಪನ್ಮೂಲ ವ್ಯಕ್ತಿ ಫಾದರ್ ಮುಲ್ಲರ್ ಆಸ್ಪತ್ರೆ ತುಂಬೆಯಲ್ಲಿ ಸ್ಟಾಫ್ ನರ್ಸ್ ವಿದ್ಯಾ ಮಾತನಾಡಿ ಪ್ರಸ್ತುತ ದಿನಗಳಲ್ಲಿ ನಡೆಯುವಂತಹ ವಿಚಾರಕ್ಕೆ ಸಂಬಂಧಿಸಿದಂತೆ ಮಕ್ಕಳು ಮಾನಸಿಕವಾಗಿ ಒತ್ತಡಕ್ಕೆ ಒಳಗಾಗದೆ ತಮ್ಮ ಜೀವನವನ್ನು ಉತ್ತಮ ರೀತಿಯಾಗಿ ಸಾಗಿಸಬೇಕು ಹಾಗೂ ವಿದ್ಯಾರ್ಥಿನಿಗಳಿಗೆ ಹದಿಹರೆಯದ ಆರೋಗ್ಯ ಸಮಸ್ಯೆ, ಸವಾಲುಗಳು, ಮುಟ್ಟಿನ ಸಮಯದಲ್ಲಿ ಆರೋಗ್ಯ ಹೇಗೆ ಕಾಪಾಡಿಕೊಳ್ಳಬೇಕು, ಶುಚಿತ್ವ ಮತ್ತು ರಕ್ತಹೀನತೆ ಕುರಿತು ಉಪನ್ಯಾಸ ನೀಡಿದರು.

ವಿವಿಧ ಕ್ಷೇತ್ರದಲ್ಲಿ ಮಹಿಳೆಯರ ಸಾಧನೆಗಳನ್ನು ನೃತ್ಯದ ಮೂಲಕ ವಿದ್ಯಾರ್ಥಿಗಳು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲ ಜೋಷ್ಟನ್ ಲೋಬೋ, ಮುಖ್ಯ ಶಿಕ್ಷಕಿ ವಿಜಯ ಕೆ., ಸಂಯೋಜಕ ಯಶವಂತ ಜಿ ನಾಯಕ್ ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಪ್ರೌಢ ವಿಭಾಗದ ಸಹ ಶಿಕ್ಷಕಿ ದಿವ್ಯಶೀ ಕಾರ್ಯಕ್ರಮ ನಿರೂಪಿಸಿದರು.

Related posts

ಡಿ.20: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ

Suddi Udaya

ಉಜಿರೆ: ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜನ್ಮ ಕಲ್ಯಾಣೋತ್ಸವ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಏಕಬಳಕೆ ಪ್ಲಾಸ್ಟಿಕ್ ನಿಷೇಧವಾಗಿರುವ ಬಗ್ಗೆ ಪರಿಸರ ಅಧಿಕಾರಿಯವರ ಕಾರ್ಯಾಚರಣೆ ಸಭೆ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಬ್ರಹ್ಮಕುಂಭಾಭಿಷೇಕ

Suddi Udaya
error: Content is protected !!