July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕರೆ: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಘಟಿಕೋತ್ಸವ

ಗುರುವಾಯನಕೆರೆ:ಶ್ರಮಕ್ಕೆ ತಕ್ಕ ಫಲ ದೊರಕುತ್ತದೆ. ಹಾಗಾಗಿ ವಿದ್ಯಾರ್ಥಿಗಳು ನಿರಂತರ ಪ್ರಯತ್ನಶೀಲರಾಗಬೇಕು. ಖಂಡಿತ ತಮ್ಮ- ತಮ್ಮ ಗುರಿ ತಲುಪಲು ಸಾಧ್ಯ ಎಂದು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಹೇಳಿದರು.

ಅವರು ಗುರುವಾಯನಕೆರೆ ವಿದ್ಯಾ ಸಾಗರ ಕ್ಯಾಂಪಸ್ ನ ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ಕಿಂಡರ್‌ಗಾರ್ಡನ್‌ (K.G) ಮಕ್ಕಳ ಘಟಿಕೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಕಲಿಕೆ ಹೊರೆಯಾಗದೆ, ಸಂತೋಷದಿಂದ ಅಭ್ಯಾಸ ಮಾಡುವಂಥ ವಾತಾವರಣ ಶಾಲೆಗಳಲ್ಲಿ ಇರಬೇಕು. ಹಾಗಾಗಿ ನಮ್ಮ ಶಾಲೆಯಲ್ಲಿ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳನ್ನು ಕೂಡಾ ನಿರಂತರವಾಗಿ ಹಮ್ಮಿ ಕೊಳ್ಳುತ್ತಾ ಬಂದಿದ್ದೇವೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಎಕ್ಸೆಲ್ ಸಂಸ್ಥೆಯ ಆಡಳಿತಾಧಿಕಾರಿಯಾದ ಕೀರ್ತಿ ನಿಧಿ ಜೈನ್ ಪಾಲ್ಗೊಂಡರು. ಶಾಲಾ ಮುಖ್ಯ ಶಿಕ್ಷಕಿಯಾದ ಸಹನಾ ಜೈನ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಸಂಯೋಜಕಿ ಲೀನಾ ಫ್ಲೋರಿನ್ ಪಿಂಟೋ ಕಾರ್ಯಕ್ರಮವನ್ನು ನಿರೂಪಿಸಿ, ಸಹ ಶಿಕ್ಷಕಿಯಾದ ಸ್ವಾತಿ ಅತಿಥಿಗಳನ್ನು ಸ್ವಾಗತಿಸಿ, ಶಿಕ್ಷಕಿ ಪವಿತ್ರ ಕೋಟ್ಯಾನ್ ವಂದಿಸಿದರು.ಸಮಾರಂಭದಲ್ಲಿ ವಿದ್ಯಾರ್ಥಿಗಳ ಹೆಸರನ್ನು ಶಿಕ್ಷಕಿ ಗೀತಾ ಓದಿ, ಮಕ್ಕಳನ್ನು ವೇದಿಕೆಗೆ ಆಹ್ವಾನಿಸಿದರು. ಶಿಕ್ಷಕಿ ಚೇತನಾ ಸಹಕರಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮ: ವಿದ್ಯಾರ್ಥಿಗಳು ವೇದಿಕೆಗೆ ಬಂದು ಅಧ್ಯಕ್ಷರಿಂದ ತಮ್ಮ ಪ್ರಮಾಣಪತ್ರಗಳನ್ನು ಸ್ವೀಕರಿಸಿದರು. ಎಕ್ಸೆಲ್ ಸಂಸ್ಥೆಯ ಅಧ್ಯಕ್ಷರು ಎಲ್ಲಾ ಕೆಜಿ ವಿದ್ಯಾರ್ಥಿಗಳಿಗೆ ಕಂಚಿನ ದೀಪವನ್ನು ನೀಡಿ ಶುಭ ಹಾರೈಸಿದರು. ಕೊನೆಯಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Related posts

ಸಂಬೋಳ್ಯ ಮೃತ ಬಾಲಕ ಸುಮಂತ್ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಎಲ್ಇಡಿ ಮೂಲಕ ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಲೋಕಾರ್ಪಣಾ ಕಾರ್ಯಕ್ರಮ ವೀಕ್ಷಣೆ

Suddi Udaya

ಮಲೆಕುಡಿಯ ಕಾಲನಿ ರಸ್ತೆಯ ಅವ್ಯವಸ್ಥೆಗೆ ತೀವ್ರ ಆಕ್ರೋಶ: ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಚುನಾವಣಾ ಬಹಿಷ್ಕಾರದ ಕೂಗು…

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಿರಿಯ ಸದಸ್ಯೆ ಲ. ಸುಶೀಲಾ ಎಸ್ ಹೆಗ್ಡೆಯವರಿಂದ ಅರ್ಹ ಕುಟುಂಬಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ಹೊಸಪಟ್ಣ ದೊಡ್ಯಾರು ಮನೆಯ ಶ್ರೀಮತಿ ಸುಂದರಿ ನಿಧನ

Suddi Udaya
error: Content is protected !!