August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಚಾರ್ಮಾಡಿ ಪ್ರದೇಶದಲ್ಲಿ ಮತ್ತೆ ಪ್ರತ್ಯಕ್ಷಗೊಂಡ ಚಿರತೆಗಳು

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಹೊಸಮಠ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ನಡೆಸುತ್ತಿದ್ದ ಕಾರ್ಮಿಕರೊಬ್ಬರಿಗೆ ಮೂರು ಚಿರತೆಗಳು ಎದುರಾದ ಘಟನೆ ಮಾ.10 ರಂದು ಮುಂಜಾನೆ 4 ಗಂಟೆ ವೇಳೆಗೆ ನಡೆದಿದೆ. ಚಿರತೆಯನ್ನು ಕಂಡ ವ್ಯಕ್ತಿ ಭಯ ಭೀತರಾಗಿ ತಕ್ಷಣವೇ ಓಡಿ ಹೋಗಿ ತಪ್ಪಿಸಿಕೊಂಡಿದ್ದಾರೆ. ಕೂಡಲೇ ಈ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಿ ಚಿರತೆಗಳನ್ನು ಕಾಡಿಗೆ ಅಟ್ಟಲಾಗಿದೆ.

ಕೊಂಚ ಬಿಡುವು ನೀಡಿ ಮತ್ತೆ ಕಾಣಿಸಿದ ಚಿರತೆ:
ಕಳೆದ ಜನವರಿ ಹಾಗೂ ಫೆಬ್ರವರಿ ತಿಂಗಳ ಮಧ್ಯೆದವರೆಗೆ ಬೆಳ್ತಂಗಡಿ ಪಟ್ಟಣ, ಕಲ್ಮಂಜ, ಮುಂಡಾಜೆ, ನಡ, ಕಳಿಯ, ವೇಣೂರು, ಅಂಡಿಂಜೆ, ಸುಲ್ಕೇರಿ, ತಣ್ಣೀರುಪಂತ, ಮಚ್ಚಿನ ಸಹಿತ ನಾನಾ ಗ್ರಾಮಗಳಲ್ಲಿ ಚಿರತೆಗಳು ಸಂಚಾರ ನಡೆಸಿ ಜನರಲ್ಲಿ ಭಯದ ಭೀತಿಯ ವತಾವರಣ ನಿರ್ಮಿಸಿದ್ದವು. ನಡ ಗ್ರಾಮದ ಕನ್ಯಾಡಿ ಎಂಬಲ್ಲಿ ವ್ಯಕ್ತಿಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿತ್ತು. ಮುಂಡಾಜೆಯ ಸೀಟು ಮೂರು ಮಾರ್ಗದ ಬಳಿ ಶಾಲಾ ಬಾಲಕನೋರ್ವನಿಗೆ ಚಿರತೆ ಎದುರಾದ ಘಟನೆಯು ನಡೆದಿತ್ತು. ಅನೇಕ ಗ್ರಾಮಗಳಲ್ಲಿ ಮುಂಜಾನೆ ಟ್ಯಾಪಿಂಗ್ ನಡೆಸುವ ವ್ಯಕ್ತಿಗಳಿಗೆ ಪದೇ ಪದೇ ಚಿರತೆಗಳು ಎದುರಾಗಿದ್ದವು.

ಕಳೆದ 20 ದಿನಗಳಿಂದ ಚಿರತೆಗಳ ಓಡಾಟದ ವರದಿ ಪ್ರಕಟವಾಗಿರಲಿಲ್ಲ ಆದರೆ ಇದೀಗ ಚಿರತೆಗಳು ಮತ್ತೆ ಕಾಣಿಸಿಕೊಂಡಿವೆ. ಒಟ್ಟಿನಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಚಿರತೆವಿರುವುದು ಸ್ಪಷ್ಟಗೊಂಡಿದೆ. ಬೆಳ್ತಂಗಡಿ ನಗರಕ್ಕೂ ಚಿರತೆ ಲಗ್ಗೆ ಇಟ್ಟಿದ್ದವು, ನಡ ಗ್ರಾಮದಲ್ಲಿ ಚಿರತೆಯೊಂದು ಬೋನ್‌ನಲ್ಲಿ ಸೆರೆಯಾಗಿತ್ತು.

Related posts

ಬೆಳ್ತಂಗಡಿ ಯುವ ವಕೀಲರ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

Suddi Udaya

ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿ: ಅಧ್ಯಕ್ಷ ಗಾದಿ ಕಳೆದುಕೊಂಡ ಪುದುವೆಟ್ಟು ಗ್ರಾಪಂ ಅಧ್ಯಕ್ಷೆ ಅನಿತಾ ಕುಮಾರಿ – ಉಪಾಧ್ಯಕ್ಷ ಪೂರ್ಣಾಕ್ಷ ಪ್ರಭಾರ ಅಧ್ಯಕ್ಷರಾಗಿ ಕಾರ್ಯನಿರ್ವಹಣೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿಯಾಗಿ ಸಮಾಜ ಸೇವಕ ಕೆ. ಮೋಹನ್ ಕುಮಾರ್ ಆಯ್ಕೆ

Suddi Udaya

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಮುಂಜಾಗೃತ ಮಾಹಿತಿ

Suddi Udaya

ನಾರಾವಿಯಲ್ಲಿ ‘ಗಾಯತ್ರಿ ಮೆಡಿಕಲ್ಸ್’ ಶುಭಾರಂಭ: ಗ್ರಾಮೀಣ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆಯ ಹೊಸ ಭರವಸೆ

Suddi Udaya

ಸಾರಿಗೆ ನಿಯಮಗಳ ಉಲ್ಲಂಘನೆಯ ಪ್ರಕರಣಗಳು : ಡಿ.12 ರ ಒಳಗೆ ದಂಡ ಕಟ್ಟಿದಲ್ಲಿ ಶೇ 50 ರಿಯಾಯಿತಿ

Suddi Udaya
error: Content is protected !!