36.7 C
ಪುತ್ತೂರು, ಬೆಳ್ತಂಗಡಿ
March 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ನೆರಿಯ: ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಗೆ ಡಿವೈಎಸ್ಪಿ ಸಿ.ಕೆ ರೋಹಿಣಿ ಭೇಟಿ

ಬೆಳ್ತಂಗಡಿ ಪೋಲಿಸ್ ಉಪ ವಿಭಾಗದ ಡಿವೈಎಸ್ಪಿ ಸಿ.ಕೆ ರೋಹಿಣಿ ರವರು ನೆರಿಯ ಗ್ರಾಮದ ಆಲಂಗಾಯಿಯಲ್ಲಿರುವ ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಗೆ ಮಾ.8ರಂದು ಭೇಟಿ ನೀಡಿದರು.

ಈ ವಸತಿ ಶಾಲೆಯ ಆದಿವಾಸಿ ಮಕ್ಕಳೊಂದಿಗೆ ಬೆರೆತು , ಮಾತುಕತೆ ನಡೆಸಿ , ಮಕ್ಕಳಿಗೆ ಕಾನೂನಿನ ಪಾಠ ಮಾಡಿದರು. ಸರ್ಕಾರದ ಸೌಲಭ್ಯಗಳನ್ನು ಚೆನ್ನಾಗಿ ಬಳಸಿಕೊಂಡು , ಉನ್ನತ ಶಿಕ್ಷಣ ಪಡೆದು ಉನ್ನತ ಸ್ಥಾನಕ್ಕೆ ಏರಬೇಕು ಆಗ ಸರ್ಕಾರದ ಕಾರ್ಯಕ್ರಮಗಳು ಸಾರ್ಥಕತೆಯಾಗುತ್ತದೆ ಎಂದರು.

ಮಧ್ಯಾಹ್ನ ಮಕ್ಕಳ ಜೊತೆಗೆ ಊಟ ಮಾಡಿದ ಡಿವೈಎಸ್ಪಿ ರವರು ಹಳೆಯ ವಸತಿ ನಿಲಯ ಕಟ್ಟಡವನ್ನು ವೀಕ್ಷಣೆ ಮಾಡಿದರು. ಜೊತೆಗೆ 5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ವಸತಿಶಾಲಾ ಕಟ್ಟಡವನ್ನು ವೀಕ್ಷಿಸಿ ಸಂತಸಗೊಂಡರು. ನೂತನ ಕಟ್ಟಡದ ಉದ್ಘಾಟನೆಯನ್ನು ಆದಷ್ಟು ಬೇಗ ನಡೆಸುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಪೋಲಿಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ , ಧರ್ಮಸ್ಥಳ ಪೋಲಿಸ್ ಠಾಣೆಯ ಸಿಬ್ಬಂದಿಗಳು ಜೊತೆಗಿದ್ದರು. ಶಾಲಾ ಶಿಕ್ಷಕರು , ಹಾಸ್ಟೆಲ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ: ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಬಳಂಜ ಸನ್ಮಾನ ಸ್ವೀಕಾರ

Suddi Udaya

ಬಾಂಗ್ಲಾದೇಶದಲ್ಲಿ ನಡೆದ ಹಿಂದೂ ಯುವಕನ ಹತ್ಯೆ ಖಂಡಿಸಿ ಉಜಿರೆಯಲ್ಲಿ ವಿ.ಹಿಂ.ಪ. ಪ್ರತಿಭಟನೆ

Suddi Udaya

ವೇಣೂರು: ನಿವೃತ್ತ ಶಿಕ್ಷಕರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿಶ್ವಾಸ್ ಶೆಟ್ಟಿಗೆ ಚಿನ್ನದ ಪದಕ

Suddi Udaya

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

Suddi Udaya

ಧರ್ಮಸ್ಥಳ ಸಹಕಾರ ಸಂಘದಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

Suddi Udaya
error: Content is protected !!