28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ನೆರಿಯ: ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಗೆ ಡಿವೈಎಸ್ಪಿ ಸಿ.ಕೆ ರೋಹಿಣಿ ಭೇಟಿ

ಬೆಳ್ತಂಗಡಿ ಪೋಲಿಸ್ ಉಪ ವಿಭಾಗದ ಡಿವೈಎಸ್ಪಿ ಸಿ.ಕೆ ರೋಹಿಣಿ ರವರು ನೆರಿಯ ಗ್ರಾಮದ ಆಲಂಗಾಯಿಯಲ್ಲಿರುವ ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಗೆ ಮಾ.8ರಂದು ಭೇಟಿ ನೀಡಿದರು.

ಈ ವಸತಿ ಶಾಲೆಯ ಆದಿವಾಸಿ ಮಕ್ಕಳೊಂದಿಗೆ ಬೆರೆತು , ಮಾತುಕತೆ ನಡೆಸಿ , ಮಕ್ಕಳಿಗೆ ಕಾನೂನಿನ ಪಾಠ ಮಾಡಿದರು. ಸರ್ಕಾರದ ಸೌಲಭ್ಯಗಳನ್ನು ಚೆನ್ನಾಗಿ ಬಳಸಿಕೊಂಡು , ಉನ್ನತ ಶಿಕ್ಷಣ ಪಡೆದು ಉನ್ನತ ಸ್ಥಾನಕ್ಕೆ ಏರಬೇಕು ಆಗ ಸರ್ಕಾರದ ಕಾರ್ಯಕ್ರಮಗಳು ಸಾರ್ಥಕತೆಯಾಗುತ್ತದೆ ಎಂದರು.

ಮಧ್ಯಾಹ್ನ ಮಕ್ಕಳ ಜೊತೆಗೆ ಊಟ ಮಾಡಿದ ಡಿವೈಎಸ್ಪಿ ರವರು ಹಳೆಯ ವಸತಿ ನಿಲಯ ಕಟ್ಟಡವನ್ನು ವೀಕ್ಷಣೆ ಮಾಡಿದರು. ಜೊತೆಗೆ 5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ವಸತಿಶಾಲಾ ಕಟ್ಟಡವನ್ನು ವೀಕ್ಷಿಸಿ ಸಂತಸಗೊಂಡರು. ನೂತನ ಕಟ್ಟಡದ ಉದ್ಘಾಟನೆಯನ್ನು ಆದಷ್ಟು ಬೇಗ ನಡೆಸುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಪೋಲಿಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ , ಧರ್ಮಸ್ಥಳ ಪೋಲಿಸ್ ಠಾಣೆಯ ಸಿಬ್ಬಂದಿಗಳು ಜೊತೆಗಿದ್ದರು. ಶಾಲಾ ಶಿಕ್ಷಕರು , ಹಾಸ್ಟೆಲ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್‌ ಅರ್ಜಿ ಆಹ್ವಾನ

Suddi Udaya

ನೆರಿಯ: ಬೆಂಕಿ ತಗುಲಿ ಹಾನಿಯಾದ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮದ್ದಡ್ಕ ಸಮೃದ್ಧಿ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

Suddi Udaya

ಸಿ.ಎ ಪರೀಕ್ಷೆಯಲ್ಲಿ ಕುವೆಟ್ಟು ಮೇಗೇಶ್ ಯು. ಶೆಟ್ಟಿ ಉತ್ತೀರ್ಣ

Suddi Udaya

ಓಡಿಲ್ನಾಳ: ಮೈರಲ್ಕೆ ಪಶುಪತಿ ಕೃಪಾ ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರರ ಪ್ರಾಯೋಜಕತ್ವದಲ್ಲಿ “ಕುಮಾರ ವಿಜಯ” ಯಕ್ಷಗಾನ ಹಾಗೂ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಸೇವೆಸಲ್ಲಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya
error: Content is protected !!