21 C
ಪುತ್ತೂರು, ಬೆಳ್ತಂಗಡಿ
March 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಫೋಟೊಗ್ರಾಫಿ ಸ್ಫರ್ಧೆ: ಡಾ. ಚಂದ್ರಹಾಸ್ ಚಾರ್ಮಾಡಿ ಪ್ರಥಮ

ಬೆಳ್ತಂಗಡಿ: ಬ್ಲಾಕ್ ಬಾಕ್ಸ್ ಸ್ಟುಡಿಯೋ ಆಯೋಜಿಸಿದ ಆನ್ ಲೈನ್ ಫೋಟೊಗ್ರಾಫಿ ಸ್ಪರ್ಧೆಯಲ್ಲಿ ಡಾ. ಚಂದ್ರಹಾಸ್ ಚಾರ್ಮಾಡಿಯವರು ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.

ಡಾ|| ಡಿ.ವೀರೇಂದ್ರ ಹೆಗ್ಗಡೆ ಮತ್ತು ಡಾ|| ಹೇಮಾವತಿ ವೀ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅನಿಲ್ ಕುಮಾರ್ ಎಸ್.ಎಸ್. ರವರ ಪ್ರಧಾನ ಸಂಪಾದಕತ್ವದಲ್ಲಿ ಪ್ರಕಟಗೊಳ್ಳುತ್ತಿರುವ ರಾಜ್ಯದಾದ್ಯಂತ 8 ಲಕ್ಷ ಪ್ರಸರಣವನ್ನು ಹೊಂದಿರುವ ನಿರಂತರ’ ಪತ್ರಿಕೆಯ ಸಂಪಾದಕರಾದ ಡಾ.ಚಂದ್ರಹಾಸ್ ಚಾರ್ಮಾಡಿಯವರು ಕಳೆದ 15 ವರ್ಷಗಳಿಂದ ಸೌತ್ ಕೆನರಾ ಫೋಟೋಗ್ರಾಫರ್ಸ್ ಆಸೋಸಿಯೇಶನ್ ಬೆಳ್ತಂಗಡಿ ವಲಯದ ಸದಸ್ಯರಾಗಿದ್ದಾರೆ. ಬೆಳ್ತಂಗಡಿ ಪತ್ರಕರ್ತರ ಸಂಘದ ಸದಸ್ಯರು ಆಗಿರುವ ಇವರು ರಾಜ್ಯ ಸರಕಾರದ ಆಕ್ರೆಡೆಶನ್ ಪಡೆದಿರುವ ಪತ್ರಕರ್ತರಲ್ಲಿ ಓರ್ವರಾಗಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತ್ತಕೋತ್ತರ ಪದವಿ, ಕನ್ನಡದಲ್ಲಿ ಎಂ.ಎ., ಹಂಪಿ ವಿಶ್ವವಿದ್ಯಾನಿಲಯದಡಿ ಪಿಹೆಚ್‌.ಡಿ. ಪದವಿಯನ್ನು ಪಡೆದಿದ್ದಾರೆ.

ಇವರ ಸುಮಾರು ಎರಡು ಸಾವಿರದಷ್ಟು ಬರಹಗಳು ರಾಜ್ಯದ ಬೇರೆ ಬೇರೆ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ‘ನೂರೊಂದು ಯಶೋಗಾಥೆಗಳು’, ‘ನುಡಿಬರಹ’, ‘ಕೆರೆಯ ಕಥೆಗಳು’, ‘ಅಂಗಡಿ ಮಜಲು’ ಮುಂತಾದ ಪುಸ್ತಕಗಳನ್ನು ಪ್ರಕಟಿಸಿದ್ದಾರೆ‌. ಇವರಿಗೆ ಈಗಾಗಲೇ ಪತ್ರಕರ್ತರಿಗೆ ಕೊಡಲ್ಪಡುವ ಪ.ಗೋ.ಪ್ರಶಸ್ತಿ, ಸೌರಭ ರಾಜ್ಯ ಪ್ರಶಸ್ತಿ, ಕೆಡಬ್ಲ್ಯುಜೆ ಪ್ರಶಸ್ತಿಗಳು ದೊರೆತಿವೆ.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ ಗೈಡ್ ಸಂಸ್ಥಾಪಕರ ದಿನ ಹಾಗೂ ದ್ವಜ ದಿನಾಚರಣೆ

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕರಿಗೆ “ಆಕ್ಸ್ಫರ್ಡ್ ಅಡ್ವಾಂಟೇಜ್ ಪೆಡಗೋಜಿ” ಕಾರ್ಯಾಗಾರ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಮುಂಡತ್ತೊಡಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕಲ್ಮಂಜ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಚಿಣ್ಣರ ಉತ್ಸವ

Suddi Udaya

ಚಾರ್ಮಾಡಿ: ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಕುಂಕುಮಾರ್ಚನೆ; ದುರ್ಗ ನಮಸ್ಕಾರ ಪೂಜೆ

Suddi Udaya
error: Content is protected !!