26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಫೋಟೊಗ್ರಾಫಿ ಸ್ಫರ್ಧೆ: ಡಾ. ಚಂದ್ರಹಾಸ್ ಚಾರ್ಮಾಡಿ ಪ್ರಥಮ

ಬೆಳ್ತಂಗಡಿ: ಬ್ಲಾಕ್ ಬಾಕ್ಸ್ ಸ್ಟುಡಿಯೋ ಆಯೋಜಿಸಿದ ಆನ್ ಲೈನ್ ಫೋಟೊಗ್ರಾಫಿ ಸ್ಪರ್ಧೆಯಲ್ಲಿ ಡಾ. ಚಂದ್ರಹಾಸ್ ಚಾರ್ಮಾಡಿಯವರು ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.

ಡಾ|| ಡಿ.ವೀರೇಂದ್ರ ಹೆಗ್ಗಡೆ ಮತ್ತು ಡಾ|| ಹೇಮಾವತಿ ವೀ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅನಿಲ್ ಕುಮಾರ್ ಎಸ್.ಎಸ್. ರವರ ಪ್ರಧಾನ ಸಂಪಾದಕತ್ವದಲ್ಲಿ ಪ್ರಕಟಗೊಳ್ಳುತ್ತಿರುವ ರಾಜ್ಯದಾದ್ಯಂತ 8 ಲಕ್ಷ ಪ್ರಸರಣವನ್ನು ಹೊಂದಿರುವ ನಿರಂತರ’ ಪತ್ರಿಕೆಯ ಸಂಪಾದಕರಾದ ಡಾ.ಚಂದ್ರಹಾಸ್ ಚಾರ್ಮಾಡಿಯವರು ಕಳೆದ 15 ವರ್ಷಗಳಿಂದ ಸೌತ್ ಕೆನರಾ ಫೋಟೋಗ್ರಾಫರ್ಸ್ ಆಸೋಸಿಯೇಶನ್ ಬೆಳ್ತಂಗಡಿ ವಲಯದ ಸದಸ್ಯರಾಗಿದ್ದಾರೆ. ಬೆಳ್ತಂಗಡಿ ಪತ್ರಕರ್ತರ ಸಂಘದ ಸದಸ್ಯರು ಆಗಿರುವ ಇವರು ರಾಜ್ಯ ಸರಕಾರದ ಆಕ್ರೆಡೆಶನ್ ಪಡೆದಿರುವ ಪತ್ರಕರ್ತರಲ್ಲಿ ಓರ್ವರಾಗಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತ್ತಕೋತ್ತರ ಪದವಿ, ಕನ್ನಡದಲ್ಲಿ ಎಂ.ಎ., ಹಂಪಿ ವಿಶ್ವವಿದ್ಯಾನಿಲಯದಡಿ ಪಿಹೆಚ್‌.ಡಿ. ಪದವಿಯನ್ನು ಪಡೆದಿದ್ದಾರೆ.

ಇವರ ಸುಮಾರು ಎರಡು ಸಾವಿರದಷ್ಟು ಬರಹಗಳು ರಾಜ್ಯದ ಬೇರೆ ಬೇರೆ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ‘ನೂರೊಂದು ಯಶೋಗಾಥೆಗಳು’, ‘ನುಡಿಬರಹ’, ‘ಕೆರೆಯ ಕಥೆಗಳು’, ‘ಅಂಗಡಿ ಮಜಲು’ ಮುಂತಾದ ಪುಸ್ತಕಗಳನ್ನು ಪ್ರಕಟಿಸಿದ್ದಾರೆ‌. ಇವರಿಗೆ ಈಗಾಗಲೇ ಪತ್ರಕರ್ತರಿಗೆ ಕೊಡಲ್ಪಡುವ ಪ.ಗೋ.ಪ್ರಶಸ್ತಿ, ಸೌರಭ ರಾಜ್ಯ ಪ್ರಶಸ್ತಿ, ಕೆಡಬ್ಲ್ಯುಜೆ ಪ್ರಶಸ್ತಿಗಳು ದೊರೆತಿವೆ.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗಣಪತಿ ಗುಡಿಯ ಸಮರ್ಪಣಾ ಕಾರ್ಯಕ್ರಮ

Suddi Udaya

ನಿನ್ನೆ ಶಾಸಕರ ಮನೆಯಲ್ಲಿ ನಡೆದಿರುವುದು ದೊಡ್ಡ ಡ್ರಾಮ; ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಎ.19-26: ಪಾರಸ್‌ ಪೃಥ್ವಿ ಜುವೆಲ್ಸ್‌ನಲ್ಲಿ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನಾಭರಣಗಳ ಮೇಲೆ ವಿಶೇಷ ಕೊಡುಗೆ

Suddi Udaya

ಕನ್ಯಾಡಿ-2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಜ.5: ನಾರಾವಿ ಶ್ರೀ ಮಹಮ್ಮಾಯಿ ದೇವಿಯ ಪುನಃ ಪ್ರತಿಷ್ಠಾ -ಸಾನಿಧ್ಯ ಕಲಶಾಭಿಷೇಕ ಮತ್ತು ಶ್ರೀ ಮಹಮ್ಮಾಯಿ ದೇವಿಯ ಗೊಂದೋಳು ಸೇವೆ ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ

Suddi Udaya

ಕಡಿರುದ್ಯಾವರದಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya
error: Content is protected !!