37.4 C
ಪುತ್ತೂರು, ಬೆಳ್ತಂಗಡಿ
March 10, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2025-26ನೇ ಶೈಕ್ಷಣಿಕ ವರ್ಷದ ಕ್ರೀಡಾಕೂಟವನ್ನು ಮಾ.6ರಂದು ನಡೆಸಲಾಯಿತು.

ಕಾಲೇಜಿನ ಪ್ರಾಂಶುಪಾಲ ಪ್ರೊ. ಸುರೇಶ್.ವಿ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಆಟಗಾರ, ಸರಕಾರಿ ಪ್ರೌಢಶಾಲೆ ಗುರುವಾಯನಕೆರೆಯ ದೈಹಿಕ ಶಿಕ್ಷಣ ಶಿಕ್ಷಕ ವೆಂಕಟೇಶ್ ಮಾತನಾಡಿ ಕ್ರೀಡೆಯ ಮಹತ್ವವನ್ನು ತಿಳಿಸುತ್ತಾ “ಉತ್ತಮ ಆರೋಗ್ಯಕ್ಕಾಗಿ ಕ್ರೀಡೆಯು ಅತ್ಯವಶ್ಯಕ” ಎಂದು ತಿಳಿಸಿದರು.

ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಪದ್ಮನಾಭ ಕೆ. , IQAC ಸಂಚಾಲಕ ಡಾ. ಕುಶಾಲಪ್ಪ ಎಸ್. , ಸ್ನಾತಕೋತ್ತರ ವಿಭಾಗದ ಸಂಚಾಲಕ ಡಾ. ರವಿ ಎಂ. ಏನ್. , ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ರಾಧಾಕೃಷ್ಣ ಹೆಚ್. ಬಿ. ಹಾಗೂ ವಿದ್ಯಾರ್ಥಿ ಕ್ರೀಡಾ ಪ್ರತಿನಿಧಿಗಳಾದ ವಿಘ್ನೇಶ್ ದ್ವಿತೀಯ ಎಂ.ಎ, ಹೇಮಂತ್ ತೃತೀಯ ಬಿ.ಎ, ಮಂಜುಳಾ ತೃತೀಯ ಬಿ.ಕಾಂ., ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಪಥಸಂಚಲನವನ್ನು ನಿರ್ವಹಣಾ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ದಿವ್ಯ ಪ್ರಭು ನಡೆಸಿದರು. ವೀಕ್ಷಿತಾ ಸ್ವಾಗತಿಸಿ, ದೀಪಾ ಕ್ರೀಡಾ ಪ್ರತಿಜ್ಞೆಯನ್ನು ಬೋಧಿಸಿದರು. ಸುಪ್ರಿಯಾ ಧನ್ಯವಾದವಿತ್ತರು, ಅನ್ವಿತಾ ಕಾರ್ಯಕ್ರಮ ನಿರೂಪಿಸಿದರು

Related posts

ದ.ಕ. ಜಿಲ್ಲಾ ಪಶುವೈದ್ಯಕೀಯ ಪರೀಕ್ಷಕರ ಸಂಘದಿಂದ ನಿವೃತ್ತಿಗೊಂಡ ಡಾ ಕೆ. ಜಯಕೀರ್ತಿ ಜೈನ್ ರಿಗೆ ಸನ್ಮಾನ

Suddi Udaya

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಸ್ಪಂದನ ಆಟೋ ಚಾಲಕ- ಮಾಲಕ ಸಂಘದ ಸದಸ್ಯರು: ರಸ್ತೆ ದುರಸ್ತಿ ಬಗ್ಗೆ ಮನವಿ, ಶಾಸಕರಿಂದ ಶೀಘ್ರ ಸರಿಪಡಿಸುವ ಭರವಸೆ

Suddi Udaya

ಯುವ ಕಾಂಗ್ರೆಸ್ ಗ್ರಾಮೀಣ ಬ್ಲಾಕ್ ನ ಉಪಾಧ್ಯಕ್ಷರಾಗಿ ಯತೀಶ್ ಯಕ್ಷ ಧರ್ಮಸ್ಥಳ ನೇಮಕ

Suddi Udaya

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ (ಸಅ) ಅವಹೇಳನ ಪೋಸ್ಟ್ ಪ್ರಕರಣ; ಚೇತನ್ ಹೊದ್ದೆಟ್ಟಿ ವಿರುದ್ಧ ಅಕ್ಬರ್ ಬೆಳ್ತಂಗಡಿಯಿಂದ ದೂರು ದಾಖಲು

Suddi Udaya

ಚಾರ್ಮಾಡಿ: ಬಸ್-ಸ್ಕೂಟಿ ಡಿಕ್ಕಿ:ಓರ್ವ ಸಾವು, ಮತ್ತೋರ್ವ ಗಂಭೀರ

Suddi Udaya
error: Content is protected !!