23.7 C
ಪುತ್ತೂರು, ಬೆಳ್ತಂಗಡಿ
June 9, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2025-26ನೇ ಶೈಕ್ಷಣಿಕ ವರ್ಷದ ಕ್ರೀಡಾಕೂಟವನ್ನು ಮಾ.6ರಂದು ನಡೆಸಲಾಯಿತು.

ಕಾಲೇಜಿನ ಪ್ರಾಂಶುಪಾಲ ಪ್ರೊ. ಸುರೇಶ್.ವಿ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಆಟಗಾರ, ಸರಕಾರಿ ಪ್ರೌಢಶಾಲೆ ಗುರುವಾಯನಕೆರೆಯ ದೈಹಿಕ ಶಿಕ್ಷಣ ಶಿಕ್ಷಕ ವೆಂಕಟೇಶ್ ಮಾತನಾಡಿ ಕ್ರೀಡೆಯ ಮಹತ್ವವನ್ನು ತಿಳಿಸುತ್ತಾ “ಉತ್ತಮ ಆರೋಗ್ಯಕ್ಕಾಗಿ ಕ್ರೀಡೆಯು ಅತ್ಯವಶ್ಯಕ” ಎಂದು ತಿಳಿಸಿದರು.

ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಪದ್ಮನಾಭ ಕೆ. , IQAC ಸಂಚಾಲಕ ಡಾ. ಕುಶಾಲಪ್ಪ ಎಸ್. , ಸ್ನಾತಕೋತ್ತರ ವಿಭಾಗದ ಸಂಚಾಲಕ ಡಾ. ರವಿ ಎಂ. ಏನ್. , ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ರಾಧಾಕೃಷ್ಣ ಹೆಚ್. ಬಿ. ಹಾಗೂ ವಿದ್ಯಾರ್ಥಿ ಕ್ರೀಡಾ ಪ್ರತಿನಿಧಿಗಳಾದ ವಿಘ್ನೇಶ್ ದ್ವಿತೀಯ ಎಂ.ಎ, ಹೇಮಂತ್ ತೃತೀಯ ಬಿ.ಎ, ಮಂಜುಳಾ ತೃತೀಯ ಬಿ.ಕಾಂ., ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಪಥಸಂಚಲನವನ್ನು ನಿರ್ವಹಣಾ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ದಿವ್ಯ ಪ್ರಭು ನಡೆಸಿದರು. ವೀಕ್ಷಿತಾ ಸ್ವಾಗತಿಸಿ, ದೀಪಾ ಕ್ರೀಡಾ ಪ್ರತಿಜ್ಞೆಯನ್ನು ಬೋಧಿಸಿದರು. ಸುಪ್ರಿಯಾ ಧನ್ಯವಾದವಿತ್ತರು, ಅನ್ವಿತಾ ಕಾರ್ಯಕ್ರಮ ನಿರೂಪಿಸಿದರು

Related posts

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಆಂತರಿಕ ಗುಣಮಟ್ಟದ ಭರವಸೆ ಕೋಶ ವಾಣಿಜ್ಯ ಮತ್ತು ಹೂಡಿಕೆದಾರರ ಜಾಗೃತಿ ಕಾರ್ಯಾಗಾರ

Suddi Udaya

ನಾವರ: ಮನೆಗೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya

ಯೂಟ್ಯೂಬರ್ ಗಳ ಮೇಲೆ ಹಲ್ಲೆ ಖಂಡಿಸಿ ಎಸ್.ಡಿ.ಪಿ.ಐ.ಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ಮೃತದೇಹ ಹೂತು ಹಾಕಿದ ಪ್ರಕರಣ: 8ನೇ ಗುರುತು ಮಾಡಿದ ಜಾಗದಲ್ಲಿ ಸಿಗದ ಕಳೇಬರ

Suddi Udaya

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಉರುವಾಲು :ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

Suddi Udaya
error: Content is protected !!