25.1 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಹಾವು ಕಡಿತ ಪ್ರಕರಣ-ಉಪ ಆರೋಗ್ಯ ಕೇಂದ್ರಗಳಲ್ಲಿ ತಕ್ಷಣದ ಚಿಕಿತ್ಸೆಗೆ ಕರುಣಾಕರ ಶಿಶಿಲರಿಂದ ಮನವಿ

ಬೆಳ್ತಂಗಡಿ: ತಾಲೂಕಿನ ಪಶ್ಚಿಮಘಟ್ಟದ ತಪ್ಪಲಿನಲ್ಲಿರುವ ಶಿಶಿಲ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹಾವು ಕಡಿತದ ಘಟನೆಗಳು ಹೆಚ್ಚಾಗಿ ಕಂಡುಬರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇತ್ತೀಚೆಗೆ ಶಿಶಿಲ ಗ್ರಾಮದಲ್ಲಿಯೇ ಒಂದು ತಿಂಗಳ ಅವಧಿಯಲ್ಲಿ ಮೂವರಿಗೆ ಹಾವು ಕಡಿದ ಘಟನೆ ನಡೆದಿದ್ದು, ಅವರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಇನ್ನೊಬ್ಬರು ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಳ್ಳದೆ ಚಿಕಿತ್ಸೆಯಲ್ಲಿ ಇದ್ದಾರೆ ಎಂದು ತಿಳಿದುಬಂದಿದೆ. ಈ ರೀತಿಯ ದುರ್ಘಟನೆಗಳಿಗೆ ಸೂಕ್ತ ಸಮಯದಲ್ಲಿ ಸರಿಯಾದ ಚಿಕಿತ್ಸೆ ದೊರೆಯದಿರುವುದೇ ಪ್ರಮುಖ ಕಾರಣವಾಗುತ್ತಿದೆ ಎಂಬ ಅಭಿಪ್ರಾಯ ಸ್ಥಳೀಯರಿಂದ ವ್ಯಕ್ತವಾಗುತ್ತಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಹಾವು ಕಡಿತದಂತಹ ತುರ್ತು ಸಂದರ್ಭಗಳಲ್ಲಿ ಸಮೀಪದಲ್ಲೇ ಅಗತ್ಯ ಚಿಕಿತ್ಸೆ ಲಭ್ಯವಿಲ್ಲದಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಆದ್ದರಿಂದ ಆರೋಗ್ಯ ಇಲಾಖೆ ತಕ್ಷಣ ಕ್ರಮ ಕೈಗೊಂಡು ಉಪ ಆರೋಗ್ಯ ಕೇಂದ್ರಗಳಲ್ಲಿ ರಕ್ತ ಪರೀಕ್ಷೆ ಹಾಗೂ ವಿಷಕಾರಿ ಹಾವುಗಳ ಕಡಿತಕ್ಕೆ ಒಳಗಾದವರಿಗೆ ನೀಡಬೇಕಾದ ಪ್ರಾಥಮಿಕ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಕುರಿತು ಕರುಣಾಕರ ಶಿಶಿಲ ಅವರು ಆರೋಗ್ಯ ಇಲಾಖೆಗೆ ಮನವಿ ಸಲ್ಲಿಸಿ, ಗ್ರಾಮೀಣ ಪ್ರದೇಶಗಳಲ್ಲಿ ಹಾವು ಕಡಿತದಂತಹ ತುರ್ತು ಪರಿಸ್ಥಿತಿಗಳಿಗೆ ತಕ್ಷಣ ಸ್ಪಂದಿಸುವ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ.

Related posts

ಕಾಂಗ್ರೇಸ್ ನಾಯಕ ಜಿನ್ನಪ್ಪ ಪೂಜಾರಿ ಕಾಪಿನಡ್ಕ ಬಿಜೆಪಿ ಸೇರ್ಪಡೆ

Suddi Udaya

ಶಿಲಾ೯ಲಿನಲ್ಲಿ ತಂದೆಯ ಮೇಲೆ ಪುತ್ರ, ಸೊಸೆಯಿಂದ ಹಲ್ಲೆ ಆರೋಪ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ತಾಲೂಕಿನಲ್ಲಿ ಅತೀ ಹೆಚ್ಚು ಕೃಷಿ ಉಪಕರಣ ಖರೀದಿಸಿದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಅಯ್ಯೋಧ್ಯೆ ಶ್ರೀ ರಾಮಲಲ್ಲಾನ ಪ್ರತಿಷ್ಟೆ ನಾಳ ದೇವಸ್ಥಾನದಲ್ಲಿ ನೇರಪ್ರಸಾರ, ಭಜನೆ, ಕರಸೇವಕರಿಗೆ ಸನ್ಮಾನ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!