August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥ ಧರ್ಮಸ್ಥಳಕ್ಕೆ ಪ್ರವೇಶ

ಧರ್ಮಸ್ಥಳ: ಭಗವಾನ್ ಸತ್ಯಸಾಯಿಬಾಬಾರ ಜನ್ಮಶತಮಾನೋತ್ಸವದ ಅಂಗವಾಗಿ ದೇಶದಾದ್ಯಂತ ಸಂಚರಿಸುತ್ತಿರುವ “ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥ”ವು ಧರ್ಮಸ್ಥಳಕ್ಕೆ ಆಗಮಿಸಿತು.

ಈ ರಥಯಾತ್ರೆ ಭಗವಾನ್ ಶ್ರೀ ಸತ್ಯಸಾಯಿಬಾಬಾರ ಪ್ರೀತಿ, ಸೇವೆ, ಸತ್ಯ, ಧರ್ಮ, ಶಾಂತಿ ಮತ್ತು ಅಹಿಂಸೆಯ ಸಂದೇಶಗಳನ್ನು ಸಮಾಜದ ಎಲ್ಲ ವರ್ಗದ ಜನರಿಗೆ ತಲುಪಿಸುವ ಉದ್ದೇಶದಿಂದ ಆಯೋಜಿಸಲಾಗಿದೆ. ದೇಶದ ವಿವಿಧ ಭಾಗಗಳಲ್ಲಿ ಸಂಚರಿಸುತ್ತಿರುವ ಈ ರಥವು ಧರ್ಮಸ್ಥಳಕ್ಕೆ ಆಗಮಿಸಿದ ಸಂದರ್ಭದಲ್ಲಿ ಭಕ್ತರು ಭಕ್ತಿಭಾವದಿಂದ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರೇಮ ಪ್ರವಾಹಿನಿ ರಥವನ್ನು ಬರಮಾಡಿಕೊಂಡು, ಭಗವಾನ್ ಸತ್ಯಸಾಯಿಬಾಬಾರ ಆದರ್ಶಗಳು ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರವಹಿಸಿವೆ ಎಂದು ಹೇಳಿದರು. ಸಮಾಜದಲ್ಲಿ ಸೇವಾ ಮನೋಭಾವ, ಪ್ರೀತಿ ಮತ್ತು ಸಹಾನುಭೂತಿಯ ಮೌಲ್ಯಗಳನ್ನು ಬಲಪಡಿಸುವುದರಲ್ಲಿ ಸತ್ಯಸಾಯಿ ಚಳವಳಿ ಮಹತ್ತರ ಕೊಡುಗೆ ನೀಡುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.

ರಥದೊಂದಿಗೆ ಭಗವಾನ್ ಸತ್ಯಸಾಯಿ ಬಾಬಾರ ಜೀವನ ಮತ್ತು ಸಂದೇಶಗಳನ್ನು ಪರಿಚಯಿಸುವ ಪ್ರದರ್ಶನ, ಭಕ್ತಿಗೀತೆಗಳು ಹಾಗೂ ಆಧ್ಯಾತ್ಮಿಕ ಕಾರ್ಯಕ್ರಮಗಳು ನಡೆಯಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದರ್ಶನ ಪಡೆದು ಆಶೀರ್ವಾದ ಪಡೆದರು.

ಭಗವಾನ್ ಶ್ರೀ ಸತ್ಯಸಾಯಿಬಾಬಾರ ಜನ್ಮದಿನದ ಶತವರ್ಷ ಸಂಭ್ರಮಾಚರಣೆಯ ಅಂಗವಾಗಿ ಪ್ರೇಮ ಪ್ರವಾಹಿನಿ ರಥಯಾತ್ರೆ ದೇಶದ ವಿವಿಧ ತೀರ್ಥಕ್ಷೇತ್ರಗಳು ಮತ್ತು ನಗರಗಳಲ್ಲಿ ಸಂಚರಿಸಿ ಜನರಲ್ಲಿ ಮಾನವೀಯ ಮೌಲ್ಯಗಳ ಅರಿವು ಮೂಡಿಸುವ ಕಾರ್ಯವನ್ನು ಮಾಡುತ್ತಿದೆ.

ಕರ್ನಾಟಕ ರಾಜ್ಯದ ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಯ ಅಧ್ಯಕ್ಷರಾದ ಪದ್ಮನಾಭನ್ ಪೈ, ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ.ಸಿ. ಟ್ರಸ್ಟ್ನ ಕಾರ್ಯನಿರ್ವಾಹಕ ನಿರ್ದೇಶಕರಾದ ಅನಿಲ್ ಕುಮಾರ್, ಯೋಜನೆಯ ಟ್ರಸ್ಟಿ ಡಾ. ಹರೀಶ್ ಕೃಷ್ಣಸ್ವಾಮಿ, ದೇವಳದ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣ ರಾವ್, ರಾಜೇಂದ್ರ ದಾಸ್ ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ ಬಿವೋಕ್‌ ವಿದ್ಯಾರ್ಥಿಗಳಿಗೆ ಸ್ಟಾಪ್‌ ಮೋಶನ್‌ ಅನಿಮೇಶನ್‌ ಕಾರ್ಯಾಗಾರ

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು-ಪಟ್ರಮೆ ಇದರ 2024ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಧರೆ ಕುಸಿತ : ಪೊಲೀಸ್ ಠಾಣೆಯ ಕಾಂಪೌಂಡ್ ಗೋಡೆ ಕುಸಿಯುವ ಸಾಧ್ಯತೆ

Suddi Udaya

ವೈಬ್ರೆಂಟ್ ಕಾಲೇಜಿನಲ್ಲಿ ಪೋಕ್ಸೋ ಕಾಯಿದೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಶ್ರೀಮತಿ ಮಲ್ಲಿಕಾ ಪಕ್ಕಳ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

Suddi Udaya
error: Content is protected !!