ಕುವೆಟ್ಟು; ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಛಾಯಾಗ್ರಾಹಕ ಸದಸ್ಯರಿಗಾಗಿ ನುರಿತ ತರಬೇತುದಾರ ಬಾಬು ಜಿ ಎಸ್ ಮೈಸೂರು ಇವರಿಂದ ಫೋಟೋಶಾಪ್ ಮತ್ತು ಲೈಟ್ ರೂಮ್ ಇದರ ಬಗ್ಗೆ ಒಂದು ದಿನದ ಕಾರ್ಯಗಾರವನ್ನು ಮಾ10 ರoದು ಗುರುವಾಯನಕೆರೆ ಛಾಯಾಭವನದಲ್ಲಿ ಹಮ್ಮಿಕೊಳ್ಳಲಾಯಿತು.
ಬಾಬು ಜಿ ಎಸ್ ದೀಪ ಬೆಳಗಿಸಿ ಕಾರ್ಯಗಾರದ ಬಗ್ಗೆ ವಾಸ್ತವಿಕವಾಗಿ ಮಾತನಾಡಿದರು. ವಲಯದ ಅಧ್ಯಕ್ಷ ರವಿ ಪೂಜಾರಿ ನಾರಾವಿ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ವಲಯದ ಗೌರವಾಧ್ಯಕ್ಷ ವಿಲ್ಸನ್ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿ ದಾಮೋದರ ಗುರುವಾಯನಕೆರೆ, ಕೋಶಾಧಿಕಾರಿ ಸುಜಿತ್ ರೈ ಪದ್ಮುಂಜ, ಛಾಯಾ ಕಾರ್ಯದರ್ಶಿ ಸಂದೇಶ್ ನಿಡ್ಲೆ, ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿ ಸುರೇಶ್ ಬಿ ಕೌಡoಗೆ ಉಪಸಿದ್ಧರಿದ್ದರು.
ಕಾರ್ಯಗಾರದಲ್ಲಿ ಸುಮಾರು 60 ಸದಸ್ಯರು ಹೆಸರನ್ನು ನೋಂದಾವಣೆ ಮಾಡಿಕೊಂಡರು ವಲಯದ ಪದಾಧಿಕಾರಿಗಳು ಗೌರವ ಸಲಹೆಗಾರರು ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಗಣೇಶ್ ಹೆಗ್ಡೆ ನಾರಾವಿ ಪ್ರಾರ್ಥನೆ ಗೈದರು ವಲಯದ ಗೌರವಾಧ್ಯಕ್ಷ ವಿಲ್ಸನ್ ಬೆಳ್ತಂಗಡಿ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು ಕಾರ್ಯದರ್ಶಿ ದಾಮೋದರ್ ಧನ್ಯವಾದ ನೀಡಿದರು













