25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಿಕ್ಷಣ ಸಂಸ್ಥೆ

ಎಲ್‌.ಸಿ.ಆರ್‌. ಇಂಡಿಯನ್ ಡಿಗ್ರಿ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ

ಎಲ್‌.ಸಿ.ಆರ್‌. ಇಂಡಿಯನ್ ಡಿಗ್ರಿ ಕಾಲೇಜು, ಕಕ್ಯಪದವುದಲ್ಲಿ ಪದವಿ ವಿಭಾಗದ ವಿದ್ಯಾರ್ಥಿನಿಯರಿಗಾಗಿ ಮಹಿಳಾ ದಿನಾಚರಣೆ ಕಾರ್ಯಕ್ರಮವು ಮಾ.9ರಂದು ಆಯೋಜಿಸಲಾಯಿತು.

ಸಂಪನ್ಮೂಲ ವ್ಯಕ್ತಿಗಳಾದ ಪಿಯುಸಿ ವಿಭಾಗದ ಮುಖ್ಯಸ್ಥೆ ಸೌಮ್ಯ ಎನ್ ಹಾಗೂ ವಾಣಿಜ್ಯ ವಿಭಾಗದ ಉಪನ್ಯಾಸಕಿ ಚೈತ್ರ ತಮ್ಮ ಉಪನ್ಯಾಸದಲ್ಲಿ ಮಹಿಳೆಯರ ಶಿಕ್ಷಣದ ಮಹತ್ವ, ಸ್ವಾವಲಂಬನೆ ಮತ್ತು ಆತ್ಮವಿಶ್ವಾಸದ ಅಗತ್ಯತೆಯ ಕುರಿತು ವಿದ್ಯಾರ್ಥಿನಿಯರಿಗೆ ಪ್ರೇರಣಾದಾಯಕವಾಗಿ ವಿವರಿಸಿದರು.

ಇದೇ ಸಂದರ್ಭದಲ್ಲಿ ಮಾನಸಿಕ ಆರೋಗ್ಯದ ಮಹತ್ವದ ಬಗ್ಗೆ ಸಹ ವಿದ್ಯಾರ್ಥಿನಿಯರಿಗೆ ತಿಳಿಸಿದರು. ಇಂದಿನ ಕಾಲದಲ್ಲಿ ವಿದ್ಯಾರ್ಥಿಗಳು ಅನುಭವಿಸುವ ಒತ್ತಡ ಹಾಗೂ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಮಾನಸಿಕವಾಗಿ ಸದೃಢರಾಗಿರುವುದು ಅತ್ಯಂತ ಅಗತ್ಯವೆಂದು ಹೇಳಿದರು. ಧನಾತ್ಮಕ ಚಿಂತನೆ, ಉತ್ತಮ ಸ್ನೇಹ ಸಂಬಂಧಗಳು ಹಾಗೂ ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವುದು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯಕವಾಗುತ್ತದೆ ಎಂದು ಅವರು ತಿಳಿಸಿದರು

ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಜೋಸ್ಟಾನ್ ಲೋಬೋ, ಸಂಯೋಜಕ ಯಶವಂತ ಜಿ . ನಾಯಕ್, ವಿಭಾಗದ ಮುಖ್ಯಸ್ಥೆ ದೀಕ್ಷಿತಾ ಶೆಟ್ಟಿ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತನಾಲ್ಕನೆ ವರ್ಧಂತ್ಯುತ್ಸವ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ನಾವೂರು: ಪಿಲತ್ತಡಿ ನಿವಾಸಿ ಇಂದಿರ ನಿಧನ

Suddi Udaya

ಬೆಳ್ತಂಗಡಿ : ತ್ರಿ ಸ್ಟಾರ್ ವೈನ್ಸ್ ಶಾಪ್ ಕಳ್ಳತನ ಪ್ರಕರಣ: ಪ್ರಮುಖ ಆರೋಪಿ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಗೀತೆ ಜತೆ ಸಾಹಿತ್ಯ ಸಾಂಗತ್ಯ

Suddi Udaya
error: Content is protected !!