23.9 C
ಪುತ್ತೂರು, ಬೆಳ್ತಂಗಡಿ
April 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕರೆ: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಘಟಿಕೋತ್ಸವ

ಗುರುವಾಯನಕೆರೆ:ಶ್ರಮಕ್ಕೆ ತಕ್ಕ ಫಲ ದೊರಕುತ್ತದೆ. ಹಾಗಾಗಿ ವಿದ್ಯಾರ್ಥಿಗಳು ನಿರಂತರ ಪ್ರಯತ್ನಶೀಲರಾಗಬೇಕು. ಖಂಡಿತ ತಮ್ಮ- ತಮ್ಮ ಗುರಿ ತಲುಪಲು ಸಾಧ್ಯ ಎಂದು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಹೇಳಿದರು.

ಅವರು ಗುರುವಾಯನಕೆರೆ ವಿದ್ಯಾ ಸಾಗರ ಕ್ಯಾಂಪಸ್ ನ ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ಕಿಂಡರ್‌ಗಾರ್ಡನ್‌ (K.G) ಮಕ್ಕಳ ಘಟಿಕೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಕಲಿಕೆ ಹೊರೆಯಾಗದೆ, ಸಂತೋಷದಿಂದ ಅಭ್ಯಾಸ ಮಾಡುವಂಥ ವಾತಾವರಣ ಶಾಲೆಗಳಲ್ಲಿ ಇರಬೇಕು. ಹಾಗಾಗಿ ನಮ್ಮ ಶಾಲೆಯಲ್ಲಿ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳನ್ನು ಕೂಡಾ ನಿರಂತರವಾಗಿ ಹಮ್ಮಿ ಕೊಳ್ಳುತ್ತಾ ಬಂದಿದ್ದೇವೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಎಕ್ಸೆಲ್ ಸಂಸ್ಥೆಯ ಆಡಳಿತಾಧಿಕಾರಿಯಾದ ಕೀರ್ತಿ ನಿಧಿ ಜೈನ್ ಪಾಲ್ಗೊಂಡರು. ಶಾಲಾ ಮುಖ್ಯ ಶಿಕ್ಷಕಿಯಾದ ಸಹನಾ ಜೈನ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಸಂಯೋಜಕಿ ಲೀನಾ ಫ್ಲೋರಿನ್ ಪಿಂಟೋ ಕಾರ್ಯಕ್ರಮವನ್ನು ನಿರೂಪಿಸಿ, ಸಹ ಶಿಕ್ಷಕಿಯಾದ ಸ್ವಾತಿ ಅತಿಥಿಗಳನ್ನು ಸ್ವಾಗತಿಸಿ, ಶಿಕ್ಷಕಿ ಪವಿತ್ರ ಕೋಟ್ಯಾನ್ ವಂದಿಸಿದರು.ಸಮಾರಂಭದಲ್ಲಿ ವಿದ್ಯಾರ್ಥಿಗಳ ಹೆಸರನ್ನು ಶಿಕ್ಷಕಿ ಗೀತಾ ಓದಿ, ಮಕ್ಕಳನ್ನು ವೇದಿಕೆಗೆ ಆಹ್ವಾನಿಸಿದರು. ಶಿಕ್ಷಕಿ ಚೇತನಾ ಸಹಕರಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮ: ವಿದ್ಯಾರ್ಥಿಗಳು ವೇದಿಕೆಗೆ ಬಂದು ಅಧ್ಯಕ್ಷರಿಂದ ತಮ್ಮ ಪ್ರಮಾಣಪತ್ರಗಳನ್ನು ಸ್ವೀಕರಿಸಿದರು. ಎಕ್ಸೆಲ್ ಸಂಸ್ಥೆಯ ಅಧ್ಯಕ್ಷರು ಎಲ್ಲಾ ಕೆಜಿ ವಿದ್ಯಾರ್ಥಿಗಳಿಗೆ ಕಂಚಿನ ದೀಪವನ್ನು ನೀಡಿ ಶುಭ ಹಾರೈಸಿದರು. ಕೊನೆಯಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Related posts

ಸವಣಾಲು, ಶಿರ್ಲಾಲು-ಕರಂಬಾರು ಗ್ರಾಮಗಳ ಪ.ಜಾತಿ ಕಾಲೋನಿಗಳಲ್ಲಿ ಸಾಮರಸ್ಯದ ಸಂಕ್ರಾತಿ ಹಬ್ಬ ಆಚರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಬಯಲಾಟ ಸಮಿತಿ ನಾವರ ವತಿಯಿಂದ ನಾಗಾರತಿ ಯಕ್ಷಗಾನ ಪ್ರದರ್ಶನ

Suddi Udaya

ಸುಳ್ಯ ನಗರ ಪಂಚಾಯಿತಿ ಮುಖ್ಯಾಧಿಕಾರಿ ಎಂ.ಎಚ್‌. ಸುಧಾಕರ್ ವರ್ಗಾವಣೆ

Suddi Udaya

ಎಸ್. ಎಸ್.ಎಲ್.ಸಿ ಫಲಿತಾಂಶ: ಮುಂಡಾಜೆ ಅನುದಾನಿತ ಪ್ರೌಢಶಾಲೆಗೆ ಶೇ. 98.24 ಫಲಿತಾಂಶ

Suddi Udaya

ಲಾಯಿಲ: ರಸ್ತೆ ಬದಿಗೆ ಬಿದ್ದ ಲಾರಿ

Suddi Udaya

ಬೆಳ್ತಂಗಡಿಯಲ್ಲಿ ಸಂವಿಧಾನ ಜಾಗೃತಿ ಜಾಥದ ಅಂಗವಾಗಿ ಬೈಕ್ ರ್ಯಾಲಿ

Suddi Udaya
error: Content is protected !!