37.4 C
ಪುತ್ತೂರು, ಬೆಳ್ತಂಗಡಿ
March 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಚಾರ್ಮಾಡಿ ಪ್ರದೇಶದಲ್ಲಿ ಮತ್ತೆ ಪ್ರತ್ಯಕ್ಷಗೊಂಡ ಚಿರತೆಗಳು

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಹೊಸಮಠ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ನಡೆಸುತ್ತಿದ್ದ ಕಾರ್ಮಿಕರೊಬ್ಬರಿಗೆ ಮೂರು ಚಿರತೆಗಳು ಎದುರಾದ ಘಟನೆ ಮಾ.10 ರಂದು ಮುಂಜಾನೆ 4 ಗಂಟೆ ವೇಳೆಗೆ ನಡೆದಿದೆ. ಚಿರತೆಯನ್ನು ಕಂಡ ವ್ಯಕ್ತಿ ಭಯ ಭೀತರಾಗಿ ತಕ್ಷಣವೇ ಓಡಿ ಹೋಗಿ ತಪ್ಪಿಸಿಕೊಂಡಿದ್ದಾರೆ. ಕೂಡಲೇ ಈ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಿ ಚಿರತೆಗಳನ್ನು ಕಾಡಿಗೆ ಅಟ್ಟಲಾಗಿದೆ.

ಕೊಂಚ ಬಿಡುವು ನೀಡಿ ಮತ್ತೆ ಕಾಣಿಸಿದ ಚಿರತೆ:
ಕಳೆದ ಜನವರಿ ಹಾಗೂ ಫೆಬ್ರವರಿ ತಿಂಗಳ ಮಧ್ಯೆದವರೆಗೆ ಬೆಳ್ತಂಗಡಿ ಪಟ್ಟಣ, ಕಲ್ಮಂಜ, ಮುಂಡಾಜೆ, ನಡ, ಕಳಿಯ, ವೇಣೂರು, ಅಂಡಿಂಜೆ, ಸುಲ್ಕೇರಿ, ತಣ್ಣೀರುಪಂತ, ಮಚ್ಚಿನ ಸಹಿತ ನಾನಾ ಗ್ರಾಮಗಳಲ್ಲಿ ಚಿರತೆಗಳು ಸಂಚಾರ ನಡೆಸಿ ಜನರಲ್ಲಿ ಭಯದ ಭೀತಿಯ ವತಾವರಣ ನಿರ್ಮಿಸಿದ್ದವು. ನಡ ಗ್ರಾಮದ ಕನ್ಯಾಡಿ ಎಂಬಲ್ಲಿ ವ್ಯಕ್ತಿಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿತ್ತು. ಮುಂಡಾಜೆಯ ಸೀಟು ಮೂರು ಮಾರ್ಗದ ಬಳಿ ಶಾಲಾ ಬಾಲಕನೋರ್ವನಿಗೆ ಚಿರತೆ ಎದುರಾದ ಘಟನೆಯು ನಡೆದಿತ್ತು. ಅನೇಕ ಗ್ರಾಮಗಳಲ್ಲಿ ಮುಂಜಾನೆ ಟ್ಯಾಪಿಂಗ್ ನಡೆಸುವ ವ್ಯಕ್ತಿಗಳಿಗೆ ಪದೇ ಪದೇ ಚಿರತೆಗಳು ಎದುರಾಗಿದ್ದವು.

ಕಳೆದ 20 ದಿನಗಳಿಂದ ಚಿರತೆಗಳ ಓಡಾಟದ ವರದಿ ಪ್ರಕಟವಾಗಿರಲಿಲ್ಲ ಆದರೆ ಇದೀಗ ಚಿರತೆಗಳು ಮತ್ತೆ ಕಾಣಿಸಿಕೊಂಡಿವೆ. ಒಟ್ಟಿನಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಚಿರತೆವಿರುವುದು ಸ್ಪಷ್ಟಗೊಂಡಿದೆ. ಬೆಳ್ತಂಗಡಿ ನಗರಕ್ಕೂ ಚಿರತೆ ಲಗ್ಗೆ ಇಟ್ಟಿದ್ದವು, ನಡ ಗ್ರಾಮದಲ್ಲಿ ಚಿರತೆಯೊಂದು ಬೋನ್‌ನಲ್ಲಿ ಸೆರೆಯಾಗಿತ್ತು.

Related posts

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಸ್ವಾತಿ ಫಡಕೆಯವರಿಗೆ ಡಾಕ್ಟರೇಟ್ ಪದವಿ

Suddi Udaya

ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಉದ್ಯೋಗ ಪ್ರೇರಣಾ ಶಿಬಿರ

Suddi Udaya

ಬರೋಡಾದ ಶಶಿ ಕ್ಯಾಟರಿಂಗ್ ಸರ್ವೀಸಸ್ ಮಾಲಕ,ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಮುಂದಾಳು ಪ್ರಸಿದ್ದ ಉದ್ಯಮಿ ಶಶಿಧರ ಬಿ.ಶೆಟ್ಟಿ ನವಶಕ್ತಿಯವರಿಂದ ದೇವಸ್ಥಾನಗಳಿಗೆ ರೂ.30 ಲಕ್ಷ ದೇಣಿಗೆ

Suddi Udaya

ತೋಟತ್ತಾಡಿ ನಿವಾಸಿ ರೋಸಮ್ಮ ಜೋಸೆಫ್ ನಿಧನ

Suddi Udaya

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ: ಅಸಮಪ೯ಕ ಕಾಮಗಾರಿ ನಿರ್ವಹಣೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ

Suddi Udaya

ಧರ್ಮಸ್ಥಳ :ಅಜಿಕುರಿ ಹೆಜ್ಜೇನು ದಾಳಿಯಿಂದ ಆಸ್ಪತ್ರೆಗೆ ದಾಖಲಾದ ಗಾಯಾಳುಗಳ ಆರೋಗ್ಯ ವಿಚಾರಿಸಿದ ರಕ್ಷಿತ್ ಶಿವರಾಂ

Suddi Udaya
error: Content is protected !!