28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ನೆರಿಯ: ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಗೆ ಡಿವೈಎಸ್ಪಿ ಸಿ.ಕೆ ರೋಹಿಣಿ ಭೇಟಿ

ಬೆಳ್ತಂಗಡಿ ಪೋಲಿಸ್ ಉಪ ವಿಭಾಗದ ಡಿವೈಎಸ್ಪಿ ಸಿ.ಕೆ ರೋಹಿಣಿ ರವರು ನೆರಿಯ ಗ್ರಾಮದ ಆಲಂಗಾಯಿಯಲ್ಲಿರುವ ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಗೆ ಮಾ.8ರಂದು ಭೇಟಿ ನೀಡಿದರು.

ಈ ವಸತಿ ಶಾಲೆಯ ಆದಿವಾಸಿ ಮಕ್ಕಳೊಂದಿಗೆ ಬೆರೆತು , ಮಾತುಕತೆ ನಡೆಸಿ , ಮಕ್ಕಳಿಗೆ ಕಾನೂನಿನ ಪಾಠ ಮಾಡಿದರು. ಸರ್ಕಾರದ ಸೌಲಭ್ಯಗಳನ್ನು ಚೆನ್ನಾಗಿ ಬಳಸಿಕೊಂಡು , ಉನ್ನತ ಶಿಕ್ಷಣ ಪಡೆದು ಉನ್ನತ ಸ್ಥಾನಕ್ಕೆ ಏರಬೇಕು ಆಗ ಸರ್ಕಾರದ ಕಾರ್ಯಕ್ರಮಗಳು ಸಾರ್ಥಕತೆಯಾಗುತ್ತದೆ ಎಂದರು.

ಮಧ್ಯಾಹ್ನ ಮಕ್ಕಳ ಜೊತೆಗೆ ಊಟ ಮಾಡಿದ ಡಿವೈಎಸ್ಪಿ ರವರು ಹಳೆಯ ವಸತಿ ನಿಲಯ ಕಟ್ಟಡವನ್ನು ವೀಕ್ಷಣೆ ಮಾಡಿದರು. ಜೊತೆಗೆ 5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ವಸತಿಶಾಲಾ ಕಟ್ಟಡವನ್ನು ವೀಕ್ಷಿಸಿ ಸಂತಸಗೊಂಡರು. ನೂತನ ಕಟ್ಟಡದ ಉದ್ಘಾಟನೆಯನ್ನು ಆದಷ್ಟು ಬೇಗ ನಡೆಸುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಪೋಲಿಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ , ಧರ್ಮಸ್ಥಳ ಪೋಲಿಸ್ ಠಾಣೆಯ ಸಿಬ್ಬಂದಿಗಳು ಜೊತೆಗಿದ್ದರು. ಶಾಲಾ ಶಿಕ್ಷಕರು , ಹಾಸ್ಟೆಲ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಲಕ್ಷ್ಮೀ ಜನಾರ್ದನ ಹಾಗೂ ಶ್ರೀ ಉಮಾಮಹೇಶ್ವರ ಸಾನಿಧ್ಯದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಹಾಗೂ ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಮತ್ತು ಶ್ರೀ ಲಕ್ಷ್ಮೀ ಜನಾರ್ದನ ಹಾಗೂ ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ‌ ಹಾಜರಾದ ಬುರುಡೆ ಚಿನ್ನಯ್ಯ ವಾಪಸ್ ಶಿವಮೊಗ್ಗ ಜೈಲಿಗೆ ಭದ್ರತೆಯಲ್ಲಿ ಪ್ರಯಾಣ

Suddi Udaya

ಉಜಿರೆ: ಮಹಿಳೆಯರಿಗಾಗಿ 38ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮತ್ತು ಕ್ಯಾಲೆಂಡರ್ ಬಿಡುಗಡೆ

Suddi Udaya

ನಡ ಗ್ರಾ.ಪಂ. ವತಿಯಿಂದ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ವಾಣಿ ಪಿಯು ಕಾಲೇಜಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗೀಯ ಅಧಿಕಾರಿ ಶ್ರೀಮತಿ ಸವಿತಾ ಎರ್ಮಾಳ್ ಭೇಟಿ

Suddi Udaya
error: Content is protected !!