24 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ನೆರಿಯ: ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಗೆ ಡಿವೈಎಸ್ಪಿ ಸಿ.ಕೆ ರೋಹಿಣಿ ಭೇಟಿ

ಬೆಳ್ತಂಗಡಿ ಪೋಲಿಸ್ ಉಪ ವಿಭಾಗದ ಡಿವೈಎಸ್ಪಿ ಸಿ.ಕೆ ರೋಹಿಣಿ ರವರು ನೆರಿಯ ಗ್ರಾಮದ ಆಲಂಗಾಯಿಯಲ್ಲಿರುವ ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಗೆ ಮಾ.8ರಂದು ಭೇಟಿ ನೀಡಿದರು.

ಈ ವಸತಿ ಶಾಲೆಯ ಆದಿವಾಸಿ ಮಕ್ಕಳೊಂದಿಗೆ ಬೆರೆತು , ಮಾತುಕತೆ ನಡೆಸಿ , ಮಕ್ಕಳಿಗೆ ಕಾನೂನಿನ ಪಾಠ ಮಾಡಿದರು. ಸರ್ಕಾರದ ಸೌಲಭ್ಯಗಳನ್ನು ಚೆನ್ನಾಗಿ ಬಳಸಿಕೊಂಡು , ಉನ್ನತ ಶಿಕ್ಷಣ ಪಡೆದು ಉನ್ನತ ಸ್ಥಾನಕ್ಕೆ ಏರಬೇಕು ಆಗ ಸರ್ಕಾರದ ಕಾರ್ಯಕ್ರಮಗಳು ಸಾರ್ಥಕತೆಯಾಗುತ್ತದೆ ಎಂದರು.

ಮಧ್ಯಾಹ್ನ ಮಕ್ಕಳ ಜೊತೆಗೆ ಊಟ ಮಾಡಿದ ಡಿವೈಎಸ್ಪಿ ರವರು ಹಳೆಯ ವಸತಿ ನಿಲಯ ಕಟ್ಟಡವನ್ನು ವೀಕ್ಷಣೆ ಮಾಡಿದರು. ಜೊತೆಗೆ 5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ವಸತಿಶಾಲಾ ಕಟ್ಟಡವನ್ನು ವೀಕ್ಷಿಸಿ ಸಂತಸಗೊಂಡರು. ನೂತನ ಕಟ್ಟಡದ ಉದ್ಘಾಟನೆಯನ್ನು ಆದಷ್ಟು ಬೇಗ ನಡೆಸುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಪೋಲಿಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ , ಧರ್ಮಸ್ಥಳ ಪೋಲಿಸ್ ಠಾಣೆಯ ಸಿಬ್ಬಂದಿಗಳು ಜೊತೆಗಿದ್ದರು. ಶಾಲಾ ಶಿಕ್ಷಕರು , ಹಾಸ್ಟೆಲ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ರಂಗ ಮಂದಿರ ನಿರ್ಮಾಣಕ್ಕೆ ಅನುದಾನಕ್ಕೆ ಮನವಿ

Suddi Udaya

ಧರ್ಮಸ್ಥಳದಲ್ಲಿ ನಡೆಯುವ ಸತ್ಯದರ್ಶನ ಕಾರ್ಯಕ್ರಮದ ಬಗ್ಗೆ ಕಣಿಯೂರುನಲ್ಲಿ ಪೂರ್ವಭಾವಿ ಸಭೆ

Suddi Udaya

ಸಿಯೋನ್ ಆಶ್ರಮ : ಮಾನಸಿಕ ಅಸ್ವಸ್ಥತೆಯಿಂದ ಚೇತರಿಸಿಕೊಂಡು ಮನೆ ಸೇರಿದ ಸಂದೀಪ್ ಪರಹೈ

Suddi Udaya

ಅರ್ಕಜೆ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಅಕ್ರಮ ಪ್ರವೇಶ ಮಾಡಿ ಯುವಕನಿಗೆ ಹಲ್ಲೆ ಮಾಡಿ ಜೀವ ಬೆದರಿಕೆ

Suddi Udaya

ಕನ್ಯಾಡಿಯಲ್ಲಿ ಪ್ರತಿಷ್ಠಿತ ಸೇವಕ್ ಸರ್ವಿಸಸ್ ಶುಭಾರಂಭ

Suddi Udaya
error: Content is protected !!