36.1 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಫೋಟೊಗ್ರಾಫಿ ಸ್ಫರ್ಧೆ: ಡಾ. ಚಂದ್ರಹಾಸ್ ಚಾರ್ಮಾಡಿ ಪ್ರಥಮ

ಬೆಳ್ತಂಗಡಿ: ಬ್ಲಾಕ್ ಬಾಕ್ಸ್ ಸ್ಟುಡಿಯೋ ಆಯೋಜಿಸಿದ ಆನ್ ಲೈನ್ ಫೋಟೊಗ್ರಾಫಿ ಸ್ಪರ್ಧೆಯಲ್ಲಿ ಡಾ. ಚಂದ್ರಹಾಸ್ ಚಾರ್ಮಾಡಿಯವರು ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.

ಡಾ|| ಡಿ.ವೀರೇಂದ್ರ ಹೆಗ್ಗಡೆ ಮತ್ತು ಡಾ|| ಹೇಮಾವತಿ ವೀ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅನಿಲ್ ಕುಮಾರ್ ಎಸ್.ಎಸ್. ರವರ ಪ್ರಧಾನ ಸಂಪಾದಕತ್ವದಲ್ಲಿ ಪ್ರಕಟಗೊಳ್ಳುತ್ತಿರುವ ರಾಜ್ಯದಾದ್ಯಂತ 8 ಲಕ್ಷ ಪ್ರಸರಣವನ್ನು ಹೊಂದಿರುವ ನಿರಂತರ’ ಪತ್ರಿಕೆಯ ಸಂಪಾದಕರಾದ ಡಾ.ಚಂದ್ರಹಾಸ್ ಚಾರ್ಮಾಡಿಯವರು ಕಳೆದ 15 ವರ್ಷಗಳಿಂದ ಸೌತ್ ಕೆನರಾ ಫೋಟೋಗ್ರಾಫರ್ಸ್ ಆಸೋಸಿಯೇಶನ್ ಬೆಳ್ತಂಗಡಿ ವಲಯದ ಸದಸ್ಯರಾಗಿದ್ದಾರೆ. ಬೆಳ್ತಂಗಡಿ ಪತ್ರಕರ್ತರ ಸಂಘದ ಸದಸ್ಯರು ಆಗಿರುವ ಇವರು ರಾಜ್ಯ ಸರಕಾರದ ಆಕ್ರೆಡೆಶನ್ ಪಡೆದಿರುವ ಪತ್ರಕರ್ತರಲ್ಲಿ ಓರ್ವರಾಗಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತ್ತಕೋತ್ತರ ಪದವಿ, ಕನ್ನಡದಲ್ಲಿ ಎಂ.ಎ., ಹಂಪಿ ವಿಶ್ವವಿದ್ಯಾನಿಲಯದಡಿ ಪಿಹೆಚ್‌.ಡಿ. ಪದವಿಯನ್ನು ಪಡೆದಿದ್ದಾರೆ.

ಇವರ ಸುಮಾರು ಎರಡು ಸಾವಿರದಷ್ಟು ಬರಹಗಳು ರಾಜ್ಯದ ಬೇರೆ ಬೇರೆ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ‘ನೂರೊಂದು ಯಶೋಗಾಥೆಗಳು’, ‘ನುಡಿಬರಹ’, ‘ಕೆರೆಯ ಕಥೆಗಳು’, ‘ಅಂಗಡಿ ಮಜಲು’ ಮುಂತಾದ ಪುಸ್ತಕಗಳನ್ನು ಪ್ರಕಟಿಸಿದ್ದಾರೆ‌. ಇವರಿಗೆ ಈಗಾಗಲೇ ಪತ್ರಕರ್ತರಿಗೆ ಕೊಡಲ್ಪಡುವ ಪ.ಗೋ.ಪ್ರಶಸ್ತಿ, ಸೌರಭ ರಾಜ್ಯ ಪ್ರಶಸ್ತಿ, ಕೆಡಬ್ಲ್ಯುಜೆ ಪ್ರಶಸ್ತಿಗಳು ದೊರೆತಿವೆ.

Related posts

ಶಿಶಿಲ ಸ.ಉ. ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಕಾಮಗಾರಿ ಬಗ್ಗೆ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಬದುಕು ಕಟ್ಟೋಣ ತಂಡದಿಂದ ಸಮಾಲೋಚನಾ ಸಭೆ

Suddi Udaya

ಪಟ್ರಮೆ : ಕಲೆಂಬಿಕಾಡು ನಿವಾಸಿ ನೋಣಯ್ಯ ಗೌಡ ನಿಧನ

Suddi Udaya

ಖಾಸಗಿ ವಿಮಾಕಂಪೆನಿಗಳಿಂದ ವಿಮಾ ಕಾನೂನಿನ ಉಲ್ಲಂಘನೆ ಆರೋಪ: ಜನಸಾಮಾನ್ಯರಿಗೆ ಅನ್ಯಾಯ: ಹಷ೯ ಡಿ’ಸೋಜ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ತೆಕ್ಕಾರು: ಹದಗೆಟ್ಟ ಗೋದಾಮುಗುಡ್ಡೆ – ಗೋವಿಂದರಗುಳಿ- ಸರಳಿಕಟ್ಟೆ ರಸ್ತೆ: ದುರಸ್ತಿಗೊಳಿಸುವಂತೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ

Suddi Udaya

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ 25 ನೇ ವರ್ಷದ ಬೆಳ್ಳಿಹಬ್ಬ ಸಂಭ್ರಮ: ಏಕಾಹ ಭಜನಾ ಕಾರ್ಯಕ್ರಮ ಮತ್ತು 45 ಭಜನಾ ತಂಡಗಳಿಂದ ಭಜನಾ ಕಮ್ಮಟೋತ್ಸವ, ಸಾಧಕರಿಗೆ ಸನ್ಮಾನ

Suddi Udaya
error: Content is protected !!