24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಫೋಟೊಗ್ರಾಫಿ ಸ್ಫರ್ಧೆ: ಡಾ. ಚಂದ್ರಹಾಸ್ ಚಾರ್ಮಾಡಿ ಪ್ರಥಮ

ಬೆಳ್ತಂಗಡಿ: ಬ್ಲಾಕ್ ಬಾಕ್ಸ್ ಸ್ಟುಡಿಯೋ ಆಯೋಜಿಸಿದ ಆನ್ ಲೈನ್ ಫೋಟೊಗ್ರಾಫಿ ಸ್ಪರ್ಧೆಯಲ್ಲಿ ಡಾ. ಚಂದ್ರಹಾಸ್ ಚಾರ್ಮಾಡಿಯವರು ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.

ಡಾ|| ಡಿ.ವೀರೇಂದ್ರ ಹೆಗ್ಗಡೆ ಮತ್ತು ಡಾ|| ಹೇಮಾವತಿ ವೀ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅನಿಲ್ ಕುಮಾರ್ ಎಸ್.ಎಸ್. ರವರ ಪ್ರಧಾನ ಸಂಪಾದಕತ್ವದಲ್ಲಿ ಪ್ರಕಟಗೊಳ್ಳುತ್ತಿರುವ ರಾಜ್ಯದಾದ್ಯಂತ 8 ಲಕ್ಷ ಪ್ರಸರಣವನ್ನು ಹೊಂದಿರುವ ನಿರಂತರ’ ಪತ್ರಿಕೆಯ ಸಂಪಾದಕರಾದ ಡಾ.ಚಂದ್ರಹಾಸ್ ಚಾರ್ಮಾಡಿಯವರು ಕಳೆದ 15 ವರ್ಷಗಳಿಂದ ಸೌತ್ ಕೆನರಾ ಫೋಟೋಗ್ರಾಫರ್ಸ್ ಆಸೋಸಿಯೇಶನ್ ಬೆಳ್ತಂಗಡಿ ವಲಯದ ಸದಸ್ಯರಾಗಿದ್ದಾರೆ. ಬೆಳ್ತಂಗಡಿ ಪತ್ರಕರ್ತರ ಸಂಘದ ಸದಸ್ಯರು ಆಗಿರುವ ಇವರು ರಾಜ್ಯ ಸರಕಾರದ ಆಕ್ರೆಡೆಶನ್ ಪಡೆದಿರುವ ಪತ್ರಕರ್ತರಲ್ಲಿ ಓರ್ವರಾಗಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತ್ತಕೋತ್ತರ ಪದವಿ, ಕನ್ನಡದಲ್ಲಿ ಎಂ.ಎ., ಹಂಪಿ ವಿಶ್ವವಿದ್ಯಾನಿಲಯದಡಿ ಪಿಹೆಚ್‌.ಡಿ. ಪದವಿಯನ್ನು ಪಡೆದಿದ್ದಾರೆ.

ಇವರ ಸುಮಾರು ಎರಡು ಸಾವಿರದಷ್ಟು ಬರಹಗಳು ರಾಜ್ಯದ ಬೇರೆ ಬೇರೆ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ‘ನೂರೊಂದು ಯಶೋಗಾಥೆಗಳು’, ‘ನುಡಿಬರಹ’, ‘ಕೆರೆಯ ಕಥೆಗಳು’, ‘ಅಂಗಡಿ ಮಜಲು’ ಮುಂತಾದ ಪುಸ್ತಕಗಳನ್ನು ಪ್ರಕಟಿಸಿದ್ದಾರೆ‌. ಇವರಿಗೆ ಈಗಾಗಲೇ ಪತ್ರಕರ್ತರಿಗೆ ಕೊಡಲ್ಪಡುವ ಪ.ಗೋ.ಪ್ರಶಸ್ತಿ, ಸೌರಭ ರಾಜ್ಯ ಪ್ರಶಸ್ತಿ, ಕೆಡಬ್ಲ್ಯುಜೆ ಪ್ರಶಸ್ತಿಗಳು ದೊರೆತಿವೆ.

Related posts

ದೇಶದಲ್ಲಿ ನೋಂದಾವಣೆಯಾಗದಿರುವ ದೊಡ್ಡ ಸಂಸ್ಥೆ ಆರ್.ಎಸ್.ಎಸ್. ಮಾತ್ರ,: ಕೆಪಿಸಿಸಿ ವಕ್ತಾರ ಅಮಲ ರಾಮಚಂದ್ರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಕುಟುಂಬ ಸಮೇತರಾಗಿ ಭೇಟಿ

Suddi Udaya

ಅಳದಂಗಡಿಯಲ್ಲಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ, ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ

Suddi Udaya

ಮಾ. 13-14: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಜಾತ್ರೋತ್ಸವ : ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂಗಾಡಿ ಸಿ ಎ ಬ್ಯಾಂಕಿನ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಕೆ ಬಾಲಕೃಷ್ಣ ಗೌಡ ನಿಧನ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ರಾಜೀನಾಮೆ ಒತ್ತಾಯಿಸಿ ಬೆಳ್ತಂಗಡಿ ಬಿಜೆಪಿ ವತಿಯಿಂದ ಪ್ರತಿಭಟನೆ

Suddi Udaya
error: Content is protected !!