ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2025-26ನೇ ಶೈಕ್ಷಣಿಕ ವರ್ಷದ ಕ್ರೀಡಾಕೂಟವನ್ನು ಮಾ.6ರಂದು ನಡೆಸಲಾಯಿತು.

ಕಾಲೇಜಿನ ಪ್ರಾಂಶುಪಾಲ ಪ್ರೊ. ಸುರೇಶ್.ವಿ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಆಟಗಾರ, ಸರಕಾರಿ ಪ್ರೌಢಶಾಲೆ ಗುರುವಾಯನಕೆರೆಯ ದೈಹಿಕ ಶಿಕ್ಷಣ ಶಿಕ್ಷಕ ವೆಂಕಟೇಶ್ ಮಾತನಾಡಿ ಕ್ರೀಡೆಯ ಮಹತ್ವವನ್ನು ತಿಳಿಸುತ್ತಾ “ಉತ್ತಮ ಆರೋಗ್ಯಕ್ಕಾಗಿ ಕ್ರೀಡೆಯು ಅತ್ಯವಶ್ಯಕ” ಎಂದು ತಿಳಿಸಿದರು.

ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಪದ್ಮನಾಭ ಕೆ. , IQAC ಸಂಚಾಲಕ ಡಾ. ಕುಶಾಲಪ್ಪ ಎಸ್. , ಸ್ನಾತಕೋತ್ತರ ವಿಭಾಗದ ಸಂಚಾಲಕ ಡಾ. ರವಿ ಎಂ. ಏನ್. , ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ರಾಧಾಕೃಷ್ಣ ಹೆಚ್. ಬಿ. ಹಾಗೂ ವಿದ್ಯಾರ್ಥಿ ಕ್ರೀಡಾ ಪ್ರತಿನಿಧಿಗಳಾದ ವಿಘ್ನೇಶ್ ದ್ವಿತೀಯ ಎಂ.ಎ, ಹೇಮಂತ್ ತೃತೀಯ ಬಿ.ಎ, ಮಂಜುಳಾ ತೃತೀಯ ಬಿ.ಕಾಂ., ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಪಥಸಂಚಲನವನ್ನು ನಿರ್ವಹಣಾ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ದಿವ್ಯ ಪ್ರಭು ನಡೆಸಿದರು. ವೀಕ್ಷಿತಾ ಸ್ವಾಗತಿಸಿ, ದೀಪಾ ಕ್ರೀಡಾ ಪ್ರತಿಜ್ಞೆಯನ್ನು ಬೋಧಿಸಿದರು. ಸುಪ್ರಿಯಾ ಧನ್ಯವಾದವಿತ್ತರು, ಅನ್ವಿತಾ ಕಾರ್ಯಕ್ರಮ ನಿರೂಪಿಸಿದರು

Related posts

ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು: ಅಧ್ಯಕ್ಷರಾಗಿ ಕಿರಣ್‌ ಬುಡ್ಲೆಗುತ್ತು, ಕಾರ್ಯದರ್ಶಿಯಾಗಿ ನವೀನಚಂದ್ರ ಗೌಡ ಭೋಜಾರ

Suddi Udaya

ಡಿ.ಕೆ.ಆರ್‌.ಡಿ.ಎಸ್ ಮಹಿಳಾ ಸ್ವಸಹಾಯ ಸಂಘಗಳ ರಜತ ಮಹೋತ್ಸವ ಹಾಗೂ ವಿಶ್ವ ಮಹಿಳಾ ದಿನಾಚರಣೆ

Suddi Udaya

ಉಜಿರೆ: ಡಾ. ಬಿ. ಯಶೋವರ್ಮರ ಜನ್ಮದಿನ ಸ್ಮರಣಾರ್ಥ ವಿಚಾರಸಂಕಿರಣ

Suddi Udaya

ಆಗಸ್ಟ್ ತಿಂಗಳಿನಲ್ಲಿ ನಡೆಯಲಿರುವ NET-2024 ಮರು ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಿಂದ ಕ್ರ್ಯಾಶ್ ಕೋರ್ಸ್: ಜು.10 ರಿಂದ ಆನ್ಲೈನ್ ತರಗತಿಗಳು ಪ್ರಾರಂಭ

Suddi Udaya

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ನಮ್ಮ ಮನೆ ಶಾಖೆಯ ವಾರ್ಷಿಕೋತ್ಸವ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವಿದ್ಯಾರ್ಥಿ ಕವಿಗೋಷ್ಠಿ

Suddi Udaya
error: Content is protected !!