25.1 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಹಾವು ಕಡಿತ ಪ್ರಕರಣ-ಉಪ ಆರೋಗ್ಯ ಕೇಂದ್ರಗಳಲ್ಲಿ ತಕ್ಷಣದ ಚಿಕಿತ್ಸೆಗೆ ಕರುಣಾಕರ ಶಿಶಿಲರಿಂದ ಮನವಿ

ಬೆಳ್ತಂಗಡಿ: ತಾಲೂಕಿನ ಪಶ್ಚಿಮಘಟ್ಟದ ತಪ್ಪಲಿನಲ್ಲಿರುವ ಶಿಶಿಲ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹಾವು ಕಡಿತದ ಘಟನೆಗಳು ಹೆಚ್ಚಾಗಿ ಕಂಡುಬರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇತ್ತೀಚೆಗೆ ಶಿಶಿಲ ಗ್ರಾಮದಲ್ಲಿಯೇ ಒಂದು ತಿಂಗಳ ಅವಧಿಯಲ್ಲಿ ಮೂವರಿಗೆ ಹಾವು ಕಡಿದ ಘಟನೆ ನಡೆದಿದ್ದು, ಅವರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಇನ್ನೊಬ್ಬರು ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಳ್ಳದೆ ಚಿಕಿತ್ಸೆಯಲ್ಲಿ ಇದ್ದಾರೆ ಎಂದು ತಿಳಿದುಬಂದಿದೆ. ಈ ರೀತಿಯ ದುರ್ಘಟನೆಗಳಿಗೆ ಸೂಕ್ತ ಸಮಯದಲ್ಲಿ ಸರಿಯಾದ ಚಿಕಿತ್ಸೆ ದೊರೆಯದಿರುವುದೇ ಪ್ರಮುಖ ಕಾರಣವಾಗುತ್ತಿದೆ ಎಂಬ ಅಭಿಪ್ರಾಯ ಸ್ಥಳೀಯರಿಂದ ವ್ಯಕ್ತವಾಗುತ್ತಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಹಾವು ಕಡಿತದಂತಹ ತುರ್ತು ಸಂದರ್ಭಗಳಲ್ಲಿ ಸಮೀಪದಲ್ಲೇ ಅಗತ್ಯ ಚಿಕಿತ್ಸೆ ಲಭ್ಯವಿಲ್ಲದಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಆದ್ದರಿಂದ ಆರೋಗ್ಯ ಇಲಾಖೆ ತಕ್ಷಣ ಕ್ರಮ ಕೈಗೊಂಡು ಉಪ ಆರೋಗ್ಯ ಕೇಂದ್ರಗಳಲ್ಲಿ ರಕ್ತ ಪರೀಕ್ಷೆ ಹಾಗೂ ವಿಷಕಾರಿ ಹಾವುಗಳ ಕಡಿತಕ್ಕೆ ಒಳಗಾದವರಿಗೆ ನೀಡಬೇಕಾದ ಪ್ರಾಥಮಿಕ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಕುರಿತು ಕರುಣಾಕರ ಶಿಶಿಲ ಅವರು ಆರೋಗ್ಯ ಇಲಾಖೆಗೆ ಮನವಿ ಸಲ್ಲಿಸಿ, ಗ್ರಾಮೀಣ ಪ್ರದೇಶಗಳಲ್ಲಿ ಹಾವು ಕಡಿತದಂತಹ ತುರ್ತು ಪರಿಸ್ಥಿತಿಗಳಿಗೆ ತಕ್ಷಣ ಸ್ಪಂದಿಸುವ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ.

Related posts

ಕಳೆಂಜ: ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ್ ಆಗಿ ಧನಂಜಯ ಗೌಡ ಆಯ್ಕೆ

Suddi Udaya

ಸಿವಿಲ್‌ ಇಂಜಿನಿಯರಿಂಗ್‌ ಪ್ರಾಜೆಕ್ಟ್ ಆವಿಷ್ಕಾರಕ್ಕೆ ಇಂಗ್ಲೆಂಡ್‌ ಮೂಲದ ಪೇಟೆಂಟ್ ಲಭ್ಯ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ಪರ ಪ್ರತಿಬಂಧಕಾದೇಶ ಜಾರಿಗೊಳಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ಸೂಚನೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ತಾಲೂಕಿಗೆ ಶೇ. 94.18 ಫಲಿತಾಂಶ

Suddi Udaya

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಗೆ ರಾಷ್ಟ್ರೀಯ ಸಂಸ್ಥೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ನಿರ್ದೇಶಕ ಡಾ. ಕೆ. ಶರ್ಮ ಭೇಟಿ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್ ನಿಂದ ಹಿರಿಯ ಛಾಯಾಗ್ರಾಹಕ ಎನ್ ಎ ಗೋಪಾಲ್ ರಿಗೆ ಸನ್ಮಾನ

Suddi Udaya
error: Content is protected !!