36.1 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಹಾವು ಕಡಿತ ಪ್ರಕರಣ-ಉಪ ಆರೋಗ್ಯ ಕೇಂದ್ರಗಳಲ್ಲಿ ತಕ್ಷಣದ ಚಿಕಿತ್ಸೆಗೆ ಕರುಣಾಕರ ಶಿಶಿಲರಿಂದ ಮನವಿ

ಬೆಳ್ತಂಗಡಿ: ತಾಲೂಕಿನ ಪಶ್ಚಿಮಘಟ್ಟದ ತಪ್ಪಲಿನಲ್ಲಿರುವ ಶಿಶಿಲ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹಾವು ಕಡಿತದ ಘಟನೆಗಳು ಹೆಚ್ಚಾಗಿ ಕಂಡುಬರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇತ್ತೀಚೆಗೆ ಶಿಶಿಲ ಗ್ರಾಮದಲ್ಲಿಯೇ ಒಂದು ತಿಂಗಳ ಅವಧಿಯಲ್ಲಿ ಮೂವರಿಗೆ ಹಾವು ಕಡಿದ ಘಟನೆ ನಡೆದಿದ್ದು, ಅವರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಇನ್ನೊಬ್ಬರು ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಳ್ಳದೆ ಚಿಕಿತ್ಸೆಯಲ್ಲಿ ಇದ್ದಾರೆ ಎಂದು ತಿಳಿದುಬಂದಿದೆ. ಈ ರೀತಿಯ ದುರ್ಘಟನೆಗಳಿಗೆ ಸೂಕ್ತ ಸಮಯದಲ್ಲಿ ಸರಿಯಾದ ಚಿಕಿತ್ಸೆ ದೊರೆಯದಿರುವುದೇ ಪ್ರಮುಖ ಕಾರಣವಾಗುತ್ತಿದೆ ಎಂಬ ಅಭಿಪ್ರಾಯ ಸ್ಥಳೀಯರಿಂದ ವ್ಯಕ್ತವಾಗುತ್ತಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಹಾವು ಕಡಿತದಂತಹ ತುರ್ತು ಸಂದರ್ಭಗಳಲ್ಲಿ ಸಮೀಪದಲ್ಲೇ ಅಗತ್ಯ ಚಿಕಿತ್ಸೆ ಲಭ್ಯವಿಲ್ಲದಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಆದ್ದರಿಂದ ಆರೋಗ್ಯ ಇಲಾಖೆ ತಕ್ಷಣ ಕ್ರಮ ಕೈಗೊಂಡು ಉಪ ಆರೋಗ್ಯ ಕೇಂದ್ರಗಳಲ್ಲಿ ರಕ್ತ ಪರೀಕ್ಷೆ ಹಾಗೂ ವಿಷಕಾರಿ ಹಾವುಗಳ ಕಡಿತಕ್ಕೆ ಒಳಗಾದವರಿಗೆ ನೀಡಬೇಕಾದ ಪ್ರಾಥಮಿಕ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಕುರಿತು ಕರುಣಾಕರ ಶಿಶಿಲ ಅವರು ಆರೋಗ್ಯ ಇಲಾಖೆಗೆ ಮನವಿ ಸಲ್ಲಿಸಿ, ಗ್ರಾಮೀಣ ಪ್ರದೇಶಗಳಲ್ಲಿ ಹಾವು ಕಡಿತದಂತಹ ತುರ್ತು ಪರಿಸ್ಥಿತಿಗಳಿಗೆ ತಕ್ಷಣ ಸ್ಪಂದಿಸುವ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂತ ವಲಯದ ಭಜನಾ ಪರಿಷತ್ ಸಮಿತಿ ರಚನೆ

Suddi Udaya

ಅರಸಿನಮಕ್ಕಿ: ಎರಡನೇ ಬಾರಿಗೆ ಚುನಾಯಿತರಾಗಿರುವ ಶಾಸಕ ಹರೀಶ್ ಪೂಂಜರವರಿಗೆ ಕಾರ್ಯಕರ್ತರಿಂದ ಅಭಿನಂದನೆ ಮತ್ತು ಚುನಾವಣಾ ಅವಲೋಕನ ಸಭೆ

Suddi Udaya

ಅ.29: ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ:  ವಾಹನಗಳಿಗೆ ರಸ್ತೆ ಬದಲಾವಣೆ

Suddi Udaya

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya

ಜ್ವರದಿಂದ ಬಳಲಿ ಗಂಡಿಬಾಗಿಲಿನ ಯುವತಿ ಸಾವು

Suddi Udaya

ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿಡೊಂಜಿ ದಿನ’

Suddi Udaya
error: Content is protected !!