22.9 C
ಪುತ್ತೂರು, ಬೆಳ್ತಂಗಡಿ
March 12, 2026
ಧಾರ್ಮಿಕವರದಿ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ ಐತಿಹಾಸಿಕ “ಧರ್ಮಯಾನ” ಶೋಭಾಯಾತ್ರೆ: ಉಜಿರೆ ಉದ್ಯಮಿ ಕೆ. ಮೋಹನ್ ಕುಮಾರ್ ಅವರಿಗೆ “ಶ್ರೀ ಜನಾರ್ಧನ ವಿಭೂಷಣ ಗೌರವ”

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ ಐತಿಹಾಸಿಕ ಧರ್ಮಯಾನ ಶೋಭಾಯಾತ್ರೆಯು ಅತ್ಯಂತ ವಿಜೃಂಭಣೆಯಿಂದ ಸಾವಿರಾರು ಭಕ್ತರ ಕೂಡುವಿಕೆಯಿಂದ ನಡೆಯಿತು.

ಬ್ರಹ್ಮಕಲಶೋತ್ಸವ ಮತ್ತು ವಿಜಯ ಗೋಪುರದ ಪ್ರಧಾನ ಸಂಚಾಲಕರಾಗಿ ಸೇವೆ ಸಲ್ಲಿಸಿ, ಧರ್ಮಯಾನ ಹಾಗೂ ಸುಪ್ರಸಾದ ಭೋಜನಾಯದ ವೈಬೋಗ ಹೆಚ್ಚಿಸಿದ ಉಜಿರೆ ಉದ್ಯಮಿ ಕೆ. ಮೋಹನ್ ಕುಮಾರ್ ಅವರಿಗೆ ಧಾರ್ಮಿಕ ಸಭೆಯಲ್ಲಿ ಉಜಿರೆ ಶ್ರೀ ಜನಾರ್ಧನ ಕ್ಷೇತ್ರದಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು, “ಶ್ರೀ ಜನಾರ್ಧನ ವಿಭೂಷಣ ಗೌರವ” ನೀಡಿ ಗೌರವಿಸಿದರು.

ಕೆ.ಮೋಹನ್ ಕುಮಾರ್ ಅವರ ಮಾತೃಶ್ರೀ ಲೀಲಾವತಿ ಈ ಗೌರವ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಪಾದಂಗಳವರು,ಉಜಿರೆ ಶ್ರೀ ಸೋದೆ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದಂಗಳವರು,ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್,ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶೀಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ, ಶಾಸಕ ಹರೀಶ್ ಪೂಂಜ,ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾರ್ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರತಾಪಸಿಂಹ ನಾಯಕ್,ವಿಜಯ ಗೋಪುರ ನಿರ್ಮಾಣ ಸಮಿತಿ ಅಧ್ಯಕ್ಷ ಬರೋಡ ಶಶಿಧರ ಶೆಟ್ಟಿ ನವಶಕ್ತಿ ಹಾಗೂ ವಿವಧ ಕ್ಷೇತ್ರದ ಗಣ್ಯರು ಉಪಸ್ಥಿತರಿದ್ದರು.

Related posts

ಯುವವಾಹಿನಿ ಗ್ರಾಮ ಚಾವಡಿ-ಕೊಣಾಜೆ ಘಟಕದ ಸ್ಥಾಪಕ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಇಲಂತಿಲ ಆಯ್ಕೆ

Suddi Udaya

ಶಾಸಕ ಹರೀಶ್ ಪೂಂಜರಿಗೆ ಭಾ.ಜ.ಪ. ಬೆಳ್ತಂಗಡಿ ಮಂಡಲದಿಂದ ಗೌರವ

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

Suddi Udaya

ತೆಕ್ಕಾರು ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯ ಪ್ರವೇಶ ದ್ವಾರದ ಉದ್ಘಾಟನೆ

Suddi Udaya

ನೆರಿಯ : ಮನೆಯಂಗಳದಲ್ಲಿ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ

Suddi Udaya
error: Content is protected !!