July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಹಿಳಾ ಶ್ರಮಿಕರ ಸಂಗಮ – 2026 ಕಾರ್ಯಕ್ರಮ

ಬೆಳ್ತಂಗಡಿ: ರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಭಾರತೀಯ ಮಜ್ದೂರು ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಸಹಯೋಗದಲ್ಲಿ ಆಶಾ ಕಾರ್ಯಕರ್ತೆಯರ ಮಜ್ದೂರು ಸಂಘ, ಬಂಟ್ವಾಳ ತಾಲೂಕು ಇವರ ನೇತೃತ್ವದಲ್ಲಿ “ಮಹಿಳಾ ಶ್ರಮಿಕರ ಸಂಗಮ – 2026” ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಮ್ಮಯ್ಯ ಹೆಚ್.ಆರ್ ಉದ್ಘಾಟಿಸಿ ಮಾತನಾಡಿ, ಮಹಿಳೆಯರ ಆರೋಗ್ಯ ಮತ್ತು ಸಮಾಜದ ಆರೋಗ್ಯ ವ್ಯವಸ್ಥೆಯಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.

ಮುಖ್ಯ ವಕ್ತಾರರಾದ ಸಾಮಾಜಿಕ ಕಾರ್ಯಕರ್ತೆ ಮೀನಾಕ್ಷಿ ಅವರು ಮಾತನಾಡಿ, ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅಪಾರವಾಗಿದೆ ಎಂದರು.

ಭಾರತೀಯ ಮಜ್ದೂರು ಸಂಘ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ವಕೀಲ ಅನಿಲ್ ಕುಮಾರ್ ಬೆಳ್ತಂಗಡಿ ಮಾತನಾಡಿ ಆರೋಗ್ಯ ಕ್ಷೇತ್ರದಲ್ಲಿ ಆಶಾ ಕಾರ್ಯಕರ್ತೆಯರ ಸೇವೆ ಸಮಾಜಕ್ಕೆ ಅಮೂಲ್ಯವಾಗಿದೆ.ಭಾರತೀಯ ಮಜ್ದೂರು ಸಂಘ ದೇಶದ ಅತಿ ದೊಡ್ಡ ಕಾರ್ಮಿಕ ಸಂಘಟನೆಯಾಗಿದ್ದು,ಕಾರ್ಮಿಕರ ಹಿತ, ರಾಷ್ಟ್ರಹಿತ ಮತ್ತು ಸಮಾಜ ಹಿತ ಎಂಬ ತತ್ವದ ಮೇಲೆ ಸಂಘಟನೆ ಕಾರ್ಯನಿರ್ವಹಿಸುತ್ತಿದ್ದು ದೇಶದ ಕೋಟ್ಯಾಂತರ ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಶಾ ಕಾರ್ಯಕರ್ತೆಯರ ಮಜ್ದೂರು ಸಂಘ ಕರ್ನಾಟಕ ರಾಜ್ಯ ಕಾರ್ಯದರ್ಶಿ ರೇವತಿ ವಹಿಸಿದ್ದರು.

ಈ ಸಂದರ್ಭದಲ್ಲಿ ಹಲವು ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಹಿರಿಯ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು.
ಆಶಾ ಕಾರ್ಯಕರ್ತೆಯರ ಮಜ್ದೂರು ಸಂಘ ಅಧ್ಯಕ್ಷೆ ತುಳಸಿ ದೇವರಾಜ್ ಸ್ವಾಗತಿಸಿದರು.ಸುಜಾತ ವಂದಿಸಿದರು.ಡೀಲಾಕ್ಷಿ ನಿರೂಪಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನ ಸಹಭಾಗಿತ್ವದಲ್ಲಿ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16902 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಮೂಡಬಿದ್ರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಕುಕ್ಕೇಡಿ: ಮಡಿಲೊಟ್ಟು ನಿವಾಸಿ ಲಿಂಗಮ್ಮ ದೇವಾಡಿಗ ನಿಧನ

Suddi Udaya

ಸುದ್ದಿ ಉದಯ ವಾರಪತ್ರಿಕೆ ಲೋಕಾರ್ಪಣೆ ನೂತನ ಕಚೇರಿಯ ಉದ್ಘಾಟನೆ
ಯೂಟ್ಯೂಬ್ ಮತ್ತು ವೆಬ್‌ಸೈಟ್‌ಗೆ ಚಾಲನೆ

Suddi Udaya

ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ಮತ್ತು ಎಸ್.ಡಿ.ಎಂ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಜಂಟಿ ಆಶ್ರಯ:ಬೆಳ್ತಂಗಡಿ ಸಂತಕಟ್ಟೆ ಮತ್ತು ಬಸ್ ನಿಲ್ದಾಣದ ಬಳಿ ಮತದಾನ ಜಾಗೃತಿ ಬೀದಿ ನಾಟಕ

Suddi Udaya

ಅಗ್ರಗಣ್ಯ ಸ್ವಾತಂತ್ರ್ಯ ಹೋರಾಟಗಾರ ಉಪ್ಪಿನಂಗಡಿಯ ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣೆ

Suddi Udaya
error: Content is protected !!