July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿಯಲ್ಲಿ ನಾಟಿ ಕೋಳಿ ಮೊಟ್ಟೆ ಸಾಕಾಣಿಕೆ ತರಬೇತಿ

ಅರಸಿನಮಕ್ಕಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ ಗ್ರಾಮ ಪಂಚಾಯತ್ ಅರಸಿನಮಕ್ಕಿ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟ ಅರಸಿನಮಕ್ಕಿ ಇದರ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ನಾಟಿ ಕೋಳಿ ಮೊಟ್ಟೆ ಸಾಕಾಣಿಕೆ ತರಬೇತಿಯನ್ನು ಮಾ.೧೦ರಂದು ಸಿಎ ಬ್ಯಾಂಕ್ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷೆ ಬಿಂದು ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಜಿಲ್ಲಾ ತರಬೇತಿ ಕೇಂದ್ರದ ಕೃಷಿ ಅಧಿಕಾರಿ ಗಣೇಶ್ ಅಡಿಗ ಮಾತನಾಡಿ ನಾಟಿ ಕೋಳಿ ಮೊಟ್ಟೆ ತರಬೇತಿಯ ಬಗ್ಗೆ ಇಲಾಖೆಯಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಪ್ರಸ್ತಾವಿಸಿದರು.

ಹತ್ಯಡ್ಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯ್ಕ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಕೊಕ್ಕಡ ವಲಯ ಮೇಲ್ವಿಚಾರಕಿ ವೀಣಾಶ್ರೀ ಸ್ವ-ಉದ್ಯೋಗ ಮಾಡಲು ಸಿಐಎಫ್ ಲೋನ್, ಬ್ಯಾಂಕ್ ಲೋನ್ ಸಂಜೀವಿನಿ ಮುಖಾಂತರ ಕೇಂದ್ರ ಸರಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ ನಾಟಿ ಕೋಳಿ ಮೊಟ್ಟೆ ತರಬೇತಿಯನ್ನು ಸದುಪಯೋಗ ಪಡೆದುಕೊಳ್ಳಿ ಎಂಬುದಾಗಿ ಹೇಳಿದರು.

ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಧೀರ್ ಎಂ.ಎಸ್. ಮಾತನಾಡಿ ಸಂಜೀವಿನಿ ಸದಸ್ಯರಿಗೆ ಕೇಂದ್ರ ಸರಕಾರದಿಂದ ವಿವಿಧ ಯೋಜನೆಗಳು, ವಿವಿಧ ತರಬೇತಿಗಳಲ್ಲಿ ಮಹಿಳೆಯರು ಸ್ವಾವಲಂಬಿ ಆಗಬೇಕು ಎಂದರು.

ಸಂಪನ್ಮೂಲ ವ್ಯಕ್ತಿ ನೆರಿಯ ಪಶು ವ್ಯೆದ್ಯಾಧಿಕಾರಿ ಡಾ| ಯತೀಶ್ ನಾಟಿ ಕೋಳಿ ಮೊಟ್ಟೆ ಸಾಕಾಣಿಕೆ ಬಗ್ಗೆ ತರಬೇತಿ ನೀಡಿದರು.
ಎಲ್‌ಸಿಆರ್‌ಪಿ ಅಮಿತ, ಬಿಸಿ ಸಖಿ ರೇವತಿ, ಕೃಷಿ ಸಖಿ ಹರಿಣಾಕ್ಷಿ, ಒಕ್ಕೂಟದ ಕಾರ್ಯದರ್ಶಿ, ಉಪಾಧ್ಯಕ್ಷರು, ಸದಸ್ಯರು, ಅಂಗನವಾಡಿ ಕಾರ್ಯಕರ್ತೆ, ಶಿಶಿಲದ ಎಲ್‌ಸಿಆರ್‌ಪಿ, ಕೃಷಿ ಸಖಿ, ಶಿಶಿಲದ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

ಮೋಹಿನಿ ಪ್ರಾರ್ಥನೆ ಹಾಡಿದರು. ಹೇಮಲತಾ ನಿರೂಪಿಸಿ, ನೀತಾ ಸ್ವಾಗತಿಸಿ, ಪಶು ಸಖಿ ವೇದಾವತಿ ವಂದಿಸಿದರು.

Related posts

ಬೆಳಾಲು ಪ್ರೌಢಶಾಲೆ ಪೋಷಕರ ಸಮಾವೇಶ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವೈದ್ಯಕೀಯ ನೆರವು

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಮಂತ್ರಿ, ಉಪರಾಷ್ಟ್ರಪತಿ ಹಾಗೂ ವಿವಿಧ ಗಣ್ಯರಿಂದ ಶುಭಾಶಯ

Suddi Udaya

ಡಿ.17: ಬೆಳ್ತಂಗಡಿ ತಾಲೂಕಿನ 18ನೇ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಪ್ರೊ.ಎ. ಕೃಷ್ಣಪ್ಪ ಪೂಜಾರಿ ಆಯ್ಕೆ

Suddi Udaya

ಟೀಂ ಅಭಯಹಸ್ತ ಪ್ರಧಾನ ಸಂಚಾಲಕ ಸಂದೀಪ್ ಸುಂದರ್ ನೀರಲ್ಕೆರವರಿಂದ ಸುಲ್ಕೇರಿಮೊಗ್ರು ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya
error: Content is protected !!