July 27, 2026
ಧಾರ್ಮಿಕವರದಿ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ ಐತಿಹಾಸಿಕ “ಧರ್ಮಯಾನ” ಶೋಭಾಯಾತ್ರೆ: ಉಜಿರೆ ಉದ್ಯಮಿ ಕೆ. ಮೋಹನ್ ಕುಮಾರ್ ಅವರಿಗೆ “ಶ್ರೀ ಜನಾರ್ಧನ ವಿಭೂಷಣ ಗೌರವ”

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ ಐತಿಹಾಸಿಕ ಧರ್ಮಯಾನ ಶೋಭಾಯಾತ್ರೆಯು ಅತ್ಯಂತ ವಿಜೃಂಭಣೆಯಿಂದ ಸಾವಿರಾರು ಭಕ್ತರ ಕೂಡುವಿಕೆಯಿಂದ ನಡೆಯಿತು.

ಬ್ರಹ್ಮಕಲಶೋತ್ಸವ ಮತ್ತು ವಿಜಯ ಗೋಪುರದ ಪ್ರಧಾನ ಸಂಚಾಲಕರಾಗಿ ಸೇವೆ ಸಲ್ಲಿಸಿ, ಧರ್ಮಯಾನ ಹಾಗೂ ಸುಪ್ರಸಾದ ಭೋಜನಾಯದ ವೈಬೋಗ ಹೆಚ್ಚಿಸಿದ ಉಜಿರೆ ಉದ್ಯಮಿ ಕೆ. ಮೋಹನ್ ಕುಮಾರ್ ಅವರಿಗೆ ಧಾರ್ಮಿಕ ಸಭೆಯಲ್ಲಿ ಉಜಿರೆ ಶ್ರೀ ಜನಾರ್ಧನ ಕ್ಷೇತ್ರದಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು, “ಶ್ರೀ ಜನಾರ್ಧನ ವಿಭೂಷಣ ಗೌರವ” ನೀಡಿ ಗೌರವಿಸಿದರು.

ಕೆ.ಮೋಹನ್ ಕುಮಾರ್ ಅವರ ಮಾತೃಶ್ರೀ ಲೀಲಾವತಿ ಈ ಗೌರವ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಪಾದಂಗಳವರು,ಉಜಿರೆ ಶ್ರೀ ಸೋದೆ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದಂಗಳವರು,ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್,ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶೀಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ, ಶಾಸಕ ಹರೀಶ್ ಪೂಂಜ,ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾರ್ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರತಾಪಸಿಂಹ ನಾಯಕ್,ವಿಜಯ ಗೋಪುರ ನಿರ್ಮಾಣ ಸಮಿತಿ ಅಧ್ಯಕ್ಷ ಬರೋಡ ಶಶಿಧರ ಶೆಟ್ಟಿ ನವಶಕ್ತಿ ಹಾಗೂ ವಿವಧ ಕ್ಷೇತ್ರದ ಗಣ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಹರೀಶ್ ಪೂಂಜರವರ ಹೆಸರಿನಲ್ಲಿ ನಕಲಿ ಸಂದೇಶ ರವಾನೆ: ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಿಜೆಪಿ ಸಾಮಾಜಿಕ ಜಾಲತಾಣದ ಪ್ರಕೋಷ್ಟದಿಂದ ದೂರು

Suddi Udaya

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಕಾಲೇಜು ಪ್ರಥಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಮೆಸ್ಕಾಂನಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಗೇಶ್ ಕುಲಾಲ್ ರಿಗೆ ಗೌರವಾರ್ಪಣೆ

Suddi Udaya

ಬಾನಂಗಳದಲ್ಲಿ ಗೋಚರಿಸಿದ ಸೂಪರ್ ಬ್ಲೂಮೂನ್ ಸೆರೆಹಿಡಿದ ಅಂಡಿಂಜೆಯ ಛಾಯಾಗ್ರಹಕ ಚಂದ್ರಹಾಸ ಹೆಬ್ಬಾರ್

Suddi Udaya

ಪುದುವೆಟ್ಟಿನಲ್ಲಿ ವಿಕಲಚೇತನರ ಸಮನ್ವಯ ಗ್ರಾಮಸಭೆ

Suddi Udaya
error: Content is protected !!