26.1 C
ಪುತ್ತೂರು, ಬೆಳ್ತಂಗಡಿ
June 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಹಿಳಾ ಶ್ರಮಿಕರ ಸಂಗಮ – 2026 ಕಾರ್ಯಕ್ರಮ

ಬೆಳ್ತಂಗಡಿ: ರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಭಾರತೀಯ ಮಜ್ದೂರು ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಸಹಯೋಗದಲ್ಲಿ ಆಶಾ ಕಾರ್ಯಕರ್ತೆಯರ ಮಜ್ದೂರು ಸಂಘ, ಬಂಟ್ವಾಳ ತಾಲೂಕು ಇವರ ನೇತೃತ್ವದಲ್ಲಿ “ಮಹಿಳಾ ಶ್ರಮಿಕರ ಸಂಗಮ – 2026” ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಮ್ಮಯ್ಯ ಹೆಚ್.ಆರ್ ಉದ್ಘಾಟಿಸಿ ಮಾತನಾಡಿ, ಮಹಿಳೆಯರ ಆರೋಗ್ಯ ಮತ್ತು ಸಮಾಜದ ಆರೋಗ್ಯ ವ್ಯವಸ್ಥೆಯಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.

ಮುಖ್ಯ ವಕ್ತಾರರಾದ ಸಾಮಾಜಿಕ ಕಾರ್ಯಕರ್ತೆ ಮೀನಾಕ್ಷಿ ಅವರು ಮಾತನಾಡಿ, ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅಪಾರವಾಗಿದೆ ಎಂದರು.

ಭಾರತೀಯ ಮಜ್ದೂರು ಸಂಘ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ವಕೀಲ ಅನಿಲ್ ಕುಮಾರ್ ಬೆಳ್ತಂಗಡಿ ಮಾತನಾಡಿ ಆರೋಗ್ಯ ಕ್ಷೇತ್ರದಲ್ಲಿ ಆಶಾ ಕಾರ್ಯಕರ್ತೆಯರ ಸೇವೆ ಸಮಾಜಕ್ಕೆ ಅಮೂಲ್ಯವಾಗಿದೆ.ಭಾರತೀಯ ಮಜ್ದೂರು ಸಂಘ ದೇಶದ ಅತಿ ದೊಡ್ಡ ಕಾರ್ಮಿಕ ಸಂಘಟನೆಯಾಗಿದ್ದು,ಕಾರ್ಮಿಕರ ಹಿತ, ರಾಷ್ಟ್ರಹಿತ ಮತ್ತು ಸಮಾಜ ಹಿತ ಎಂಬ ತತ್ವದ ಮೇಲೆ ಸಂಘಟನೆ ಕಾರ್ಯನಿರ್ವಹಿಸುತ್ತಿದ್ದು ದೇಶದ ಕೋಟ್ಯಾಂತರ ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಶಾ ಕಾರ್ಯಕರ್ತೆಯರ ಮಜ್ದೂರು ಸಂಘ ಕರ್ನಾಟಕ ರಾಜ್ಯ ಕಾರ್ಯದರ್ಶಿ ರೇವತಿ ವಹಿಸಿದ್ದರು.

ಈ ಸಂದರ್ಭದಲ್ಲಿ ಹಲವು ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಹಿರಿಯ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು.
ಆಶಾ ಕಾರ್ಯಕರ್ತೆಯರ ಮಜ್ದೂರು ಸಂಘ ಅಧ್ಯಕ್ಷೆ ತುಳಸಿ ದೇವರಾಜ್ ಸ್ವಾಗತಿಸಿದರು.ಸುಜಾತ ವಂದಿಸಿದರು.ಡೀಲಾಕ್ಷಿ ನಿರೂಪಿಸಿದರು.

Related posts

ಬಂದಾರು: ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಮುಂಡೂರು ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಸಿಇಟಿ ಫಲಿತಾಂಶ : ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ರ‍್ಯಾಂಕ್

Suddi Udaya

ರೂ. 3ಕೋಟಿ ವೆಚ್ಚದಲ್ಲಿ ನಡ ಗ್ರಾಮದ ಪಡ್ಪು- ಕನ್ಯಾಡಿ- ಭೀಮಂಡೆ ಕಾಂಕ್ರೀಟಿಕರಣಗೊಳಿಸಿದ ರಸ್ತೆಯ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳನ್ನು ಮೆಚ್ಚಿ ಉಜಿರೆಯಲ್ಲಿ 3 ಹೊಸ ಸಂಘ ರಚನೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ರಾಷ್ಟ್ರ ಪತಿ ಮೊಮ್ಮಗ ಇಂದ್ರಜಿತ್ ಸಿಂಗ್ ಭೇಟಿ

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಹದಿನೇಳು ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿವೇತನ

Suddi Udaya
error: Content is protected !!